ಬ್ರೇಕಿಂಗ್ ನ್ಯೂಸ್
11-01-21 12:13 pm Headline Karnataka News Network ದೇಶ - ವಿದೇಶ
ಮುಂಬೈ, ಜ.11 : ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಹರಡಿರುವುದಾಗಿ ದೃಢಪಡಿಸಲಾಗಿದೆ. ಮುರುಂಬಾ ಎಂಬ ಗ್ರಾಮದಲ್ಲಿ ಇಲ್ಲಿಯವರೆಗೂ ಸುಮಾರು 900 ಕೋಳಿಗಳು ಹಕ್ಕಿ ಜ್ವರದಿಂದ ಸಾವನ್ನಪ್ಪಿದೆ. ಅಲ್ಲಿನ ಜಿಲ್ಲಾಡಳಿತ ಸತ್ತ ಕೋಳಿಯ ರಕ್ತದ ಮಾದರಿಯನ್ನು ರಾಷ್ಟ್ರೀಯ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು.
ವರದಿಯಲ್ಲಿ ಕೋಳಿಗಳು ಹಕ್ಕಿ ಜ್ವರದಿಂದ ಮೃತಪಟ್ಟಿರುವುದು ಖಚಿತಗೊಂಡಿದೆ ಎಂದು ಜಿಲ್ಲಾಧಿಕಾರಿ ಪ್ರಭಾನ್ ತಿಳಿಸಿದ್ದಾರೆ.
ಸುದ್ದಿ ಮಾಧ್ಯಮದಲ್ಲಿ ಮಾತನಾಡಿದ ಮುಲ್ಜಿಕರ್ ಹಕ್ಕಿ ಜ್ವರದಿಂದ ಮಾನಷ್ಯರ ಜೀವಕ್ಕೆ ಯಾವುದೇ ಅಪಾಯವಿಲ್ಲ. ಜನರನ್ನು ನಾವು ಈಗಾಗಲೇ ಪರೀಕ್ಷೆಗೆ ಒಳಪಡಿಸಿದ್ದೇವೆ. ಹಾಗಾಗಿ ಹಕ್ಕಿ ಜ್ವರ ಮನುಷ್ಯರಿಗೆ ಹರಡುತ್ತದೆ ಎಂದು ಯಾರು ಭಯ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಈ ಮುನ್ನ ಕೇಂದ್ರದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ ಕೇರಳ, ರಾಜಸ್ಥಾನ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಹರಿಯಾಣ, ಗುಜರಾತ್ ಮತ್ತು ಉತ್ತರ ಪ್ರದೇಶದಲ್ಲಿ ಹಕ್ಕಿಜ್ವರ ಹರಡಿರುವದನ್ನು ದೃಢಪಡಿಸಿತ್ತು. ಈಗಾಗಲೇ ರೋಗ ಪೀಡಿತ ಪ್ರದೇಶಗಳಲ್ಲಿ ಹಕ್ಕಿ ಜ್ವರ ತಡೆಗಟ್ಟಲು ಎಲ್ಲ ರೀತಿಯ ಸಲಹೆಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದೆ.

ಹಕ್ಕಿ ಜ್ವರ ಹರಡಿರುವ ಪ್ರದೇಶಗಳ ಕುರಿತಂತೆ ವಿಚಾರಣೆ ನಡೆಸಲು ಕೇಂದ್ರ ತಂಡಗಳನ್ನು ದೇಶದಲ್ಲಿ ರಚಿಸಲಾಗಿದ್ದು, ತಂಡಗಳು ಇದೀಗ ರೋಗ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿವೆ. ಕೇಂದ್ರ ತಂಡವೊಂದು ಜನವರಿ 9 ರಂದು ಕೇರಳ ರಾಜ್ಯಕ್ಕೆ ತಲುಪಿದ್ದು ಪ್ರಸ್ತುತ ಅಲ್ಲಿನ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಾಂಕ್ರಾಮಿಕ ರೋಗ ಕುರಿತಾಗಿ ತನಿಖೆ ನಡೆಸಲು ಆರಂಭಿಸಿದೆ. ಮತ್ತೊಂದು ತಂಡ ಜನವರಿ 10 ರಂದು ಹಿಮಾಚಲ ಪ್ರದೇಶಕ್ಕೆ ತಲುಪಿದ್ದು ಅಲ್ಲಿನ ಪ್ರದೇಶಗಳಲ್ಲಿ ಪರಿಶೀಲನೆ ನಡೆಸುತ್ತಿದೆ.
ಹಕ್ಕಿ ವಿಚಾರವಾಗಿ ತಪ್ಪು ಮಾಹಿತಿ ಹರಡದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಹಾಗೂ ರೋಗ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸಬೇಕೆಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ.
Bird flu has been confirmed as the cause of death of around 900 hens in the last few days at a poultry farm in Maharashtra’s Parbhani district, a senior official said on Monday.
06-03-26 10:21 am
HK News Staffer
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
06-03-26 09:50 am
Giridhar Shetty, Headline Karnataka
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm