ಬ್ರೇಕಿಂಗ್ ನ್ಯೂಸ್
09-01-21 11:52 am Headline Karnataka News Network ದೇಶ - ವಿದೇಶ
ಸ್ಯಾನ್ಫ್ರಾನ್ಸಿಸ್ಕೊ, ಜ.8: ಅಮೆರಿಕದ ಸಂಸತ್ ಮೇಲೆ ಟ್ರಂಪ್ ಬೆಂಬಲಿಗರು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಟ್ರಂಪ್ ಮತ್ತಷ್ಟು ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಟ್ರಂಪ್ ಟ್ವಿಟ್ಟರ್ ಖಾತೆಯನ್ನು ಶಾಶ್ವತವಾಗಿ ಆಗಿ ರದ್ದುಪಡಿಸಿರುವುದಾಗಿ ಟ್ವಿಟ್ಟರ್ ಪ್ರಕಟಿಸಿದೆ.
"@ರಿಯಲ್ಡೊನಾಲ್ಡ್ಟ್ರಂಪ್ ಖಾತೆಯ ಇತ್ತೀಚಿನ ಟ್ವೀಟ್ಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ ಬಳಿಕ, ಮತ್ತಷ್ಟು ಹಿಂಸೆಗೆ ಕುಮ್ಮಕ್ಕು ನೀಡುವ ಸಾಧ್ಯತೆ ಕಂಡುಬಂದ ಹಿನ್ನೆಲೆಯಲ್ಲಿ ನಾವು ಶಾಶ್ವತವಾಗಿ ಈ ಖಾತೆಯನ್ನು ರದ್ದುಪಡಿಸುತ್ತಿದ್ದೇವೆ" ಎಂದು ಟ್ವಿಟ್ಟರ್ ಹೇಳಿಕೆ ನೀಡಿದೆ.
ಬುಧವಾರ ಅಮೆರಿಕ ಸಂಸತ್ತಿನ ಮೇಲೆ ಟ್ರಂಪ್ ಬೆಂಬಲಿಗರು ದಾಳಿ ನಡೆಸಿದ ಬೆನ್ನಲ್ಲೇ 12 ಗಂಟೆ ಕಾಲ ಟ್ರಂಪ್ ಅವರ ಅತ್ಯಂತ ಪ್ರಿಯವಾದ ಟ್ವಿಟ್ಟರ್ ಖಾತೆಯನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿತ್ತು. ಜತೆಗೆ ನಿಯಮಾವಳಿಯನ್ನು ಉಲ್ಲಂಘಿಸಿದರೆ ಶಾಶ್ವತವಾಗಿ ರದ್ದುಪಡಿಸುವು ದಾಗಿ ಎಚ್ಚರಿಸಲಾಗಿತ್ತು.
ಗುರುವಾರ ಮತ್ತೆ ಸಕ್ರಿಯರಾಗಿದ್ದ ಟ್ರಂಪ್, ತಮ್ಮ ಬೆಂಬಲಿಗರಿಂದ ನಡೆದ ದಾಳಿಯ ಬಳಿಕದ ಉದ್ವಿಗ್ನ ಪರಿಸ್ಥಿತಿಯ ಕುರಿತ ವೀಡಿಯೊ ಪೋಸ್ಟ್ ಮಾಡಿದ್ದರು. ತಮ್ಮ ಅಧ್ಯಕ್ಷಾವಧಿ ಮುಕ್ತಾಯವಾಗುತ್ತಿದೆ. ಜೋ ಬೈಡನ್ ಅವರಿಗೆ ಸುಲಲಿತವಾಗಿ ಅಧಿಕಾರ ವರ್ಗಾಯಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದರು. ಆದರೆ ಬೈಡನ್ ಅವರನ್ನು ಅಭಿನಂದಿಸಿಲ್ಲ ಅಥವಾ ಅವರ ಉತ್ತರಾಧಿಕಾರಿಯ ಹೆಸರನ್ನೂ ಎಲ್ಲೂ ಉಲ್ಲೇಖಿಸಿಲ್ಲ.
ಮುಂದಿನ ಕ್ರಮಕ್ಕಾಗಿ ಟ್ರಂಪ್ ಅವರ ಸಾಮಾಜಿಕ ಜಾಲತಾಣ ಚಟುವಟಿಕೆಗಳ ಮೇಲೆ ನಿಗಾ ಇಡಲಾಗುವುದು ಎಂದು ಟ್ವಿಟ್ಟರ್ ಹೇಳಿಕೆ ನೀಡಿದೆ.
Twitter Inc said on Friday that it has permanently suspended US President Donald Trump’s account due to the risk of further incitement of violence following the storming of the US Capitol on Wednesday by hundreds of his supporters.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm