ಬ್ರೇಕಿಂಗ್ ನ್ಯೂಸ್
31-07-20 11:49 am Headline Karnataka News Network ದೇಶ - ವಿದೇಶ
ನವದೆಹಲಿ(ಜು.30): ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋನಿಯಾ ಗಾಂಧಿಯವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಿ.ಎಸ್.ರಾಣಾ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. ಇಂದು ಸಂಜೆ 7 ಗಂಟೆ ಸಮಯದಲ್ಲಿ ಸೋನಿಯಾ ಗಾಂಧಿ ಅಸ್ವಸ್ಥರಾಗಿದ್ದು, ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿದೆ ಎನ್ನಲಾಗಿದೆ.
ಮೂಲಗಳ ಪ್ರಕಾರ, ನಿಯಮಿತ ವೈದ್ಯಕೀಯ ತಪಾಸಣೆಗಾಗಿ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗಾಗಿ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸುದ್ದಿ ಸಂಸ್ಥೆಗಳ ಪ್ರಕಾರ, ರೊಟೀನ್ ಚೆಕ್-ಅಪ್ಗಾಗಿ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಸೋನಿಯಾ ಅವರಿಗೆ ಕೆಲವು ತಪಾಸಣೆಗಳನ್ನು ಮಾಡಬೇಕಿದ್ದು, ಈ ಕಾರಣಕ್ಕಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಹಿಂದೆ ಅಂದರೆ ಫೆಬ್ರವರಿ ತಿಂಗಳಿನಲ್ಲಿಯೂ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಆಗಲೂ ಸಹ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ಮಂಡನೆಯಾಗಿದ್ದ ಕೇಂದ್ರ ಬಜೆಟ್ಗೂ ಸೋನಿಯಾ ಗಾಂಧಿ ಗೈರಾಗಿದ್ದರು.
ಕಳೆದ ವರ್ಷ ಸೋನಿಯಾ ಗಾಂಧಿ ಅವರು ಅಮೆರಿಕದಲ್ಲಿ ಚಿಕಿತ್ಸೆ ಪಡೆದು ವಾಪಸ್ಸಾಗಿದ್ದರು. 2017 ಫೆಬ್ರವರಿಯಲ್ಲಿ ಕಲುಷಿತ ಆಹಾರ ಸೇವನೆ ಮತ್ತು 2018ರಲ್ಲಿ ಉಸಿರಾಟದ ಸಮಸ್ಯೆ ಕಾರಣಕ್ಕೆ ಸೋನಿಯಾ ಗಾಂಧಿ ಅವರನ್ನು ಇದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯ ಡಾ. ಡಿ.ಎಸ್. ರಾಣಾ ಅವರು ಆ ವೇಳೆ ತಪಾಸಣೆ ನಡೆಸಿ ಸೋನಿಯಾ ಅವರು ಅಸ್ತಮಾದಿಂದ ಬಳಲುತ್ತಿದ್ದಾರೆ ಎಂದಿದ್ದರು.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm