ಬ್ರೇಕಿಂಗ್ ನ್ಯೂಸ್
01-02-21 10:41 am Headline Karnataka News Network ದೇಶ - ವಿದೇಶ
ನವದೆಹಲಿ, ಫೆಬ್ರವರಿ.01: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ದಶಕದ ಮೊದಲ ಕೇಂದ್ರ ಬಜೆಟ್ ಮಂಡನೆಗೆ ರೆಡಿ ಆಗಿದ್ದಾರೆ. ನವದೆಹಲಿಯ ಸಂಸತ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ 9ನೇ ಬಜೆಟ್ ಮಂಡನೆ ಆಗಲಿದೆ.
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ದೇಶದ ಆರ್ಥಿಕತೆಯು ಪಾತಾಳಕ್ಕೆ ಕುಸಿದಿದೆ. ಹಳಿ ತಪ್ಪಿರುವ ಆರ್ಥಿಕತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಬಜೆಟ್ ಮಂಡಿಸುವ ನಿರೀಕ್ಷೆಗಳಿವೆ. ದೇಶದಲ್ಲಿ ಸಿದ್ಧಗೊಂಡಿರುವ ಕೊವಿಡ್-19 ಲಸಿಕೆಯು ಭಾರತದ ಪಾಲಿಗೆ ಒಂದು ಪ್ಲಸ್ ಪಾಯಿಂಟ್ ಆಗಿದೆ.
ದೇಶದ ಜನರಲ್ಲಿ ಆಸಕ್ತಿ ಮೂಡಿಸುವಂತಾ ಅಂಶಗಳೇನು. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ ಬಜೆಟ್ ವಿಶೇಷತೆಗಳೇನು ಎನ್ನುವುದರ ಕುರಿತು ಒಂದು ವರದಿ ಇಲ್ಲಿದೆ ನೋಡಿ.
ಕೇಂದ್ರ ಬಜೆಟ್ ವಿಶೇಷತೆಗಳು:
1. ಕೇಂದ್ರ ಸಂಸತ್ ನಲ್ಲಿ ಮಾಜಿ ಕೇಂದ್ರ ಸಚಿವ ಮುರಾರ್ಜಿ ದೇಸಾಯಿ ಅವರು ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ್ದರು. ಮುರಾರ್ಜಿ ದೇಸಾಯಿ 10 ಬಾರಿ ಬಜೆಟ್ ಮಂಡಿಸಿದ್ದರೆ, ಮಾಜಿ ಸಚಿವ ಪಿ. ಚಿದಂಬರಂ ಅವರು 9 ಬಾರಿ ಕೇಂದ್ರ ಬಜೆಟ್ ಮಂಡನೆ ಮಾಡಿದ್ದರು.
2. BUDGET ಎಂಬ ಪದವು ಫ್ರೆಂಚ್ ಭಾಷೆಯಲ್ಲಿ ಸಣ್ಣ ಚೀಲ ಅಂದರೆ 'ಬೌಗೆಟ್' ನಿಂದ ಬಂದಿದೆ.
3. 1860 ರಲ್ಲಿ ಸ್ಕಾಟಿಷ್ ಅರ್ಥಶಾಸ್ತ್ರಜ್ಞ ಮತ್ತು ರಾಜಕಾರಣಿ ಜೇಮ್ಸ್ ವಿಲ್ಸನ್ ಅವರು ಮೊದಲ ಭಾರತೀಯ ಬಜೆಟ್ ಮಂಡಿಸಿದ್ದರು.
4. ಭಾರತದ ಮೊದಲ ಸ್ವತಂತ್ರ ಬಜೆಟ್ ಅನ್ನು ಆರ್.ಕೆ.ಶಣ್ಮುಖನ್ ಚೆಟ್ಟಿ ಅವರು ನವೆಂಬರ್ 26, 1947 ರಂದು ಮಂಡಿಸಿದ್ದರು.
5. ಕೇಂದ್ರ ಬಜೆಟ್ ಮತ್ತು ರೈಲ್ವೆ ಬಜೆಟ್ ನ್ನು 2017ರವರೆಗೂ ಪ್ರತ್ಯೇಕವಾಗಿ ಮಂಡಿಸಲಾಗುತ್ತಿದ್ದು, ನಂತರದಲ್ಲಿ ವಿಲೀನಗೊಳಿಸಲಾಯಿತು.
6. 2000ನೇ ವರ್ಷದವರೆಗೂ ಫೆಬ್ರವರಿ ಕೊನೆಯ ದಿನದಂದು ಸಂಜೆ 5 ಗಂಟೆಗೆ ಕೇಂದ್ರ ಬಜೆಟ್ ಮಂಡಿಸಲಾಗುತ್ತಿತ್ತು. ಆದರೆ 2001ರಲ್ಲಿ ಅಂದಿನ ಹಣಕಾಸು ಸಚಿವ ಯಶ್ವಂತ್ ಸಿನ್ಹಾ ಇದನ್ನು ಬೆಳಿಗ್ಗೆ 11ಕ್ಕೆ ಬದಲಾಯಿಸಿದ್ದರು.
7. 2014ರಲ್ಲಿ ಅಂದಿನ ಕೇಂದ್ರ ಹಣಕಾಸು ಸಚಿವರಾಗಿದ್ದ ಅರುಣ್ ಜೇಟ್ಲಿ ಸುದೀರ್ಘ ಎಂದ 2 ಗಂಟೆ 50 ನಿಮಿಷಗಳವರೆಗೂ ಬಜೆಟ್ ಮಂಡಿಸಿದ್ದರು.
8. 1955 ರವರೆಗೆ, ಕೇಂದ್ರ ಬಜೆಟ್ ಅನ್ನು ಇಂಗ್ಲಿಷ್ ನಲ್ಲಿ ಮಾತ್ರ ಮಂಡಿಸಲಾಗುತ್ತಿತ್ತು. ಆ ವರ್ಷದ ನಂತರ, ಕಾಂಗ್ರೆಸ್ ನೇತೃತ್ವದ ಸರ್ಕಾರ ಬಜೆಟ್ ಪತ್ರಿಕೆಗಳನ್ನು ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮುದ್ರಿಸಲು ನಿರ್ಧರಿಸಿತು.
9. 2019ರಲ್ಲಿ, ಕೇಂದ್ರ ಹಣಕಾಸು ಸಚಿವೆ ಸೀತಾರಾಮನ್ ಅವರು ಸಾಂಪ್ರದಾಯಿಕ ಬಜೆಟ್ ಬ್ರೀಫ್ಕೇಸ್ ಬದಲಿಗೆ ರಿಬ್ಬನ್ ನಿಂದ ಸುತ್ತಿದ ರಾಷ್ಟ್ರೀಯ ಲಾಂಛನದೊಂದಿಗೆ ಕೆಂಪು ಪ್ಯಾಕೆಟ್ ಅನ್ನು ತೆಗೆದುಕೊಂಡು ಹೋಗುವುದನ್ನು ಆರಂಭಿಸಿದರು.
10. 1970ರಲ್ಲಿ ಇಂದಿರಾ ಗಾಂಧಿಯವರು ಹಣಕಾಸು ಸಚಿವರಾಗಿ ಕೇಂದ್ರ ಬಜೆಟ್ ಮಂಡಿಸಿದ ಮೊದಲ ಮಹಿಳೆ ಎನಿಸಿದ್ದಾರೆ.
What is Budget, why is it named budget all that you need to know about budget 2021.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm