ಬ್ರೇಕಿಂಗ್ ನ್ಯೂಸ್
08-01-21 05:12 pm Headline Karnataka News Network ದೇಶ - ವಿದೇಶ
ದುಬೈ, ಜ.8 : ಕುಂದಾಪುರ ಮೂಲದ ದುಬೈ ಉದ್ಯಮಿ, ಫಾರ್ಚೂನ್ ಗ್ರೂಪ್ ಆಫ್ ಹೊಟೇಲ್ಸ್ ಮಾಲೀಕ ವಕ್ವಾಡಿ ಪ್ರವೀಣ್ ಶೆಟ್ಟಿ ಅವರಿಗೆ ದುಬೈನಲ್ಲಿ ಕೊರೊನಾ ಸಂದರ್ಭದಲ್ಲಿ ಸಲ್ಲಿಸಿರುವ ಅಪೂರ್ವ ಸೇವೆಗಾಗಿ ಅಲ್ಲಿನ ಸರಕಾರ ಹತ್ತು ವರ್ಷಗಳ ಅವಧಿಗೆ ಗೋಲ್ಡನ್ ವೀಸಾ ನೀಡಿ ಗೌರವಿಸಿದೆ.

ದುಬೈನಲ್ಲಿ ಫಾರ್ಚೂನ್ ಸಮೂಹದ ಏಳು ಹೊಟೇಲ್ ಗಳು ಕಾರ್ಯಾಚರಿಸುತ್ತಿದೆ. ಈ ನಡುವೆ, ಕಳೆದ ಅಕ್ಟೋಬರ್ ತಿಂಗಳಲ್ಲಿ ಮತ್ತೊಂದು ಫೋರ್ ಸ್ಟಾರ್ ಹೊಟೇಲ್ ಒಂದನ್ನು ಆರಂಭಿಸಲಾಗಿದೆ. ಈ ಹೊಟೇಲಿಗೆ ದುಬೈ ಸರಕಾರದ ಟೂರಿಸಂ ಇಲಾಖೆಯ (ಡೈರೆಕ್ಟರ್ ಜರ್ನಲ್ ಆಫ್ ಡಿಟಿಸಿಎಂ) ಡಿಜಿಎಂ ಹೆಲಾಲ್ ಸಯೀದ್ ಅಲ್ ಮರ್ರಿ ಭೇಟಿ ನೀಡಿದ್ದು, ಹೊಟೇಲ್ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ ಭಾರತೀಯ ಮೂಲದವರ ಸ್ಟಾರ್ ಹೊಟೇಲ್ ಗಳಿಗೆ ಅಲ್ಲಿನ ಶೇಖ್ ಗಳು ಭೇಟಿಗೆ ಬರುವುದಿಲ್ಲ. ಆದರೆ, ಕೊರೊನಾ ಬಿಕ್ಕಟ್ಟಿನ ಮಧ್ಯೆ ಸ್ಟಾರ್ ಹೊಟೇಲ್ ಆರಂಭಿಸಿ, ಸಾವಿರಾರು ಜನರಿಗೆ ಉದ್ಯೋಗ ನೀಡಿದ ವಿಚಾರದಲ್ಲಿ ಅಲ್ಲಿನ ಸರಕಾರದಿಂದ ಮೆಚ್ಚುಗೆ ವ್ಯಕ್ತವಾಗಿದೆ.


ಇದಕ್ಕಾಗಿ ಹೊಟೇಲಿಗೆ ಆಗಮಿಸಿ, ಎಲ್ಲ ವ್ಯವಸ್ಥೆಗಳನ್ನು ನೋಡಿದ್ದಲ್ಲದೆ, ಮಾಲೀಕ ಪ್ರವೀಣ್ ಶೆಟ್ಟಿ ಅವರಿಗೆ ಅಪೂರ್ವ ಉಡುಗೊರೆ ನೀಡಿದ್ದಾರೆ.

ಕೊರೊನಾದಂತಹ ಸವಾಲಿನ ನಡುವೆಯೇ ಇಂತಹದ್ದೊಂದು ಭವ್ಯವಾದ ಹೊಟೇಲ್ ನಿರ್ಮಾಣ ಮಾಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಸಯೀದ್ ಅಲ್ ಮರ್ರಿ, ದುಬೈಯಲ್ಲಿ ಯಾವುದೇ ಸಹಕಾರ ಬೇಕಾದರೂ ಮಾಡುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಇದರ ಜೊತೆಗೆ ಫಾರ್ಚೂನ್ ಗ್ರೂಪ್ ಸಂಸ್ಥೆಯ ಪ್ರತಿಯೊಬ್ಬರಿಗೂ ಉಚಿತ ಕೋವಿಡ್ ಲಸಿಕೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ಅವರ ಸಹಕಾರಕ್ಕೆ ಆಭಾರಿಯಾಗಿದ್ದೇವೆ ಎಂಬುದಾಗಿ ದುಬೈನಲ್ಲಿರುವ ಫಾರ್ಚೂನ್ ಫ್ಲಾಜಾ ಹೊಟೇಲ್ ಮ್ಯಾನೇಜರ್ ಹರೀಶ್ ಶೆಟ್ಟಿ 'ಹೆಡ್ ಲೈನ್ ಕರ್ನಾಟಕ'ಕ್ಕೆ ತಿಳಿಸಿದ್ದಾರೆ.
NRI entrepreneur Praveen Kumar Shetty of Fortune Groups of hotel receives 10-year golden visa from Dubai govt by his Excellency Helal Saeed Al Marri the Director-General of DTCM, Dubai
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm