ಬ್ರೇಕಿಂಗ್ ನ್ಯೂಸ್
08-01-21 05:12 pm Headline Karnataka News Network ದೇಶ - ವಿದೇಶ
ದುಬೈ, ಜ.8 : ಕುಂದಾಪುರ ಮೂಲದ ದುಬೈ ಉದ್ಯಮಿ, ಫಾರ್ಚೂನ್ ಗ್ರೂಪ್ ಆಫ್ ಹೊಟೇಲ್ಸ್ ಮಾಲೀಕ ವಕ್ವಾಡಿ ಪ್ರವೀಣ್ ಶೆಟ್ಟಿ ಅವರಿಗೆ ದುಬೈನಲ್ಲಿ ಕೊರೊನಾ ಸಂದರ್ಭದಲ್ಲಿ ಸಲ್ಲಿಸಿರುವ ಅಪೂರ್ವ ಸೇವೆಗಾಗಿ ಅಲ್ಲಿನ ಸರಕಾರ ಹತ್ತು ವರ್ಷಗಳ ಅವಧಿಗೆ ಗೋಲ್ಡನ್ ವೀಸಾ ನೀಡಿ ಗೌರವಿಸಿದೆ.

ದುಬೈನಲ್ಲಿ ಫಾರ್ಚೂನ್ ಸಮೂಹದ ಏಳು ಹೊಟೇಲ್ ಗಳು ಕಾರ್ಯಾಚರಿಸುತ್ತಿದೆ. ಈ ನಡುವೆ, ಕಳೆದ ಅಕ್ಟೋಬರ್ ತಿಂಗಳಲ್ಲಿ ಮತ್ತೊಂದು ಫೋರ್ ಸ್ಟಾರ್ ಹೊಟೇಲ್ ಒಂದನ್ನು ಆರಂಭಿಸಲಾಗಿದೆ. ಈ ಹೊಟೇಲಿಗೆ ದುಬೈ ಸರಕಾರದ ಟೂರಿಸಂ ಇಲಾಖೆಯ (ಡೈರೆಕ್ಟರ್ ಜರ್ನಲ್ ಆಫ್ ಡಿಟಿಸಿಎಂ) ಡಿಜಿಎಂ ಹೆಲಾಲ್ ಸಯೀದ್ ಅಲ್ ಮರ್ರಿ ಭೇಟಿ ನೀಡಿದ್ದು, ಹೊಟೇಲ್ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ ಭಾರತೀಯ ಮೂಲದವರ ಸ್ಟಾರ್ ಹೊಟೇಲ್ ಗಳಿಗೆ ಅಲ್ಲಿನ ಶೇಖ್ ಗಳು ಭೇಟಿಗೆ ಬರುವುದಿಲ್ಲ. ಆದರೆ, ಕೊರೊನಾ ಬಿಕ್ಕಟ್ಟಿನ ಮಧ್ಯೆ ಸ್ಟಾರ್ ಹೊಟೇಲ್ ಆರಂಭಿಸಿ, ಸಾವಿರಾರು ಜನರಿಗೆ ಉದ್ಯೋಗ ನೀಡಿದ ವಿಚಾರದಲ್ಲಿ ಅಲ್ಲಿನ ಸರಕಾರದಿಂದ ಮೆಚ್ಚುಗೆ ವ್ಯಕ್ತವಾಗಿದೆ.


ಇದಕ್ಕಾಗಿ ಹೊಟೇಲಿಗೆ ಆಗಮಿಸಿ, ಎಲ್ಲ ವ್ಯವಸ್ಥೆಗಳನ್ನು ನೋಡಿದ್ದಲ್ಲದೆ, ಮಾಲೀಕ ಪ್ರವೀಣ್ ಶೆಟ್ಟಿ ಅವರಿಗೆ ಅಪೂರ್ವ ಉಡುಗೊರೆ ನೀಡಿದ್ದಾರೆ.

ಕೊರೊನಾದಂತಹ ಸವಾಲಿನ ನಡುವೆಯೇ ಇಂತಹದ್ದೊಂದು ಭವ್ಯವಾದ ಹೊಟೇಲ್ ನಿರ್ಮಾಣ ಮಾಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಸಯೀದ್ ಅಲ್ ಮರ್ರಿ, ದುಬೈಯಲ್ಲಿ ಯಾವುದೇ ಸಹಕಾರ ಬೇಕಾದರೂ ಮಾಡುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಇದರ ಜೊತೆಗೆ ಫಾರ್ಚೂನ್ ಗ್ರೂಪ್ ಸಂಸ್ಥೆಯ ಪ್ರತಿಯೊಬ್ಬರಿಗೂ ಉಚಿತ ಕೋವಿಡ್ ಲಸಿಕೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ಅವರ ಸಹಕಾರಕ್ಕೆ ಆಭಾರಿಯಾಗಿದ್ದೇವೆ ಎಂಬುದಾಗಿ ದುಬೈನಲ್ಲಿರುವ ಫಾರ್ಚೂನ್ ಫ್ಲಾಜಾ ಹೊಟೇಲ್ ಮ್ಯಾನೇಜರ್ ಹರೀಶ್ ಶೆಟ್ಟಿ 'ಹೆಡ್ ಲೈನ್ ಕರ್ನಾಟಕ'ಕ್ಕೆ ತಿಳಿಸಿದ್ದಾರೆ.
NRI entrepreneur Praveen Kumar Shetty of Fortune Groups of hotel receives 10-year golden visa from Dubai govt by his Excellency Helal Saeed Al Marri the Director-General of DTCM, Dubai
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm