ಬ್ರೇಕಿಂಗ್ ನ್ಯೂಸ್
11-01-21 12:13 pm Headline Karnataka News Network ದೇಶ - ವಿದೇಶ
ಮುಂಬೈ, ಜ.11 : ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಹರಡಿರುವುದಾಗಿ ದೃಢಪಡಿಸಲಾಗಿದೆ. ಮುರುಂಬಾ ಎಂಬ ಗ್ರಾಮದಲ್ಲಿ ಇಲ್ಲಿಯವರೆಗೂ ಸುಮಾರು 900 ಕೋಳಿಗಳು ಹಕ್ಕಿ ಜ್ವರದಿಂದ ಸಾವನ್ನಪ್ಪಿದೆ. ಅಲ್ಲಿನ ಜಿಲ್ಲಾಡಳಿತ ಸತ್ತ ಕೋಳಿಯ ರಕ್ತದ ಮಾದರಿಯನ್ನು ರಾಷ್ಟ್ರೀಯ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು.
ವರದಿಯಲ್ಲಿ ಕೋಳಿಗಳು ಹಕ್ಕಿ ಜ್ವರದಿಂದ ಮೃತಪಟ್ಟಿರುವುದು ಖಚಿತಗೊಂಡಿದೆ ಎಂದು ಜಿಲ್ಲಾಧಿಕಾರಿ ಪ್ರಭಾನ್ ತಿಳಿಸಿದ್ದಾರೆ.
ಸುದ್ದಿ ಮಾಧ್ಯಮದಲ್ಲಿ ಮಾತನಾಡಿದ ಮುಲ್ಜಿಕರ್ ಹಕ್ಕಿ ಜ್ವರದಿಂದ ಮಾನಷ್ಯರ ಜೀವಕ್ಕೆ ಯಾವುದೇ ಅಪಾಯವಿಲ್ಲ. ಜನರನ್ನು ನಾವು ಈಗಾಗಲೇ ಪರೀಕ್ಷೆಗೆ ಒಳಪಡಿಸಿದ್ದೇವೆ. ಹಾಗಾಗಿ ಹಕ್ಕಿ ಜ್ವರ ಮನುಷ್ಯರಿಗೆ ಹರಡುತ್ತದೆ ಎಂದು ಯಾರು ಭಯ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಈ ಮುನ್ನ ಕೇಂದ್ರದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ ಕೇರಳ, ರಾಜಸ್ಥಾನ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಹರಿಯಾಣ, ಗುಜರಾತ್ ಮತ್ತು ಉತ್ತರ ಪ್ರದೇಶದಲ್ಲಿ ಹಕ್ಕಿಜ್ವರ ಹರಡಿರುವದನ್ನು ದೃಢಪಡಿಸಿತ್ತು. ಈಗಾಗಲೇ ರೋಗ ಪೀಡಿತ ಪ್ರದೇಶಗಳಲ್ಲಿ ಹಕ್ಕಿ ಜ್ವರ ತಡೆಗಟ್ಟಲು ಎಲ್ಲ ರೀತಿಯ ಸಲಹೆಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದೆ.
ಹಕ್ಕಿ ಜ್ವರ ಹರಡಿರುವ ಪ್ರದೇಶಗಳ ಕುರಿತಂತೆ ವಿಚಾರಣೆ ನಡೆಸಲು ಕೇಂದ್ರ ತಂಡಗಳನ್ನು ದೇಶದಲ್ಲಿ ರಚಿಸಲಾಗಿದ್ದು, ತಂಡಗಳು ಇದೀಗ ರೋಗ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿವೆ. ಕೇಂದ್ರ ತಂಡವೊಂದು ಜನವರಿ 9 ರಂದು ಕೇರಳ ರಾಜ್ಯಕ್ಕೆ ತಲುಪಿದ್ದು ಪ್ರಸ್ತುತ ಅಲ್ಲಿನ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಾಂಕ್ರಾಮಿಕ ರೋಗ ಕುರಿತಾಗಿ ತನಿಖೆ ನಡೆಸಲು ಆರಂಭಿಸಿದೆ. ಮತ್ತೊಂದು ತಂಡ ಜನವರಿ 10 ರಂದು ಹಿಮಾಚಲ ಪ್ರದೇಶಕ್ಕೆ ತಲುಪಿದ್ದು ಅಲ್ಲಿನ ಪ್ರದೇಶಗಳಲ್ಲಿ ಪರಿಶೀಲನೆ ನಡೆಸುತ್ತಿದೆ.
ಹಕ್ಕಿ ವಿಚಾರವಾಗಿ ತಪ್ಪು ಮಾಹಿತಿ ಹರಡದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಹಾಗೂ ರೋಗ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸಬೇಕೆಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ.
Bird flu has been confirmed as the cause of death of around 900 hens in the last few days at a poultry farm in Maharashtra’s Parbhani district, a senior official said on Monday.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm