ಬ್ರೇಕಿಂಗ್ ನ್ಯೂಸ್
30-08-26 02:41 pm HK News Staffer ದೇಶ - ವಿದೇಶ
ನ್ಯೂಯಾರ್ಕ್, ಆ.30: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲಿಮರನ್ನು ದೇಶದಿಂದ ಹೊರಗಿಡುವುದಲ್ಲ. ಭಾರತದಲ್ಲಿ ಮುಸ್ಲಿಮರಿಗೆ ಸ್ಥಾನ ಇರಬಾರದು ಎಂಬುದು ಹಿಂದುತ್ವವೇ ಅಲ್ಲ. ಧರ್ಮಗಳು ಬೇರೆಯಾಗಿರಬಹುದು. ಆದರೆ ಎನ್ನುವುದು ಮಾನವೀಯತೆ ಒಂದೇ. ಎಲ್ಲ ಧರ್ಮಗಳ ಆಚರಣೆಗೆ ಅವಕಾಶ ನೀಡುವುದೇ ಹಿಂದುತ್ವ ಎಂದು ಆರೆಸ್ಸೆಸ್ ಸರಸಂಘಚಾಲಕ ಮೋಹನ್ ಭಾಗವತ್ ಪ್ರತಿಪಾದಿಸಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಶತಮಾನೋತ್ಸವದ ಜಾಗತಿಕ ಸಂಪರ್ಕ ಕಾರ್ಯಕ್ರಮದ ಭಾಗವಾಗಿ ಭಾಗವತ್ ಅಮೆರಿಕಕ್ಕೆ ಭೇಟಿ ನೀಡಿದ್ದು, ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದರು. ‘ಒಂದು ಜಗತ್ತು, ಒಂದು ಮಾನವ ಕುಲ’ ಎನ್ನುವ ಸರ್ವಧರ್ಮ ಸಂವಾದ ಕಾರ್ಯಕ್ರಮದಲ್ಲಿ ಈ ಮಾತುಗಳನ್ನಾಡಿದ್ದಾರೆ.
ಯಾರಾದರೂ ಹಿಂದೂ ಎಂದು ಕರೆದುಕೊಳ್ಳಬೇಕಾದರೆ, ಎಲ್ಲಾ ಧರ್ಮಗಳ ಹಾದಿಯೂ ಒಂದೇ ಗುರಿಯತ್ತ ಸಾಗುತ್ತದೆ ಮತ್ತು ಎಲ್ಲ ಮನುಷ್ಯರಿಗೂ ಒಂದೇ ರೀತಿಯ ಗೌರವವಿದೆ ಎಂಬುದನ್ನು ನಂಬಬೇಕು. ಮಾನವ ಕುಲದಲ್ಲಿ ಯಾವುದೇ ಭೇದಭಾವವಿಲ್ಲ ಎಂದು ಭಾಗವತ್ ಹೇಳಿದ್ದಾರೆ. ಈ ವೇಳೆ ಹಿಂದುತ್ವ ಪರಿಕಲ್ಪನೆ, ಹಿಂದು ರಾಷ್ಟ್ರದ ವ್ಯಾಖ್ಯೆಯಲ್ಲಿ 'ಭಾರತದ ಮುಸ್ಲಿಮರ ಸ್ಥಾನವೇನು?' ಎಂಬ ಪ್ರಶ್ನೆಗೆ ಭಾಗವತ್ ಮೇಲಿನಂತೆ ಉತ್ತರಿಸಿದ್ದಾರೆ.
"ಹಿಂದೊಮ್ಮೆ ನನ್ನ ಉಪನ್ಯಾಸವೊಂದರಲ್ಲಿ ಭಾಗವಹಿಸಿದ್ದ ಮುಸ್ಲಿಂ ಸಹೋದರರು, 'ನೀವು ಹಿಂದೂ ರಾಷ್ಟ್ರ ಎಂದು ಹೇಳುತ್ತೀರಿ, ಹಾಗಿದ್ದರೆ ಮುಸ್ಲಿಮರಾದ ನಮ್ಮ ಕಥೆಯೇನು? ನಮ್ಮನ್ನು ದೇಶದಿಂದ ಹೊರಹಾಕುತ್ತೀರಾ?' ಎಂದು ಪ್ರಶ್ನಿಸಿದ್ದರು. ಅದಕ್ಕೆ ನಾನು 'ಖಂಡಿತ ಇಲ್ಲ, ಮುಸ್ಲಿಮರನ್ನು ದೂರ ಇಡುವ ಪರಿಕಲ್ಪನೆ ಹಿಂದುತ್ವವೇ ಅಲ್ಲ' ಎಂದು ಹೇಳಿದ್ದೆ. ಭಾರತದಲ್ಲಿ ಮುಸ್ಲಿಮರು ಇರಲೇಬಾರದು ಎಂದು ಹಿಂದುವೊಬ್ಬ ಭಾವಿಸಿದರೆ, ಆತ ನೈಜ ಹಿಂದುವಾಗಿ ಉಳಿಯಲು ಸಾಧ್ಯವಿಲ್ಲ" ಎಂದು ಹೇಳಿದರು.
‘ಭಾರತದಲ್ಲಿ ಮುಸ್ಲಿಮರು ಇರಬಾರದು ಎಂಬುದಾಗಿ ಭಾವಿಸುವುದೇ ತಪ್ಪು. ನಾವು ಹಿಂದೂ ಎಂದು ಕರೆದುಕೊಳ್ಳಬೇಕಾದರೆ ಎಲ್ಲಾ ಧರ್ಮಗಳನ್ನು ಗೌರವಿಸಬೇಕು. ಜನ ತಮ್ಮ ವಿಶ್ವಾಸದಂತೆ ವಿಭಿನ್ನ ಧಾರ್ಮಿಕ ಮಾರ್ಗಗಳನ್ನು ಅನುಸರಿಸಬಹುದು. ಅಂತಿಮವಾಗಿ ಎಲ್ಲಾ ಧರ್ಮಗಳು ಒಂದೇ ಆಗಿರುತ್ತದೆ. ಒಂದೇ ದೇವರು ಎನ್ನುವ ಕಲ್ಪನೆಯತ್ತ ಕೊಂಡೊಯ್ಯುತ್ತವೆ ಎಂಬುದನ್ನು ಮರೆಯಬಾರದು ಎಂದು ಭಾಗವತ್ ಹೇಳಿದರು.
30-08-26 05:13 pm
HK News Staffer
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm