ಬ್ರೇಕಿಂಗ್ ನ್ಯೂಸ್
08-01-21 05:12 pm Headline Karnataka News Network ದೇಶ - ವಿದೇಶ
ದುಬೈ, ಜ.8 : ಕುಂದಾಪುರ ಮೂಲದ ದುಬೈ ಉದ್ಯಮಿ, ಫಾರ್ಚೂನ್ ಗ್ರೂಪ್ ಆಫ್ ಹೊಟೇಲ್ಸ್ ಮಾಲೀಕ ವಕ್ವಾಡಿ ಪ್ರವೀಣ್ ಶೆಟ್ಟಿ ಅವರಿಗೆ ದುಬೈನಲ್ಲಿ ಕೊರೊನಾ ಸಂದರ್ಭದಲ್ಲಿ ಸಲ್ಲಿಸಿರುವ ಅಪೂರ್ವ ಸೇವೆಗಾಗಿ ಅಲ್ಲಿನ ಸರಕಾರ ಹತ್ತು ವರ್ಷಗಳ ಅವಧಿಗೆ ಗೋಲ್ಡನ್ ವೀಸಾ ನೀಡಿ ಗೌರವಿಸಿದೆ.

ದುಬೈನಲ್ಲಿ ಫಾರ್ಚೂನ್ ಸಮೂಹದ ಏಳು ಹೊಟೇಲ್ ಗಳು ಕಾರ್ಯಾಚರಿಸುತ್ತಿದೆ. ಈ ನಡುವೆ, ಕಳೆದ ಅಕ್ಟೋಬರ್ ತಿಂಗಳಲ್ಲಿ ಮತ್ತೊಂದು ಫೋರ್ ಸ್ಟಾರ್ ಹೊಟೇಲ್ ಒಂದನ್ನು ಆರಂಭಿಸಲಾಗಿದೆ. ಈ ಹೊಟೇಲಿಗೆ ದುಬೈ ಸರಕಾರದ ಟೂರಿಸಂ ಇಲಾಖೆಯ (ಡೈರೆಕ್ಟರ್ ಜರ್ನಲ್ ಆಫ್ ಡಿಟಿಸಿಎಂ) ಡಿಜಿಎಂ ಹೆಲಾಲ್ ಸಯೀದ್ ಅಲ್ ಮರ್ರಿ ಭೇಟಿ ನೀಡಿದ್ದು, ಹೊಟೇಲ್ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ ಭಾರತೀಯ ಮೂಲದವರ ಸ್ಟಾರ್ ಹೊಟೇಲ್ ಗಳಿಗೆ ಅಲ್ಲಿನ ಶೇಖ್ ಗಳು ಭೇಟಿಗೆ ಬರುವುದಿಲ್ಲ. ಆದರೆ, ಕೊರೊನಾ ಬಿಕ್ಕಟ್ಟಿನ ಮಧ್ಯೆ ಸ್ಟಾರ್ ಹೊಟೇಲ್ ಆರಂಭಿಸಿ, ಸಾವಿರಾರು ಜನರಿಗೆ ಉದ್ಯೋಗ ನೀಡಿದ ವಿಚಾರದಲ್ಲಿ ಅಲ್ಲಿನ ಸರಕಾರದಿಂದ ಮೆಚ್ಚುಗೆ ವ್ಯಕ್ತವಾಗಿದೆ.


ಇದಕ್ಕಾಗಿ ಹೊಟೇಲಿಗೆ ಆಗಮಿಸಿ, ಎಲ್ಲ ವ್ಯವಸ್ಥೆಗಳನ್ನು ನೋಡಿದ್ದಲ್ಲದೆ, ಮಾಲೀಕ ಪ್ರವೀಣ್ ಶೆಟ್ಟಿ ಅವರಿಗೆ ಅಪೂರ್ವ ಉಡುಗೊರೆ ನೀಡಿದ್ದಾರೆ.

ಕೊರೊನಾದಂತಹ ಸವಾಲಿನ ನಡುವೆಯೇ ಇಂತಹದ್ದೊಂದು ಭವ್ಯವಾದ ಹೊಟೇಲ್ ನಿರ್ಮಾಣ ಮಾಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಸಯೀದ್ ಅಲ್ ಮರ್ರಿ, ದುಬೈಯಲ್ಲಿ ಯಾವುದೇ ಸಹಕಾರ ಬೇಕಾದರೂ ಮಾಡುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಇದರ ಜೊತೆಗೆ ಫಾರ್ಚೂನ್ ಗ್ರೂಪ್ ಸಂಸ್ಥೆಯ ಪ್ರತಿಯೊಬ್ಬರಿಗೂ ಉಚಿತ ಕೋವಿಡ್ ಲಸಿಕೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ಅವರ ಸಹಕಾರಕ್ಕೆ ಆಭಾರಿಯಾಗಿದ್ದೇವೆ ಎಂಬುದಾಗಿ ದುಬೈನಲ್ಲಿರುವ ಫಾರ್ಚೂನ್ ಫ್ಲಾಜಾ ಹೊಟೇಲ್ ಮ್ಯಾನೇಜರ್ ಹರೀಶ್ ಶೆಟ್ಟಿ 'ಹೆಡ್ ಲೈನ್ ಕರ್ನಾಟಕ'ಕ್ಕೆ ತಿಳಿಸಿದ್ದಾರೆ.
NRI entrepreneur Praveen Kumar Shetty of Fortune Groups of hotel receives 10-year golden visa from Dubai govt by his Excellency Helal Saeed Al Marri the Director-General of DTCM, Dubai
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am