ಬ್ರೇಕಿಂಗ್ ನ್ಯೂಸ್
23-01-21 02:03 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.23: ವಿದೇಶಗಳಲ್ಲಿ ಮಹಾಮಾರಿಯಾಗಿ ಹರಡುತ್ತಿರುವ ಕೊರೊನಾ ವಿರುದ್ಧ ಹೋರಾಡುವ ಕೋವಿಡ್ ಲಸಿಕೆಯನ್ನು ಕೊಟ್ಟ ಭಾರತಕ್ಕೆ ಬ್ರೆಜಿಲ್ ವಿಶೇಷ ರೀತಿಯಲ್ಲಿ ಧನ್ಯವಾದ ಸಲ್ಲಿಸಿದೆ. ಸಂಜೀವಿನಿ ಹೊತ್ತು ತಂದ ಹನುಮಂತನಂತೆ ಕೊರೊನಾ ಲಸಿಕೆಯನ್ನು ಬಿಂಬಿಸಿ ಬ್ರೆಜಿಲ್ ಅಧ್ಯಕ್ಷರು ಟ್ವೀಟ್ ಮಾಡಿದ್ದು ಜಗತ್ತಿನ ಗಮನ ಸೆಳೆದಿದೆ.
ರಾಮಾಯಣದಲ್ಲಿ ಇಂದ್ರಜಿತುವಿನ ಹೊಡೆತಕ್ಕೆ ಅಡ್ಡಬಿದ್ದ ಲಕ್ಷ್ಮಣನ ಉಳಿಸುವುದಕ್ಕಾಗಿ ಹನುಮಂತ ಸಂಜೀವಿನಿ ಪರ್ವತವನ್ನೇ ಹೊತ್ತು ತರುತ್ತಾನೆ. ಆಕಾಶ ಮಾರ್ಗದಲ್ಲಿ ಹಾರಿಕೊಂಡು ಬರುವ ಹನುಮಂತ ಭಾರತದಲ್ಲಿ ದೇವರಾಗಿ ಪೂಜಿಸಲ್ಪಡುತ್ತಾನೆ. ಭಾರತ ಮೂಲದ ರಾಮಾಯಣದ ಕಥೆಯನ್ನಾಧರಿಸಿದ ಹನುಮಂತನ ಚಿತ್ರವನ್ನು ಈಗ ಬ್ರೆಜಿಲ್ ಅಧ್ಯಕ್ಷರು ಭಾರತದ ಪರವಾಗಿ ಟ್ವೀಟ್ ಮಾಡಿದ್ದು, ಜಗ ಮೆಚ್ಚುವಂತೆ ಮಾಡಿದೆ.
ಈಗಾಗ್ಲೇ ಭಾರತದಿಂದ ಅನೇಕ ದೇಶಗಳಿಗೆ ಕೊರೊನಾ ಲಸಿಕೆಯನ್ನು ನೀಡಲಾಗಿದೆ. ಅದೇ ರೀತಿ ಬ್ರೆಜಿಲ್ ದೇಶಕ್ಕೆ 20 ಲಕ್ಷ ಲಸಿಕೆಯನ್ನು ನೀಡಿದ್ದು, ಅದಕ್ಕಾಗಿ ಬ್ರೆಜಿಲ್ ಅಧ್ಯಕ್ಷ ಜೈಲ್ ಬೋಲ್ಸೊನಾರೊ ಆನಂದಗೊಂಡು ಹನುಮಂತ ದೇವರ ಚಿತ್ರವನ್ನು ಟ್ವೀಟ್ ಮಾಡಿ ಭಾರತಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಹನುಮಂತ ಕೊರೊನಾ ಲಸಿಕೆಯನ್ನು ಸಂಜೀವಿನಿಯ ರೂಪದಲ್ಲಿ ಭಾರತದಿಂದ ಬ್ರೆಜಿಲ್ ದೇಶಕ್ಕೆ ಹೊತ್ತು ತರುವ ರೀತಿಯಲ್ಲಿ ಚಿತ್ರವನ್ನು ಹಂಚಿಕೊಂಡಿದ್ದು, ಭಾರತದ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ನಮಸ್ಕಾರ ಪ್ರಧಾನಿ ಮೋದಿಯವರೇ. ಜಾಗತಿಕ ಬಿಕ್ಕಟ್ಟನ್ನು ಎದುರಿಸಲು ಪಾಲುದಾರಿಕೆಯನ್ನು ತೋರಿದ್ದಕ್ಕಾಗಿ ಬ್ರೆಜಿಲ್ ಕೃತಜ್ಞತೆ ವ್ಯಕ್ತಪಡಿಸುತ್ತದೆ. ಭಾರತದಿಂದ ಕೊರೊನಾ ಲಸಿಕೆಯನ್ನು ರಫ್ತು ಮಾಡಿದ್ದಕ್ಕಾಗಿ ಧನ್ಯವಾದಗಳು ಎಂದು ಬ್ರೆಜಿಲ್ ಭಾಷೆಯಲ್ಲಿ ಮಾಡಿದ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಇದಕ್ಕೆ ರೀಟ್ವೀಟ್ ಮಾಡಿ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಗೌರವ ನಮ್ಮದು. ಬ್ರೆಜಿಲ್ ಜೊತೆ ಸೇರಿ ನಾವು ಕೋವಿಡ್ 19 ಬಿಕ್ಕಟ್ಟನ್ನು ಎದುರಿಸುತ್ತೇವೆ. ಆರೋಗ್ಯ ಕ್ಷೇತ್ರದಲ್ಲಿ ಪಾಲುದಾರಿಕೆ ಹೊಂದುವುದನ್ನು ಮುಂದುವರಿಸುತ್ತೇವೆ ಎಂದಿದ್ದಾರೆ.
- Namaskar, Primeiro Ministro @narendramodi
— Jair M. Bolsonaro (@jairbolsonaro) January 22, 2021
- O Brasil sente-se honrado em ter um grande parceiro para superar um obstáculo global. Obrigado por nos auxiliar com as exportações de vacinas da Índia para o Brasil.
- Dhanyavaad! धनयवाद pic.twitter.com/OalUTnB5p8
The honour is ours, President @jairbolsonaro to be a trusted partner of Brazil in fighting the Covid-19 pandemic together. We will continue to strengthen our cooperation on healthcare. https://t.co/0iHTO05PoM
— Narendra Modi (@narendramodi) January 23, 2021
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm