ಬ್ರೇಕಿಂಗ್ ನ್ಯೂಸ್
23-01-21 02:03 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.23: ವಿದೇಶಗಳಲ್ಲಿ ಮಹಾಮಾರಿಯಾಗಿ ಹರಡುತ್ತಿರುವ ಕೊರೊನಾ ವಿರುದ್ಧ ಹೋರಾಡುವ ಕೋವಿಡ್ ಲಸಿಕೆಯನ್ನು ಕೊಟ್ಟ ಭಾರತಕ್ಕೆ ಬ್ರೆಜಿಲ್ ವಿಶೇಷ ರೀತಿಯಲ್ಲಿ ಧನ್ಯವಾದ ಸಲ್ಲಿಸಿದೆ. ಸಂಜೀವಿನಿ ಹೊತ್ತು ತಂದ ಹನುಮಂತನಂತೆ ಕೊರೊನಾ ಲಸಿಕೆಯನ್ನು ಬಿಂಬಿಸಿ ಬ್ರೆಜಿಲ್ ಅಧ್ಯಕ್ಷರು ಟ್ವೀಟ್ ಮಾಡಿದ್ದು ಜಗತ್ತಿನ ಗಮನ ಸೆಳೆದಿದೆ.
ರಾಮಾಯಣದಲ್ಲಿ ಇಂದ್ರಜಿತುವಿನ ಹೊಡೆತಕ್ಕೆ ಅಡ್ಡಬಿದ್ದ ಲಕ್ಷ್ಮಣನ ಉಳಿಸುವುದಕ್ಕಾಗಿ ಹನುಮಂತ ಸಂಜೀವಿನಿ ಪರ್ವತವನ್ನೇ ಹೊತ್ತು ತರುತ್ತಾನೆ. ಆಕಾಶ ಮಾರ್ಗದಲ್ಲಿ ಹಾರಿಕೊಂಡು ಬರುವ ಹನುಮಂತ ಭಾರತದಲ್ಲಿ ದೇವರಾಗಿ ಪೂಜಿಸಲ್ಪಡುತ್ತಾನೆ. ಭಾರತ ಮೂಲದ ರಾಮಾಯಣದ ಕಥೆಯನ್ನಾಧರಿಸಿದ ಹನುಮಂತನ ಚಿತ್ರವನ್ನು ಈಗ ಬ್ರೆಜಿಲ್ ಅಧ್ಯಕ್ಷರು ಭಾರತದ ಪರವಾಗಿ ಟ್ವೀಟ್ ಮಾಡಿದ್ದು, ಜಗ ಮೆಚ್ಚುವಂತೆ ಮಾಡಿದೆ.
ಈಗಾಗ್ಲೇ ಭಾರತದಿಂದ ಅನೇಕ ದೇಶಗಳಿಗೆ ಕೊರೊನಾ ಲಸಿಕೆಯನ್ನು ನೀಡಲಾಗಿದೆ. ಅದೇ ರೀತಿ ಬ್ರೆಜಿಲ್ ದೇಶಕ್ಕೆ 20 ಲಕ್ಷ ಲಸಿಕೆಯನ್ನು ನೀಡಿದ್ದು, ಅದಕ್ಕಾಗಿ ಬ್ರೆಜಿಲ್ ಅಧ್ಯಕ್ಷ ಜೈಲ್ ಬೋಲ್ಸೊನಾರೊ ಆನಂದಗೊಂಡು ಹನುಮಂತ ದೇವರ ಚಿತ್ರವನ್ನು ಟ್ವೀಟ್ ಮಾಡಿ ಭಾರತಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಹನುಮಂತ ಕೊರೊನಾ ಲಸಿಕೆಯನ್ನು ಸಂಜೀವಿನಿಯ ರೂಪದಲ್ಲಿ ಭಾರತದಿಂದ ಬ್ರೆಜಿಲ್ ದೇಶಕ್ಕೆ ಹೊತ್ತು ತರುವ ರೀತಿಯಲ್ಲಿ ಚಿತ್ರವನ್ನು ಹಂಚಿಕೊಂಡಿದ್ದು, ಭಾರತದ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ನಮಸ್ಕಾರ ಪ್ರಧಾನಿ ಮೋದಿಯವರೇ. ಜಾಗತಿಕ ಬಿಕ್ಕಟ್ಟನ್ನು ಎದುರಿಸಲು ಪಾಲುದಾರಿಕೆಯನ್ನು ತೋರಿದ್ದಕ್ಕಾಗಿ ಬ್ರೆಜಿಲ್ ಕೃತಜ್ಞತೆ ವ್ಯಕ್ತಪಡಿಸುತ್ತದೆ. ಭಾರತದಿಂದ ಕೊರೊನಾ ಲಸಿಕೆಯನ್ನು ರಫ್ತು ಮಾಡಿದ್ದಕ್ಕಾಗಿ ಧನ್ಯವಾದಗಳು ಎಂದು ಬ್ರೆಜಿಲ್ ಭಾಷೆಯಲ್ಲಿ ಮಾಡಿದ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಇದಕ್ಕೆ ರೀಟ್ವೀಟ್ ಮಾಡಿ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಗೌರವ ನಮ್ಮದು. ಬ್ರೆಜಿಲ್ ಜೊತೆ ಸೇರಿ ನಾವು ಕೋವಿಡ್ 19 ಬಿಕ್ಕಟ್ಟನ್ನು ಎದುರಿಸುತ್ತೇವೆ. ಆರೋಗ್ಯ ಕ್ಷೇತ್ರದಲ್ಲಿ ಪಾಲುದಾರಿಕೆ ಹೊಂದುವುದನ್ನು ಮುಂದುವರಿಸುತ್ತೇವೆ ಎಂದಿದ್ದಾರೆ.
- Namaskar, Primeiro Ministro @narendramodi
— Jair M. Bolsonaro (@jairbolsonaro) January 22, 2021
- O Brasil sente-se honrado em ter um grande parceiro para superar um obstáculo global. Obrigado por nos auxiliar com as exportações de vacinas da Índia para o Brasil.
- Dhanyavaad! धनयवाद pic.twitter.com/OalUTnB5p8
The honour is ours, President @jairbolsonaro to be a trusted partner of Brazil in fighting the Covid-19 pandemic together. We will continue to strengthen our cooperation on healthcare. https://t.co/0iHTO05PoM
— Narendra Modi (@narendramodi) January 23, 2021
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:37 am
Mangalore Correspondent
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm