ಬ್ರೇಕಿಂಗ್ ನ್ಯೂಸ್
31-08-26 01:28 pm HK News Staffer ದೇಶ - ವಿದೇಶ
ಕಠ್ಮಂಡು, ಆ 31: ನೇಪಾಳದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹದಿಂದಾಗಿ ಮೃತಪಟ್ಟವರ ಸಂಖ್ಯೆ ಸೋಮವಾರ 903ಕ್ಕೆ ಏರಿಕೆಯಾಗಿದೆ; ಈ ಮಧ್ಯೆ, ಇನ್ನೂ ಸುಮಾರು 4,250 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಪತ್ತು ಸಂಭವಿಸಿ ಆರು ದಿನಗಳು ಕಳೆದಿದ್ದರೂ, ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಸಲು ಮತ್ತು ಸಿಲುಕಿಕೊಂಡಿರುವವರನ್ನು ರಕ್ಷಿಸಲು ರಕ್ಷಣಾ ಸಿಬ್ಬಂದಿ ತೀವ್ರ ಹರಸಾಹಸ ಪಡುತ್ತಿದ್ದು, ಬಾಧಿತವಾಗಿರುವ ಎಲ್ಲ ಎಂಟು ಜಿಲ್ಲೆಗಳಿಂದಲೂ ಮೃತದೇಹಗಳನ್ನು ಹೊರತೆಗೆಯಲಾಗಿದೆ.
ನೇಪಾಳ-ಟಿಬೆಟ್ ಗಡಿಯ ಸಮೀಪ ಸಂಭವಿಸಿದ ಹಿಮ ಮತ್ತು ಬಂಡೆಗಳ ಕುಸಿತ ಅಥವಾ ಹಿಮಪಾತದಿಂದ ಉಂಟಾಯಿತೆಂದು ನಂಬಲಾದ ಈ ದುರಂತವು, ಆಗಸ್ಟ್ 26 ರಂದು ಉತ್ತರ ಮತ್ತು ಮಧ್ಯ ನೇಪಾಳದ ಪಟ್ಟಣಗಳು ಹಾಗೂ ಹಳ್ಳಿಗಳಲ್ಲಿ ಭಾರಿ ಹಾನಿಯನ್ನುಂಟುಮಾಡಿತು.
ಹಠಾತ್ ಪ್ರವಾಹದಿಂದಾಗಿ ಮೃತಪಟ್ಟವರ ಸಂಖ್ಯೆ 903ಕ್ಕೆ ಏರಿಕೆಯಾಗಿದೆ ಎಂದು ರಾಷ್ಟ್ರೀಯ ವಿಪತ್ತು ಅಪಾಯ ಕಡಿತ ಮತ್ತು ನಿರ್ವಹಣಾ ಪ್ರಾಧಿಕಾರ (NDRRMA) ತಿಳಿಸಿದೆ.
NDRRMA ಪ್ರಕಾರ, ಇಲ್ಲಿಯವರೆಗೆ ಚಿತ್ವಾನ್ನಿಂದ 272, ಪೂರ್ವ ನವಾಲ್ಪರಸಿಯಿಂದ 207, ಪಶ್ಚಿಮ ನವಾಲ್ಪರಸಿಯಿಂದ 151 ಮತ್ತು ಗೋಖಾ ಜಿಲ್ಲೆಗಳಿಂದ 62 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಅದೇ ರೀತಿ, ನುವಾಕೋಟ್ನಿಂದ 95, ಧಾಡಿಂಗ್ನಿಂದ 55, ತನಹುವಿನಿಂದ 37 ಮತ್ತು ರಸುವಾದಿಂದ 24 ಮೃತದೇಹಗಳನ್ನು ಹೊರತೆಗೆಯಲಾಗಿದೆ.
85 ಮಂದಿ ಭದ್ರತಾ ಸಿಬ್ಬಂದಿ ಮತ್ತು 320 ವಿದೇಶಿಯರು ಸೇರಿದಂತೆ ಒಟ್ಟು 4,247 ಮಂದಿ ನಾಪತ್ತೆಯಾಗಿದ್ದಾರೆ.

ನೇಪಾಳದಲ್ಲಿ ಸಿಲುಕಿದ್ದ 54 ಕನ್ನಡಿಗರು ಕರ್ನಾಟಕಕ್ಕೆ ಸುರಕ್ಷಿತವಾಗಿ ವಾಪಸ್ ಆಗಿದ್ದು ಅವರ ಕುಟುಂಬಸ್ಥರು ಆತಂಕದಿಂದ ಹೊರಬಂದಿದ್ದಾರೆ. ಶನಿವಾರ ರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು.
ಕರ್ನಾಟಕದ ಬೆಂಗಳೂರು, ಹಾವೇರಿ, ಶಿವಮೊಗ್ಗ, ಕಡೂರು ಸೇರಿದಂತೆ ವಿವಿಧ ಜಿಲ್ಲೆಗಳ ಪ್ರವಾಸಿಗರು ಆಗಸ್ಟ್ 23ರಂದು ನೇಪಾಳಕ್ಕೆ ಪ್ರಯಾಣಿಸಿದ್ದರು. ಆಗಸ್ಟ್ 26ರಂದು ಅವರ ಪ್ರವಾಸ ಅಪಾಯಕಾರಿ ತಿರುವು ಪಡೆದುಕೊಂಡಿತು. ಹಠಾತ್ ಪ್ರವಾಹವು ರಸ್ತೆಗಳು, ಸೇತುವೆಗಳು ಮತ್ತು ಇತರ ಮೂಲಸೌಕರ್ಯಗಳು ನಾಶಗೊಂಡಿದ್ದವು. ಹಲವಾರು ಪ್ರವಾಸಿಗರು ಸಿಲುಕಿಕೊಂಡಿದ್ದರು. ನೇಪಾಳಕ್ಕೆ ತೆರಳುವ ಮುನ್ನ ಕನ್ನಡಿಗರ ಗುಂಪು ಉತ್ತರ ಪ್ರದೇಶದ ಗೋರಖ್ಪುರಕ್ಕೆ ಪ್ರಯಾಣಿಸಿತು.
ಪ್ರವಾಹಕ್ಕೆ ತುತ್ತಾದ ಮಾರ್ಗದಲ್ಲಿ ಪ್ರಯಾಣಿಸುವಾಗ ಸುಮಾರು 30 ನಿಮಿಷಗಳ ಕಾಲ ಚಹಾ ಕುಡಿಯಲು ತಂಗಿದ್ದವು. ನಾವು ಜೀವಂತವಾಗಿರುವುದು ಒಂದು ಪವಾಡ, ನಾವೆಲ್ಲರೂ ನಮ್ಮ ಜೀವಕ್ಕೆ ಹೆದರುತ್ತಿದ್ದೆವು. ಆ ಮಾರ್ಗವು ಒಂದು ದುರಂತದ ಕ್ಷಣವಾಗಿತ್ತು. ತಮ್ಮ ಕುಟುಂಬ ಸದಸ್ಯರೊಂದಿಗೆ ಪ್ರಯಾಣಿಸುತ್ತಿದ್ದೇವು ಎಂದು ಪ್ರವಾಸಿಗರೊಬ್ಬರು ಹೇಳಿದ್ದಾರೆ.
ಚಹಾ ವಿರಾಮದ ಸಮಯದಲ್ಲಿ ನಮಗೆ ಮೊದಲೇ ಪ್ರವಾಹದ ಕುರಿತಂತೆ ಮಾಹಿತಿ ಸಿಕ್ಕಿತ್ತು. ಇಲ್ಲದಿದ್ದರೆ ನಾವು ಹಠಾತ್ ಪ್ರವಾಹಕ್ಕೆ ಸಿಲುಕುತ್ತಿದ್ದೇವು ಎಂದು ಎಂದು ಹೇಳಿದರು.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am