ಬ್ರೇಕಿಂಗ್ ನ್ಯೂಸ್
08-01-21 05:12 pm Headline Karnataka News Network ದೇಶ - ವಿದೇಶ
ದುಬೈ, ಜ.8 : ಕುಂದಾಪುರ ಮೂಲದ ದುಬೈ ಉದ್ಯಮಿ, ಫಾರ್ಚೂನ್ ಗ್ರೂಪ್ ಆಫ್ ಹೊಟೇಲ್ಸ್ ಮಾಲೀಕ ವಕ್ವಾಡಿ ಪ್ರವೀಣ್ ಶೆಟ್ಟಿ ಅವರಿಗೆ ದುಬೈನಲ್ಲಿ ಕೊರೊನಾ ಸಂದರ್ಭದಲ್ಲಿ ಸಲ್ಲಿಸಿರುವ ಅಪೂರ್ವ ಸೇವೆಗಾಗಿ ಅಲ್ಲಿನ ಸರಕಾರ ಹತ್ತು ವರ್ಷಗಳ ಅವಧಿಗೆ ಗೋಲ್ಡನ್ ವೀಸಾ ನೀಡಿ ಗೌರವಿಸಿದೆ.
ದುಬೈನಲ್ಲಿ ಫಾರ್ಚೂನ್ ಸಮೂಹದ ಏಳು ಹೊಟೇಲ್ ಗಳು ಕಾರ್ಯಾಚರಿಸುತ್ತಿದೆ. ಈ ನಡುವೆ, ಕಳೆದ ಅಕ್ಟೋಬರ್ ತಿಂಗಳಲ್ಲಿ ಮತ್ತೊಂದು ಫೋರ್ ಸ್ಟಾರ್ ಹೊಟೇಲ್ ಒಂದನ್ನು ಆರಂಭಿಸಲಾಗಿದೆ. ಈ ಹೊಟೇಲಿಗೆ ದುಬೈ ಸರಕಾರದ ಟೂರಿಸಂ ಇಲಾಖೆಯ (ಡೈರೆಕ್ಟರ್ ಜರ್ನಲ್ ಆಫ್ ಡಿಟಿಸಿಎಂ) ಡಿಜಿಎಂ ಹೆಲಾಲ್ ಸಯೀದ್ ಅಲ್ ಮರ್ರಿ ಭೇಟಿ ನೀಡಿದ್ದು, ಹೊಟೇಲ್ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ ಭಾರತೀಯ ಮೂಲದವರ ಸ್ಟಾರ್ ಹೊಟೇಲ್ ಗಳಿಗೆ ಅಲ್ಲಿನ ಶೇಖ್ ಗಳು ಭೇಟಿಗೆ ಬರುವುದಿಲ್ಲ. ಆದರೆ, ಕೊರೊನಾ ಬಿಕ್ಕಟ್ಟಿನ ಮಧ್ಯೆ ಸ್ಟಾರ್ ಹೊಟೇಲ್ ಆರಂಭಿಸಿ, ಸಾವಿರಾರು ಜನರಿಗೆ ಉದ್ಯೋಗ ನೀಡಿದ ವಿಚಾರದಲ್ಲಿ ಅಲ್ಲಿನ ಸರಕಾರದಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಇದಕ್ಕಾಗಿ ಹೊಟೇಲಿಗೆ ಆಗಮಿಸಿ, ಎಲ್ಲ ವ್ಯವಸ್ಥೆಗಳನ್ನು ನೋಡಿದ್ದಲ್ಲದೆ, ಮಾಲೀಕ ಪ್ರವೀಣ್ ಶೆಟ್ಟಿ ಅವರಿಗೆ ಅಪೂರ್ವ ಉಡುಗೊರೆ ನೀಡಿದ್ದಾರೆ.
ಕೊರೊನಾದಂತಹ ಸವಾಲಿನ ನಡುವೆಯೇ ಇಂತಹದ್ದೊಂದು ಭವ್ಯವಾದ ಹೊಟೇಲ್ ನಿರ್ಮಾಣ ಮಾಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಸಯೀದ್ ಅಲ್ ಮರ್ರಿ, ದುಬೈಯಲ್ಲಿ ಯಾವುದೇ ಸಹಕಾರ ಬೇಕಾದರೂ ಮಾಡುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಇದರ ಜೊತೆಗೆ ಫಾರ್ಚೂನ್ ಗ್ರೂಪ್ ಸಂಸ್ಥೆಯ ಪ್ರತಿಯೊಬ್ಬರಿಗೂ ಉಚಿತ ಕೋವಿಡ್ ಲಸಿಕೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ಅವರ ಸಹಕಾರಕ್ಕೆ ಆಭಾರಿಯಾಗಿದ್ದೇವೆ ಎಂಬುದಾಗಿ ದುಬೈನಲ್ಲಿರುವ ಫಾರ್ಚೂನ್ ಫ್ಲಾಜಾ ಹೊಟೇಲ್ ಮ್ಯಾನೇಜರ್ ಹರೀಶ್ ಶೆಟ್ಟಿ 'ಹೆಡ್ ಲೈನ್ ಕರ್ನಾಟಕ'ಕ್ಕೆ ತಿಳಿಸಿದ್ದಾರೆ.
NRI entrepreneur Praveen Kumar Shetty of Fortune Groups of hotel receives 10-year golden visa from Dubai govt by his Excellency Helal Saeed Al Marri the Director-General of DTCM, Dubai
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm