ಬ್ರೇಕಿಂಗ್ ನ್ಯೂಸ್
01-02-21 10:29 am Headline Karnataka News Network ದೇಶ - ವಿದೇಶ
ನವದೆಹಲಿ, ಫೆಬ್ರವರಿ.01: ಕೇಂದ್ರ ಸರ್ಕಾರದ ಇತಿಹಾಸದಲ್ಲೇ ಐತಿಹಾಸಿಕ ಆಯವ್ಯಯವನ್ನು ಮಂಡಿಸುವುದಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ತಂಡ ಸನ್ನದ್ಧವಾಗಿದೆ. ಬೆಳಗ್ಗೆ 11 ಗಂಟೆಗೆ ಆರಂಭವಾಗಲಿರುವ ಕೇಂದ್ರ ಬಜೆಟ್ 2021-22ರ ಮೇಲೆ ಇಡೀ ದೇಶದ ದೃಷ್ಟಿ ನೆಟ್ಟಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಮಂಡಿಸುತ್ತಿರುವ ಕೇಂದ್ರದ 9ನೇ ಆಯವ್ಯಯ ಇದಾಗಿದೆ.
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ದೇಶದ ಆರ್ಥಿಕತೆಯು ಪಾತಾಳಕ್ಕೆ ಕುಸಿದಿದೆ. ಹಳಿ ತಪ್ಪಿರುವ ಆರ್ಥಿಕತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಬಜೆಟ್ ಮಂಡಿಸುವ ನಿರೀಕ್ಷೆಗಳಿವೆ. ದೇಶದಲ್ಲಿ ಸಿದ್ಧಗೊಂಡಿರುವ ಕೊವಿಡ್-19 ಲಸಿಕೆಯು ಭಾರತದ ಪಾಲಿಗೆ ಒಂದು ಪ್ಲಸ್ ಪಾಯಿಂಟ್ ಆಗಿದೆ.
ಕೊರೊನಾವೈರಸ್ ಲಸಿಕೆಯಿಂದ ವಿಶ್ವ ಮಟ್ಟದಲ್ಲಿ ಭಾರತಕ್ಕೆ ಉತ್ತುಂಗದ ಸ್ಥಾನ ಸಿಕ್ಕಿದೆ. ಇದೇ ಅವಕಾಶವನ್ನು ದೇಶದ ಆರ್ಥಿಕತೆ ಬಲಪಡಿಸುವುದಕ್ಕಾಗಿ ಸದುಪಯೋಗಪಡಿಸಿಕೊಳ್ಳುವುದಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಯೋಜನೆ ಹಾಕಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಮತ್ತು ಭಾರತ ಲಾಕ್ ಡೌನ್ ನಿಂದಾಗಿ 2021ನೇ ಸಾಲಿನಲ್ಲಿ ಒಟ್ಟು ದೇಶೀಯ ಉತ್ಪನ್ನ ಪ್ರಮಾಣದಲ್ಲಿ ಶೇ.7 ರಿಂದ 8ರಷ್ಟು ಇಳಿಕೆಯಾಗಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ಸಂಸತ್ ನಲ್ಲಿ ಹಣಕಾಸು ಸಚಿವೆ ಮಂಡಿಸುತ್ತಿರುವ ಬಜೆಟ್ ನಲ್ಲಿ ಕೊರೊನಾವೈರಸ್ ಲಸಿಕೆಯ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಪಾಲು ಎಷ್ಟಿರುತ್ತದೆ ಎಂಬುದರ ಬಗ್ಗೆ ಹೆಚ್ಚು ನಿರೀಕ್ಷೆಗಳನ್ನು ಇಟ್ಟುಕೊಳ್ಳಲಾಗಿದೆ. ಆರೋಗ್ಯ ವಲಯಕ್ಕೆ ಎಷ್ಟು ಹಣವನ್ನು ಘೋಷಿಸಬಹುದು ಎನ್ನುವುದು ಸಾಕಷ್ಟು ಕುತೂಹಲವನ್ನು ಕೆರಳಿಸಿದೆ.
ದೇಶದ ಆರ್ಥಿಕತೆ ಬಲಪಡಿಸುವುದರ ಜೊತಗೆ ಶಿಕ್ಷಣ, ತೆರಿಗೆ, ಉದ್ಯೋಗ ಸೃಷ್ಟಿ, ಸಣ್ಣ ಕೈಗಾರಿಕೆ, ಬೃಹತ್ ಕೈಗಾರಿಕೆ, ಕ್ರೀಡೆ, ಮನರಂಜನೆ ಸೇರಿದಂತೆ ಹಲವು ವಲಯಗಳಿಗೆ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಯಾವ ರೀತಿ ಮೀಸಲಾತಿ ನೀಡಲಾಗಿರುತ್ತದೆ ಎಂಬುದರ ಮೇಲೆ ಲಕ್ಷ್ಯ ನೆಡಲಾಗಿದೆ.
Prime Minister Narendra Modi-led govt will present its most closely watched Budget 2021 today. The Budget 2021 has been tasked to get India back on track as the world’s fastest-growing major economy by boosting spending on job-creation and rural development while fighting back the coronavirus.
06-03-26 12:08 pm
HK News Staffer
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 12:17 pm
supritha Jain
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm