ಬ್ರೇಕಿಂಗ್ ನ್ಯೂಸ್
30-01-21 12:10 pm Headline Karnataka News Network ದೇಶ - ವಿದೇಶ
ನವದೆಹಲಿ, ಜನವರಿ 30: ಡಾ. ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿನ ಇಸ್ರೇಲ್ ರಾಯಭಾರ ಕಚೇರಿ ಎದುರು ಶುಕ್ರವಾರ ಸಂಭವಿಸಿದ ಲಘು ಸಾಮರ್ಥ್ಯದ ಐಇಡಿ ಸ್ಫೋಟ ತೀವ್ರ ಆತಂಕ ಸೃಷ್ಟಿಸಿದೆ. ಭಾರತ ಮತ್ತು ಇಸ್ರೇಲ್ ನಡುವಣ ರಾಜತಾಂತ್ರಿಕ ಸಂಬಂಧ ಸ್ಥಾಪನೆಯ 29ನೇ ವಾರ್ಷಿಕೋತ್ಸವದಂದೇ ಈ ಸ್ಫೋಟ ಸಂಭವಿಸಿದೆ.
ರಸ್ತೆ ವಿಭಜಕದಲ್ಲಿನ ಹೂವಿನ ಕುಂಡ ಒಂದರಲ್ಲಿ ಈ ಬಾಂಬ್ ಇರಿಸಲಾಗಿದ್ದು, ಆ ಸ್ಥಳದಲ್ಲಿ ಲಕೋಟೆಯೊಂದು ಪತ್ತೆಯಾಗಿದೆ. ಅದರ ಮೇಲ್ಭಾಗದಲ್ಲಿ 'ಇಸ್ರೇಲ್ ರಾಜತಾಂತ್ರಿಕ ರಾಯಭಾರಿಗೆ' ಎಂದು ಬರೆಯಲಾಗಿದೆ. ಲಕೋಟೆ ಒಳಗಿನ ಪತ್ರದಲ್ಲಿ ಬೆದರಿಕೆಯ ಬರಹವಿದ್ದು, ಈ ಸ್ಫೋಟ ಕೇವಲ ಟ್ರೇಲರ್ ಅಷ್ಟೇ ಎಂಬ ಎಚ್ಚರಿಕೆ ನೀಡಲಾಗಿದೆ.
ಇದರ ಜತೆಗೆ ಇರಾನ್ನ ಇಬ್ಬರು 'ಹುತಾತ್ಮ'ರಾದ ಖಾಸಿಂ ಸೊಲೆಮನಿ ಮತ್ತು ಡಾ. ಮೊಹ್ಸೆನ್ ಫಖ್ರಿಜಾದೆಹ್ ಅವರ ಹೆಸರನ್ನು ಉಲ್ಲೇಖಿಸಲಾಗಿದೆ. ಹೀಗಾಗಿ ಇಸ್ರೇಲ್ ಕಚೇರಿ ಮುಂದೆ ನಡೆದ ಬಾಂಬ್ ಸ್ಫೋಟದ ಹಿಂದೆ ಇರಾನ್ ವ್ಯಕ್ತಿಗಳ ಕೈವಾಡ ಇದೆ ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಈ ಆರೋಪವನ್ನು ಇಸ್ರೇಲ್ ರಾಯಭಾರ ಕಚೇರಿ ನಿರಾಕರಿಸಿದೆ.
ಸ್ಥಳದಲ್ಲಿ ಬಾಂಬ್ ನಿಷ್ಕ್ರಿಯ ದಳ, ವಿಧಿ ವಿಜ್ಞಾನ ತಜ್ಞರು ಸೇರಿದಂತೆ ಅನೇಕ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಈ ಲಕೋಟೆ ಹಾಗೂ ಅದರಲ್ಲಿನ ಬರಹ ಬಹಳ ಮಹತ್ವದ ಸಾಕ್ಷಿ ಎಂದು ತನಿಖಾಧಿಕಾರಿಗಳು ಪರಿಗಣಿಸಿದ್ದಾರೆ. ಶುಕ್ರವಾರ ಸಂಜೆ 5.05 ಸಮಯಕ್ಕೆ ಇಸ್ರೇಲ್ ರಾಯಭಾರ ಕಚೇರಿಯಿಂದ 150 ಮೀಟರ್ ದೂರದಲ್ಲಿ ಈ ಸ್ಫೋಟ ಸಂಭವಿಸಿದೆ.
ಸ್ಫೋಟಕವನ್ನು ಪ್ಲಾಸ್ಟಿಕ್ ಚೀಲದಲ್ಲಿ ಇರಿಸಲಾಗಿದ್ದು, ಇಸ್ರೇಲ್ ರಾಯಭಾರ ಕಚೇರಿ ಮುಂದೆ ಸಾಗಿದ ಕಾರ್ ಒಂದರಿಂದ ಎಸೆಯಲಾಗಿದೆ. ಸಿಸಿಟಿವಿ ದೃಶ್ಯದಲ್ಲಿ ಈ ಕಾರಿನ ಚಲನವಲನ ಪತ್ತೆಯಾಗಿದೆ. ಅದರ ಚಾಲಕನನ್ನು ಪತ್ತೆಹಚ್ಚಲಾಗಿದ್ದು, ಆತನ ಮಾಹಿತಿ ಆಧರಿಸಿ ಶಂಕಿತರ ರೇಖಾಚಿತ್ರ ಸಿದ್ಧಪಡಿಸಲಾಗುತ್ತಿದೆ.
'ಘಟನೆ ನಡೆದ ಸ್ಥಳದಲ್ಲಿ ತಂಪು ಪಾನೀಯದ ಕ್ಯಾನ್ ಹಾಗೂ ಬಾಲ್ ಬೇರಿಂಗ್ಗಳು ಪತ್ತೆಯಾಗಿವೆ. ಸ್ಫೋಟಗಳು ಮತ್ತು ಬಾಲ್ ಬೇರಿಂಗ್ಗಳನ್ನು ಕ್ಯಾನ್ ಒಳಗೆ ಇರಿಸಿದ್ದರು ಎಂದು ಮೇಲ್ನೋಟಕ್ಕೆ ಅನಿಸುತ್ತದೆ. ರಸ್ತೆಯ ಮೇಲೆ ಅದರ ಪರಿಣಾಮ ಉಂಟಾಗುವಂತೆ ಸ್ಫೋಟಕವನ್ನು ಇರಿಸಲಾಗಿತ್ತು. ಬಾಲ್ ಬೇರಿಂಗ್ಗಳು ಕಾರ್ಗಳಿಗೆ ಅಪ್ಪಳಿಸಿ ಗಾಜುಗಳು ಒಡೆದಿವೆ. ಸ್ಥಳದಲ್ಲಿ ಪೊಲೀಸರಿಗೆ ಯಾವುದೇ ಬ್ಯಾಟರಿ ಅಥವಾ ಸಾಧನ ಪತ್ತೆಯಾಗಿಲ್ಲ' ಎಂದು ಮೂಲಗಳು ತಿಳಿಸಿವೆ.
ಇರಾನ್ನ ಅತ್ಯಂತ ಶಕ್ತಿಶಾಲಿ ಮೇಜರ್ ಜನರಲ್ ಖಾಸಿಂ ಸೊಲೆಮನಿ ಅವರನ್ನು ಅಮೆರಿಕ ಸೇನೆಯು ಇರಾಕ್ನ ಬಾಗ್ದಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಭಾಗದಲ್ಲಿ ಡ್ರೋನ್ ದಾಳಿ ಮೂಲಕ ಹತ್ಯೆ ಮಾಡಿತ್ತು. ಹಾಗೆಯೇ ಇರಾನ್ನ ಅತ್ಯುನ್ನತ ಅಣು ವಿಜ್ಞಾನಿ ಡಾ. ಮೊಹ್ಸೆನ್ ಫಖ್ರಿಜಾದೆಹ್ ಅವರನ್ನು ಕಳೆದ ವರ್ಷದ ನವೆಂಬರ್ನಲ್ಲಿ ಹತ್ಯೆ ಮಾಡಲಾಗಿತ್ತು. ಇಸ್ರೇಲ್ ರಿಮೋಟ್ ಕಂಟ್ರೋಲ್ ಆಯುಧ ಬಳಸಿ ಈ ಕೊಲೆ ಮಾಡಿದೆ ಎಂದು ಇರಾನ್ ಆರೋಪಿಸಿತ್ತು. ಈ ಎರಡು ಹತ್ಯೆಗಳ ಸೇಡು ತೀರಿಸಿಕೊಳ್ಳಲು ಇರಾನ್ ಹವಣಿಸುತ್ತಿದೆ ಎಂದು ಹೇಳಲಾಗಿದೆ.
ಇಸ್ರೇಲ್ ರಾಯಭಾರ ಕಚೇರಿ ಆವರಣದಲ್ಲಿ ಬಾಂಬ್ ಸ್ಫೋಟ !!
ದೆಹಲಿ ಇಸ್ರೇಲ್ ರಾಯಭಾರ ಕಚೇರಿ ಬಳಿ ಬಾಂಬ್ ಸ್ಫೋಟ ; ಸಿಸಿಟಿವಿಯಲ್ಲಿ ಇಬ್ಬರು ಸೆರೆ
An Iranian hand is suspected behind the minor IED blast that took place on Friday outside the Israeli embassy in New Delhi. Sources say the letter recovered from the site of blast mentions the explosion as a “trailer”.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm