ಬ್ರೇಕಿಂಗ್ ನ್ಯೂಸ್
10-01-21 03:53 pm Headline Karnataka News Network ದೇಶ - ವಿದೇಶ
ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಔಷಧ ಒದಗಿಸುವ ಗುರಿಯೊಂದಿಗೆ ಜನೌಷಧ ಮಳಿಗೆ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಧಾನಮಂತ್ರಿ ಕನಸಿನ ಯೋಜನೆ ಇದಾಗಿದ್ದು ಜನೌಷಧ ಮಳಿಗೆಗಳಲ್ಲಿ 1250 ಔಷಧಗಳು, 204 ಮೆಡಿಕಲ್ ಪರಿಕರಗಳು ಲಭ್ಯವಿವೆ.
ಪ್ರಧಾನಮಂತ್ರಿ ಜನೌಷಧಿ ಕೇಂದ್ರವನ್ನು ಯಾರು ತೆರೆಯಬಹುದು..?
ರಾಜ್ಯದ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ಇತರೆ ಸಹಕಾರ ಸಂಘಗಳು ಕೇಂದ್ರಗಳನ್ನು ತೆರೆಯಬಹುದು.
ಖಾಸಗಿ ವ್ಯಕ್ತಿಗಳು ಜನೌಷಧ ಮಳಿಗೆ ತೆರೆಯಲು ಅವಕಾಶವಿದೆ. ಇದಕ್ಕೆ ಬೇಕಾದ ಸಹಕಾರ ಹಾಗೂ ಮಾಹಿತಿಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನೀಡಲಿದೆ.

ಶೇಕಡ 20 ರಷ್ಟು ಲಾಭಾಂಶ
ಜನೌಷಧ ಕೇಂದ್ರ ತೆರೆದು ವ್ಯವಹರಿಸಿದಲ್ಲಿ ವ್ಯವಹಾರದ ಶೇಕಡ 20 ರಷ್ಟು ಲಾಭಾಂಶವನ್ನು ಪಡೆಯಬಹುದಾಗಿದೆ.
ಅಲ್ಲದೆ, ವ್ಯವಹಾರದ ಮೇಲೆ ಬಿಪಿಪಿಐ ಸಂಸ್ಥೆಯು ಪ್ರೋತ್ಸಾಹ ಧನವನ್ನು ನೀಡುತ್ತದೆ. ಇದಕ್ಕೆ ಷರತ್ತುಗಳು ಅನ್ವಯಿಸುತ್ತದೆ.

ಮಳಿಗೆ ತೆರೆಯಲು ಬೇಕಾದ ದಾಖಲೆಗಳು
ಜನೌಷಧ ಕೇಂದ್ರಗಳನ್ನು ತೆರೆಯಲು ಡಿ ಫಾರ್ಮ್ ಇಲ್ಲವೇ ಬಿ ಫಾರಂ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ಸಹಕಾರ ಸಂಘಗಳು ನೇಮಿಸಿಕೊಳ್ಳುತ್ತವೆ. ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಸಹಕಾರ ಸಂಘದ ಬ್ಯಾಂಕ್ ಖಾತೆಯ ಆರು ತಿಂಗಳ ಸ್ಟೇಟ್ಮೆಂಟ್, ಸಹಕಾರ ಸಂಘದ ಆದಾಯ ಪ್ರಮಾಣ ಸಲ್ಲಿಸಬೇಕಿದೆ.
ಡಿ ಫಾರ್ಮ್, ಬಿ ಫಾರ್ಮ್ ವಿದ್ಯಾರ್ಹತೆ ಹೊಂದಿದವರು ಕೂಡ ಜನೌಷಧ ಕೇಂದ್ರ ತೆರೆಯಬಹುದಾಗಿದ್ದು, ಮಹಾಮಂಡಲದ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ. ಮಾಹಿತಿಗಾಗಿ 080 22254862, 94498 64442, 94498 64444, 94498 64411 ಸಂಪರ್ಕಿಸಬಹುದಾಗಿದೆ ಎಂದು ಹೇಳಲಾಗಿದೆ.
Now Open Your own Medical Store With Pradhan Mantri Jan Aushadhi Yojana. Apply now by contacting with the phone number displayed.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm