ಬ್ರೇಕಿಂಗ್ ನ್ಯೂಸ್
09-01-21 11:52 am Headline Karnataka News Network ದೇಶ - ವಿದೇಶ
ಸ್ಯಾನ್ಫ್ರಾನ್ಸಿಸ್ಕೊ, ಜ.8: ಅಮೆರಿಕದ ಸಂಸತ್ ಮೇಲೆ ಟ್ರಂಪ್ ಬೆಂಬಲಿಗರು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಟ್ರಂಪ್ ಮತ್ತಷ್ಟು ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಟ್ರಂಪ್ ಟ್ವಿಟ್ಟರ್ ಖಾತೆಯನ್ನು ಶಾಶ್ವತವಾಗಿ ಆಗಿ ರದ್ದುಪಡಿಸಿರುವುದಾಗಿ ಟ್ವಿಟ್ಟರ್ ಪ್ರಕಟಿಸಿದೆ.
"@ರಿಯಲ್ಡೊನಾಲ್ಡ್ಟ್ರಂಪ್ ಖಾತೆಯ ಇತ್ತೀಚಿನ ಟ್ವೀಟ್ಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ ಬಳಿಕ, ಮತ್ತಷ್ಟು ಹಿಂಸೆಗೆ ಕುಮ್ಮಕ್ಕು ನೀಡುವ ಸಾಧ್ಯತೆ ಕಂಡುಬಂದ ಹಿನ್ನೆಲೆಯಲ್ಲಿ ನಾವು ಶಾಶ್ವತವಾಗಿ ಈ ಖಾತೆಯನ್ನು ರದ್ದುಪಡಿಸುತ್ತಿದ್ದೇವೆ" ಎಂದು ಟ್ವಿಟ್ಟರ್ ಹೇಳಿಕೆ ನೀಡಿದೆ.

ಬುಧವಾರ ಅಮೆರಿಕ ಸಂಸತ್ತಿನ ಮೇಲೆ ಟ್ರಂಪ್ ಬೆಂಬಲಿಗರು ದಾಳಿ ನಡೆಸಿದ ಬೆನ್ನಲ್ಲೇ 12 ಗಂಟೆ ಕಾಲ ಟ್ರಂಪ್ ಅವರ ಅತ್ಯಂತ ಪ್ರಿಯವಾದ ಟ್ವಿಟ್ಟರ್ ಖಾತೆಯನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿತ್ತು. ಜತೆಗೆ ನಿಯಮಾವಳಿಯನ್ನು ಉಲ್ಲಂಘಿಸಿದರೆ ಶಾಶ್ವತವಾಗಿ ರದ್ದುಪಡಿಸುವು ದಾಗಿ ಎಚ್ಚರಿಸಲಾಗಿತ್ತು.
ಗುರುವಾರ ಮತ್ತೆ ಸಕ್ರಿಯರಾಗಿದ್ದ ಟ್ರಂಪ್, ತಮ್ಮ ಬೆಂಬಲಿಗರಿಂದ ನಡೆದ ದಾಳಿಯ ಬಳಿಕದ ಉದ್ವಿಗ್ನ ಪರಿಸ್ಥಿತಿಯ ಕುರಿತ ವೀಡಿಯೊ ಪೋಸ್ಟ್ ಮಾಡಿದ್ದರು. ತಮ್ಮ ಅಧ್ಯಕ್ಷಾವಧಿ ಮುಕ್ತಾಯವಾಗುತ್ತಿದೆ. ಜೋ ಬೈಡನ್ ಅವರಿಗೆ ಸುಲಲಿತವಾಗಿ ಅಧಿಕಾರ ವರ್ಗಾಯಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದರು. ಆದರೆ ಬೈಡನ್ ಅವರನ್ನು ಅಭಿನಂದಿಸಿಲ್ಲ ಅಥವಾ ಅವರ ಉತ್ತರಾಧಿಕಾರಿಯ ಹೆಸರನ್ನೂ ಎಲ್ಲೂ ಉಲ್ಲೇಖಿಸಿಲ್ಲ.

ಮುಂದಿನ ಕ್ರಮಕ್ಕಾಗಿ ಟ್ರಂಪ್ ಅವರ ಸಾಮಾಜಿಕ ಜಾಲತಾಣ ಚಟುವಟಿಕೆಗಳ ಮೇಲೆ ನಿಗಾ ಇಡಲಾಗುವುದು ಎಂದು ಟ್ವಿಟ್ಟರ್ ಹೇಳಿಕೆ ನೀಡಿದೆ.
Twitter Inc said on Friday that it has permanently suspended US President Donald Trump’s account due to the risk of further incitement of violence following the storming of the US Capitol on Wednesday by hundreds of his supporters.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm