ಬ್ರೇಕಿಂಗ್ ನ್ಯೂಸ್
13-08-20 06:31 am Headline Karnataka News Network ದೇಶ - ವಿದೇಶ
ಮುಂಬಯಿ, ಆಗಸ್ಟ್ 13: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ದಿನ ಹೋದಂತೆ ಜಟಿಲವಾಗುತ್ತಿದೆ. ಅಲ್ಲದೆ, ಇದರಲ್ಲಿ ರಾಜ ಕೀಯವೂ ಬೆರೆತಿರುವುದು ಇನ್ನಷ್ಟು ಗೊಂದಲಗಳನ್ನು ಮೂಡಿಸುತ್ತಿದೆ. ಪ್ರಕರಣದ ತನಿಖೆಯನ್ನು ಸಿಬಿಐ ಆರಂಭಿಸಿರುವ ನಡುವೆಯೇ ಸುಶಾಂತ್ ಕುಟುಂಬವು ಬುಧವಾರ 9 ಪುಟಗಳ ಪತ್ರ ಬಿಡುಗಡೆ ಮಾಡಿದ್ದು, ಸುಶಾಂತ್ರದ್ದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸಿದೆ. ಜತೆಗೆ, ಅವರ ಸಾವಿಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣ ಎಂದೂ ಕಿಡಿಕಾರಲಾಗಿದೆ.
ಸುಶಾಂತ್ರ ಬಾಲ್ಯದಿಂದ ಹಿಡಿದು ಕನಸಿನ ನಗರಿ ಮುಂಬಯಿಗೆ ತೆರಳಿ, ಬದುಕನ್ನು ಅಂತ್ಯಗೊಳಿಸುವವರೆಗೆ ಎಲ್ಲ ಮಾಹಿತಿಗಳನ್ನೂ ಆ ಪತ್ರದಲ್ಲಿ ವಿವರಿಸಲಾಗಿದೆ. ಜತೆಗೆ, ತಮ್ಮ ಕುಟುಂಬಕ್ಕೆ ಬೆದರಿಕೆ ಕರೆಗಳು ಬರುತ್ತಿರುವ ಬಗ್ಗೆ, ಮುಂಬಯಿ ಪೊಲೀಸರು ತನಿಖೆಯಲ್ಲಿ ವಹಿಸಿದ ನಿರ್ಲಕ್ಷ್ಯದ ಕುರಿತೂ ಉಲ್ಲೇಖೀಸಲಾಗಿದೆ. ಅಲ್ಲದೆ, ರಿಯಾ ಮತ್ತವರ ಕುಟುಂಬ ಸದಸ್ಯರ ವಿರುದ್ಧವೂ ಕಿಡಿಕಾರಲಾಗಿದೆ.
ರಾವತ್ಗೆ ನೋಟಿಸ್ ಜಾರಿ: ಬಿಹಾರ ಶಾಸಕ ನೀರಜ್ ಕುಮಾರ್ ಬಬ್ಲು ಶಿವಸೇನೆ ಸಂಸದ ಸಂಜಯ್ ರಾವತ್ಗೆ ಕಾನೂನು ನೋಟಿಸ್ ಜಾರಿ ಮಾಡಿದ್ದಾರೆ. ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಸಾವಿನ ಕುರಿತು ಬರೆದಿದ್ದ ಲೇಖನದಲ್ಲಿ ರಾವತ್ ಆಕ್ಷೇಪಾರ್ಹವಾಗಿ ಬರೆದಿದ್ದರು ಎಂದು ಆರೋಪಿಸಲಾಗಿದೆ.
ಸಾವಿನ ನಂತರ ಫೇಮಸ್ ಆದರು!
ಸುಶಾಂತ್ ಸಾವಿಗೆ ಸಂಬಂಧಿಸಿ ರಾಜಕಾರಣಿಗಳ ಲೂಸ್ಟಾಕ್ ಮುಂದುವರಿದಿದೆ. ಸುಶಾಂತ್ ಅವರು ಸಾವಿನ ನಂತರ ಫೇಮಸ್ ಆದಷ್ಟು ಸಾವಿಗೂ ಮುನ್ನ ಆಗಿರಲಿಲ್ಲ ಎಂದು ಎನ್ಸಿಪಿ ನಾಯಕ ಮಜೀದ್ ಮೆಮನ್ ಬುಧವಾರ ಹೇಳಿದ್ದಾರೆ. ಈ ಹೇಳಿಕೆ ವಿವಾದಕ್ಕೆ ತಿರುಗುತ್ತಿದ್ದಂತೆ, ಅವರ ಹೇಳಿಕೆಯಿಂದ ಪಕ್ಷ ದೂರ ಉಳಿದಿದೆ. ಇದು ಮೆಮನ್ ಅವರ ವೈಯಕ್ತಿಕ ಹೇಳಿಕೆಯಾ ಗಿದೆಯೇ ವಿನಾ ಪಕ್ಷದ್ದಲ್ಲ ಎಂದು ಎನ್ಸಿಪಿ ಸ್ಪಷ್ಟಪಡಿಸಿದೆ. ಜತೆಗೆ, ಮೆಮನ್ ಅವರೂ ಸ್ಪಷ್ಟನೆ ನೀಡಿ, ಸುಶಾಂತ್ರನ್ನು ಅವಮಾನಿಸುವ ಉದ್ದೇಶ ಇರಲಿಲ್ಲ ಎಂದಿದ್ದಾರೆ.
06-07-26 04:40 pm
HK News Staffer
ಬೆಂಗಳೂರು ಕೆ.ಆರ್ ವೃತ್ತದಲ್ಲಿ ಬಿಎಂಟಿಸಿ ಬಸ್ಸುಗಳ ಡ...
04-07-26 02:51 pm
ರಾಮನಗರ ಕಲ್ಯಾಣ ಮಂಟಪದಲ್ಲಿ ಮತದಾರರನ್ನು ಸೇರಿಸಿ ಎಸ್...
03-07-26 01:21 pm
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
06-07-26 01:14 pm
HK News Staffer
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
ರಷ್ಯಾದಿಂದ ತೈಲ ಖರೀದಿಸಿ ಮತ್ತೆ ಆ ದೇಶಕ್ಕೇ ಪೆಟ್ರೋಲ...
03-07-26 09:40 pm
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
06-07-26 10:00 pm
HK News Desk
ಮಂಗಳೂರು ವಿಧಾನಸಭೆ ಕ್ಷೇತ್ರದಲ್ಲಿ ಎಸ್ ಐಆರ್ ಪ್ರಕ್ರ...
06-07-26 09:13 pm
ಧರ್ಮ ಕಾರ್ಯಗಳ ಅನುಷ್ಠಾನದಿಂದ ವ್ಯವಹಾರದಲ್ಲಿ ಯಶಸ್ಸು...
05-07-26 10:15 pm
ಉನ್ನತ ಶಿಕ್ಷಣಕ್ಕಾಗಿ ಜರ್ಮನಿ ತೆರಳಿದ್ದ ಮಂಗಳೂರಿನ ಯ...
05-07-26 09:34 pm
Panambur Block, Mangalore: ಪಣಂಬೂರು ಹೆದ್ದಾರಿಯಲ...
05-07-26 06:33 pm
06-07-26 04:49 pm
HK News Staffer
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am
ಅಯೋಧ್ಯೆ ರಾಮ ಮಂದಿರ ಬೆನ್ನಲ್ಲೇ ಬದರಿನಾಥ ಕ್ಷೇತ್ರದಲ...
04-07-26 09:47 pm
Panambur Gold Robbery, Update: ಚಿನ್ನದ ವ್ಯಾಪಾರ...
04-07-26 09:43 pm