ಬ್ರೇಕಿಂಗ್ ನ್ಯೂಸ್
16-01-21 01:46 pm Headline Karnataka News Network ದೇಶ - ವಿದೇಶ
Photo credits : Photo Credits: ANI
ನವದೆಹಲಿ, ಜ.16: ಕೊರೊನಾ ಮಹಾಮಾರಿಯ ವಿರುದ್ಧ ಭಾರತದಲ್ಲಿ ಜಗತ್ತಿನಲ್ಲೇ ಅತಿದೊಡ್ಡ ಲಸಿಕಾ ಅಭಿಯಾನ ನಡೆದಿದೆ. ಮೊದಲ ಹಂತದಲ್ಲಿ ಮೂರು ಕೋಟಿ ಆರೋಗ್ಯ ಕಾರ್ಯಕರ್ತರು ಮತ್ತು ಸಿಬಂದಿಗೆ ಈ ಲಸಿಕೆ ದೊರೆಯಲಿದ್ದು, ಮೊದಲ ಕೋವಿಡ್ ಲಸಿಕೆಯನ್ನು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮನೀಶ್ ಕುಮಾರ್ ಎಂಬ ಪೌರ ಕಾರ್ಮಿಕನಿಗೆ ನೀಡಲಾಗಿದೆ.
ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಉಪಸ್ಥಿತಿಯಲ್ಲಿ ಏಮ್ಸ್ ಆಸ್ಪತ್ರೆಯಲ್ಲಿ ದೇಶಾದ್ಯಂತ ಏಕಕಾಲದಲ್ಲಿ ನಡೆಯುವ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಇದೇ ವೇಳೆ, ಏಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಕೂಡ ಕೊರೊನಾ ಲಸಿಕೆಯನ್ನು ಪಡೆದರು.

ಭಾರತ ಸರಕಾರ ದೇಶದಲ್ಲಿ ಅಭಿವೃದ್ಧಿ ಪಡಿಸಲಾದ ಎರಡು ಲಸಿಕೆಗೆ ಅಧಿಕೃತ ಅನುಮೋದನೆ ನೀಡಿದೆ. ಭಾರತದ್ದೇ ಆದ ಸೇರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಭಾರತ್ ಬಯೋಟೆಕ್ ಸಂಸ್ಥೆಗಳು ಅಭಿವೃದ್ಧಿ ಪಡಿಸಿರುವ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಯನ್ನು ದೇಶಾದ್ಯಂತ ಜನರಿಗೆ ನೀಡಲು ಸರಕಾರ ಒಪ್ಪಿಗೆ ನೀಡಿದೆ. ಮೊದಲ ಹಂತದಲ್ಲಿ ಕೊರೊನಾ ವಿರುದ್ಧ ಹೋರಾಡಿದ ಆರೋಗ್ಯ ಸಿಬಂದಿಗೆ ಲಸಿಕೆಯನ್ನು ನೀಡಲು ಸರಕಾರ ಮುಂದಾಗಿದೆ.

ಲಸಿಕೆ ವಿತರಣೆಗೂ ಮುನ್ನ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕೆಲವು ದೇಶಗಳ ಜನಸಂಖ್ಯೆಯೇ 3 ಕೋಟಿಗಿಂತ ಕಡಿಮೆ ಇದೆ. ಅಂಥದ್ರಲ್ಲಿ ಭಾರತದಲ್ಲಿ ಮೊದಲ ಹಂತದಲ್ಲೇ ಮೂರು ಕೋಟಿ ಜನರಿಗೆ ಕೊರೊನಾ ವಿರುದ್ಧ ಲಸಿಕೆ ನೀಡಲು ತಯಾರಿ ನಡೆಸಿದ್ದು ದೊಡ್ಡ ಸಾಧನೆ. ಇದಕ್ಕಾಗಿ ನಮ್ಮ ವಿಜ್ಞಾನಿಗಳನ್ನು ಅಭಿನಂದಿಸುತ್ತೇನೆ. ಸಣ್ಣ ಅವಧಿಯಲ್ಲಿ ಸ್ವದೇಶಿಯಾಗಿ ಲಸಿಕೆಯನ್ನು ಅಭಿವೃದ್ಧಿ ಪಡಿಸಿದ್ದು ಭಾರತೀಯ ವಿಜ್ಞಾನಿಗಳು ಸ್ವಾವಲಂಬನೆಯತ್ತ ಮುನ್ನಗ್ಗುತ್ತಿರುವುದರ ಸಂಕೇತ ಎಂದು ಬಣ್ಣಿಸಿದರು.
#WATCH | Manish Kumar, a sanitation worker, becomes the first person to receive COVID-19 vaccine jab at AIIMS, Delhi in presence of Union Health Minister Harsh Vardhan. pic.twitter.com/6GKqlQM07d
— ANI (@ANI) January 16, 2021
#WATCH | AIIMS Director Dr Randeep Guleria receives COVID-19 vaccine shot at AIIMS, Delhi. pic.twitter.com/GFvZ2lgfj3
— ANI (@ANI) January 16, 2021
The national capital has been one of the worst-hit by Covid-19 among Indian cities, with 6.31 lakh infected people till now and 10,732 deaths related to the pandemic.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm