ಬ್ರೇಕಿಂಗ್ ನ್ಯೂಸ್
08-01-21 05:12 pm Headline Karnataka News Network ದೇಶ - ವಿದೇಶ
ದುಬೈ, ಜ.8 : ಕುಂದಾಪುರ ಮೂಲದ ದುಬೈ ಉದ್ಯಮಿ, ಫಾರ್ಚೂನ್ ಗ್ರೂಪ್ ಆಫ್ ಹೊಟೇಲ್ಸ್ ಮಾಲೀಕ ವಕ್ವಾಡಿ ಪ್ರವೀಣ್ ಶೆಟ್ಟಿ ಅವರಿಗೆ ದುಬೈನಲ್ಲಿ ಕೊರೊನಾ ಸಂದರ್ಭದಲ್ಲಿ ಸಲ್ಲಿಸಿರುವ ಅಪೂರ್ವ ಸೇವೆಗಾಗಿ ಅಲ್ಲಿನ ಸರಕಾರ ಹತ್ತು ವರ್ಷಗಳ ಅವಧಿಗೆ ಗೋಲ್ಡನ್ ವೀಸಾ ನೀಡಿ ಗೌರವಿಸಿದೆ.

ದುಬೈನಲ್ಲಿ ಫಾರ್ಚೂನ್ ಸಮೂಹದ ಏಳು ಹೊಟೇಲ್ ಗಳು ಕಾರ್ಯಾಚರಿಸುತ್ತಿದೆ. ಈ ನಡುವೆ, ಕಳೆದ ಅಕ್ಟೋಬರ್ ತಿಂಗಳಲ್ಲಿ ಮತ್ತೊಂದು ಫೋರ್ ಸ್ಟಾರ್ ಹೊಟೇಲ್ ಒಂದನ್ನು ಆರಂಭಿಸಲಾಗಿದೆ. ಈ ಹೊಟೇಲಿಗೆ ದುಬೈ ಸರಕಾರದ ಟೂರಿಸಂ ಇಲಾಖೆಯ (ಡೈರೆಕ್ಟರ್ ಜರ್ನಲ್ ಆಫ್ ಡಿಟಿಸಿಎಂ) ಡಿಜಿಎಂ ಹೆಲಾಲ್ ಸಯೀದ್ ಅಲ್ ಮರ್ರಿ ಭೇಟಿ ನೀಡಿದ್ದು, ಹೊಟೇಲ್ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ ಭಾರತೀಯ ಮೂಲದವರ ಸ್ಟಾರ್ ಹೊಟೇಲ್ ಗಳಿಗೆ ಅಲ್ಲಿನ ಶೇಖ್ ಗಳು ಭೇಟಿಗೆ ಬರುವುದಿಲ್ಲ. ಆದರೆ, ಕೊರೊನಾ ಬಿಕ್ಕಟ್ಟಿನ ಮಧ್ಯೆ ಸ್ಟಾರ್ ಹೊಟೇಲ್ ಆರಂಭಿಸಿ, ಸಾವಿರಾರು ಜನರಿಗೆ ಉದ್ಯೋಗ ನೀಡಿದ ವಿಚಾರದಲ್ಲಿ ಅಲ್ಲಿನ ಸರಕಾರದಿಂದ ಮೆಚ್ಚುಗೆ ವ್ಯಕ್ತವಾಗಿದೆ.


ಇದಕ್ಕಾಗಿ ಹೊಟೇಲಿಗೆ ಆಗಮಿಸಿ, ಎಲ್ಲ ವ್ಯವಸ್ಥೆಗಳನ್ನು ನೋಡಿದ್ದಲ್ಲದೆ, ಮಾಲೀಕ ಪ್ರವೀಣ್ ಶೆಟ್ಟಿ ಅವರಿಗೆ ಅಪೂರ್ವ ಉಡುಗೊರೆ ನೀಡಿದ್ದಾರೆ.

ಕೊರೊನಾದಂತಹ ಸವಾಲಿನ ನಡುವೆಯೇ ಇಂತಹದ್ದೊಂದು ಭವ್ಯವಾದ ಹೊಟೇಲ್ ನಿರ್ಮಾಣ ಮಾಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಸಯೀದ್ ಅಲ್ ಮರ್ರಿ, ದುಬೈಯಲ್ಲಿ ಯಾವುದೇ ಸಹಕಾರ ಬೇಕಾದರೂ ಮಾಡುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಇದರ ಜೊತೆಗೆ ಫಾರ್ಚೂನ್ ಗ್ರೂಪ್ ಸಂಸ್ಥೆಯ ಪ್ರತಿಯೊಬ್ಬರಿಗೂ ಉಚಿತ ಕೋವಿಡ್ ಲಸಿಕೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ಅವರ ಸಹಕಾರಕ್ಕೆ ಆಭಾರಿಯಾಗಿದ್ದೇವೆ ಎಂಬುದಾಗಿ ದುಬೈನಲ್ಲಿರುವ ಫಾರ್ಚೂನ್ ಫ್ಲಾಜಾ ಹೊಟೇಲ್ ಮ್ಯಾನೇಜರ್ ಹರೀಶ್ ಶೆಟ್ಟಿ 'ಹೆಡ್ ಲೈನ್ ಕರ್ನಾಟಕ'ಕ್ಕೆ ತಿಳಿಸಿದ್ದಾರೆ.
NRI entrepreneur Praveen Kumar Shetty of Fortune Groups of hotel receives 10-year golden visa from Dubai govt by his Excellency Helal Saeed Al Marri the Director-General of DTCM, Dubai
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm