ಬ್ರೇಕಿಂಗ್ ನ್ಯೂಸ್
16-01-21 01:46 pm Headline Karnataka News Network ದೇಶ - ವಿದೇಶ
Photo credits : Photo Credits: ANI
ನವದೆಹಲಿ, ಜ.16: ಕೊರೊನಾ ಮಹಾಮಾರಿಯ ವಿರುದ್ಧ ಭಾರತದಲ್ಲಿ ಜಗತ್ತಿನಲ್ಲೇ ಅತಿದೊಡ್ಡ ಲಸಿಕಾ ಅಭಿಯಾನ ನಡೆದಿದೆ. ಮೊದಲ ಹಂತದಲ್ಲಿ ಮೂರು ಕೋಟಿ ಆರೋಗ್ಯ ಕಾರ್ಯಕರ್ತರು ಮತ್ತು ಸಿಬಂದಿಗೆ ಈ ಲಸಿಕೆ ದೊರೆಯಲಿದ್ದು, ಮೊದಲ ಕೋವಿಡ್ ಲಸಿಕೆಯನ್ನು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮನೀಶ್ ಕುಮಾರ್ ಎಂಬ ಪೌರ ಕಾರ್ಮಿಕನಿಗೆ ನೀಡಲಾಗಿದೆ.
ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಉಪಸ್ಥಿತಿಯಲ್ಲಿ ಏಮ್ಸ್ ಆಸ್ಪತ್ರೆಯಲ್ಲಿ ದೇಶಾದ್ಯಂತ ಏಕಕಾಲದಲ್ಲಿ ನಡೆಯುವ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಇದೇ ವೇಳೆ, ಏಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಕೂಡ ಕೊರೊನಾ ಲಸಿಕೆಯನ್ನು ಪಡೆದರು.
ಭಾರತ ಸರಕಾರ ದೇಶದಲ್ಲಿ ಅಭಿವೃದ್ಧಿ ಪಡಿಸಲಾದ ಎರಡು ಲಸಿಕೆಗೆ ಅಧಿಕೃತ ಅನುಮೋದನೆ ನೀಡಿದೆ. ಭಾರತದ್ದೇ ಆದ ಸೇರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಭಾರತ್ ಬಯೋಟೆಕ್ ಸಂಸ್ಥೆಗಳು ಅಭಿವೃದ್ಧಿ ಪಡಿಸಿರುವ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಯನ್ನು ದೇಶಾದ್ಯಂತ ಜನರಿಗೆ ನೀಡಲು ಸರಕಾರ ಒಪ್ಪಿಗೆ ನೀಡಿದೆ. ಮೊದಲ ಹಂತದಲ್ಲಿ ಕೊರೊನಾ ವಿರುದ್ಧ ಹೋರಾಡಿದ ಆರೋಗ್ಯ ಸಿಬಂದಿಗೆ ಲಸಿಕೆಯನ್ನು ನೀಡಲು ಸರಕಾರ ಮುಂದಾಗಿದೆ.
ಲಸಿಕೆ ವಿತರಣೆಗೂ ಮುನ್ನ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕೆಲವು ದೇಶಗಳ ಜನಸಂಖ್ಯೆಯೇ 3 ಕೋಟಿಗಿಂತ ಕಡಿಮೆ ಇದೆ. ಅಂಥದ್ರಲ್ಲಿ ಭಾರತದಲ್ಲಿ ಮೊದಲ ಹಂತದಲ್ಲೇ ಮೂರು ಕೋಟಿ ಜನರಿಗೆ ಕೊರೊನಾ ವಿರುದ್ಧ ಲಸಿಕೆ ನೀಡಲು ತಯಾರಿ ನಡೆಸಿದ್ದು ದೊಡ್ಡ ಸಾಧನೆ. ಇದಕ್ಕಾಗಿ ನಮ್ಮ ವಿಜ್ಞಾನಿಗಳನ್ನು ಅಭಿನಂದಿಸುತ್ತೇನೆ. ಸಣ್ಣ ಅವಧಿಯಲ್ಲಿ ಸ್ವದೇಶಿಯಾಗಿ ಲಸಿಕೆಯನ್ನು ಅಭಿವೃದ್ಧಿ ಪಡಿಸಿದ್ದು ಭಾರತೀಯ ವಿಜ್ಞಾನಿಗಳು ಸ್ವಾವಲಂಬನೆಯತ್ತ ಮುನ್ನಗ್ಗುತ್ತಿರುವುದರ ಸಂಕೇತ ಎಂದು ಬಣ್ಣಿಸಿದರು.
#WATCH | Manish Kumar, a sanitation worker, becomes the first person to receive COVID-19 vaccine jab at AIIMS, Delhi in presence of Union Health Minister Harsh Vardhan. pic.twitter.com/6GKqlQM07d
— ANI (@ANI) January 16, 2021
#WATCH | AIIMS Director Dr Randeep Guleria receives COVID-19 vaccine shot at AIIMS, Delhi. pic.twitter.com/GFvZ2lgfj3
— ANI (@ANI) January 16, 2021
The national capital has been one of the worst-hit by Covid-19 among Indian cities, with 6.31 lakh infected people till now and 10,732 deaths related to the pandemic.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:37 am
Mangalore Correspondent
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm