ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇಶಿಯರು ಸೇರಿ 4,000ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ, 54 ಮಂದಿ ಕನ್ನಡಿಗರು ಬೆಂಗಳೂರಿಗೆ ವಾಪಸ್!

31-08-26 01:28 pm       HK News Staffer   ದೇಶ - ವಿದೇಶ

ನೇಪಾಳದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹದಿಂದಾಗಿ ಮೃತಪಟ್ಟವರ ಸಂಖ್ಯೆ ಸೋಮವಾರ 903ಕ್ಕೆ ಏರಿಕೆಯಾಗಿದೆ; ಈ ಮಧ್ಯೆ, ಇನ್ನೂ ಸುಮಾರು 4,250 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಠ್ಮಂಡು, ಆ 31: ನೇಪಾಳದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹದಿಂದಾಗಿ ಮೃತಪಟ್ಟವರ ಸಂಖ್ಯೆ ಸೋಮವಾರ 903ಕ್ಕೆ ಏರಿಕೆಯಾಗಿದೆ; ಈ ಮಧ್ಯೆ, ಇನ್ನೂ ಸುಮಾರು 4,250 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಪತ್ತು ಸಂಭವಿಸಿ ಆರು ದಿನಗಳು ಕಳೆದಿದ್ದರೂ, ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಸಲು ಮತ್ತು ಸಿಲುಕಿಕೊಂಡಿರುವವರನ್ನು ರಕ್ಷಿಸಲು ರಕ್ಷಣಾ ಸಿಬ್ಬಂದಿ ತೀವ್ರ ಹರಸಾಹಸ ಪಡುತ್ತಿದ್ದು, ಬಾಧಿತವಾಗಿರುವ ಎಲ್ಲ ಎಂಟು ಜಿಲ್ಲೆಗಳಿಂದಲೂ ಮೃತದೇಹಗಳನ್ನು ಹೊರತೆಗೆಯಲಾಗಿದೆ.

ನೇಪಾಳ-ಟಿಬೆಟ್ ಗಡಿಯ ಸಮೀಪ ಸಂಭವಿಸಿದ ಹಿಮ ಮತ್ತು ಬಂಡೆಗಳ ಕುಸಿತ ಅಥವಾ ಹಿಮಪಾತದಿಂದ ಉಂಟಾಯಿತೆಂದು ನಂಬಲಾದ ಈ ದುರಂತವು, ಆಗಸ್ಟ್ 26 ರಂದು ಉತ್ತರ ಮತ್ತು ಮಧ್ಯ ನೇಪಾಳದ ಪಟ್ಟಣಗಳು ​​ಹಾಗೂ ಹಳ್ಳಿಗಳಲ್ಲಿ ಭಾರಿ ಹಾನಿಯನ್ನುಂಟುಮಾಡಿತು.

ಹಠಾತ್ ಪ್ರವಾಹದಿಂದಾಗಿ ಮೃತಪಟ್ಟವರ ಸಂಖ್ಯೆ 903ಕ್ಕೆ ಏರಿಕೆಯಾಗಿದೆ ಎಂದು ರಾಷ್ಟ್ರೀಯ ವಿಪತ್ತು ಅಪಾಯ ಕಡಿತ ಮತ್ತು ನಿರ್ವಹಣಾ ಪ್ರಾಧಿಕಾರ (NDRRMA) ತಿಳಿಸಿದೆ.

NDRRMA ಪ್ರಕಾರ, ಇಲ್ಲಿಯವರೆಗೆ ಚಿತ್ವಾನ್‌ನಿಂದ 272, ಪೂರ್ವ ನವಾಲ್‌ಪರಸಿಯಿಂದ 207, ಪಶ್ಚಿಮ ನವಾಲ್‌ಪರಸಿಯಿಂದ 151 ಮತ್ತು ಗೋಖಾ ಜಿಲ್ಲೆಗಳಿಂದ 62 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಅದೇ ರೀತಿ, ನುವಾಕೋಟ್‌ನಿಂದ 95, ಧಾಡಿಂಗ್‌ನಿಂದ 55, ತನಹುವಿನಿಂದ 37 ಮತ್ತು ರಸುವಾದಿಂದ 24 ಮೃತದೇಹಗಳನ್ನು ಹೊರತೆಗೆಯಲಾಗಿದೆ.

85 ಮಂದಿ ಭದ್ರತಾ ಸಿಬ್ಬಂದಿ ಮತ್ತು 320 ವಿದೇಶಿಯರು ಸೇರಿದಂತೆ ಒಟ್ಟು 4,247 ಮಂದಿ ನಾಪತ್ತೆಯಾಗಿದ್ದಾರೆ.

ನೇಪಾಳದಲ್ಲಿ ಸಿಲುಕಿದ್ದ 54 ಕನ್ನಡಿಗರು ಕರ್ನಾಟಕಕ್ಕೆ ಸುರಕ್ಷಿತವಾಗಿ ವಾಪಸ್ ಆಗಿದ್ದು ಅವರ ಕುಟುಂಬಸ್ಥರು ಆತಂಕದಿಂದ ಹೊರಬಂದಿದ್ದಾರೆ. ಶನಿವಾರ ರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು.

ಕರ್ನಾಟಕದ ಬೆಂಗಳೂರು, ಹಾವೇರಿ, ಶಿವಮೊಗ್ಗ, ಕಡೂರು ಸೇರಿದಂತೆ ವಿವಿಧ ಜಿಲ್ಲೆಗಳ ಪ್ರವಾಸಿಗರು ಆಗಸ್ಟ್ 23ರಂದು ನೇಪಾಳಕ್ಕೆ ಪ್ರಯಾಣಿಸಿದ್ದರು. ಆಗಸ್ಟ್ 26ರಂದು ಅವರ ಪ್ರವಾಸ ಅಪಾಯಕಾರಿ ತಿರುವು ಪಡೆದುಕೊಂಡಿತು. ಹಠಾತ್ ಪ್ರವಾಹವು ರಸ್ತೆಗಳು, ಸೇತುವೆಗಳು ಮತ್ತು ಇತರ ಮೂಲಸೌಕರ್ಯಗಳು ನಾಶಗೊಂಡಿದ್ದವು. ಹಲವಾರು ಪ್ರವಾಸಿಗರು ಸಿಲುಕಿಕೊಂಡಿದ್ದರು. ನೇಪಾಳಕ್ಕೆ ತೆರಳುವ ಮುನ್ನ ಕನ್ನಡಿಗರ ಗುಂಪು ಉತ್ತರ ಪ್ರದೇಶದ ಗೋರಖ್‌ಪುರಕ್ಕೆ ಪ್ರಯಾಣಿಸಿತು.

ಪ್ರವಾಹಕ್ಕೆ ತುತ್ತಾದ ಮಾರ್ಗದಲ್ಲಿ ಪ್ರಯಾಣಿಸುವಾಗ ಸುಮಾರು 30 ನಿಮಿಷಗಳ ಕಾಲ ಚಹಾ ಕುಡಿಯಲು ತಂಗಿದ್ದವು. ನಾವು ಜೀವಂತವಾಗಿರುವುದು ಒಂದು ಪವಾಡ, ನಾವೆಲ್ಲರೂ ನಮ್ಮ ಜೀವಕ್ಕೆ ಹೆದರುತ್ತಿದ್ದೆವು. ಆ ಮಾರ್ಗವು ಒಂದು ದುರಂತದ ಕ್ಷಣವಾಗಿತ್ತು. ತಮ್ಮ ಕುಟುಂಬ ಸದಸ್ಯರೊಂದಿಗೆ ಪ್ರಯಾಣಿಸುತ್ತಿದ್ದೇವು ಎಂದು ಪ್ರವಾಸಿಗರೊಬ್ಬರು ಹೇಳಿದ್ದಾರೆ.

ಚಹಾ ವಿರಾಮದ ಸಮಯದಲ್ಲಿ ನಮಗೆ ಮೊದಲೇ ಪ್ರವಾಹದ ಕುರಿತಂತೆ ಮಾಹಿತಿ ಸಿಕ್ಕಿತ್ತು. ಇಲ್ಲದಿದ್ದರೆ ನಾವು ಹಠಾತ್ ಪ್ರವಾಹಕ್ಕೆ ಸಿಲುಕುತ್ತಿದ್ದೇವು ಎಂದು ಎಂದು ಹೇಳಿದರು.