ಬ್ರೇಕಿಂಗ್ ನ್ಯೂಸ್
01-02-21 01:05 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆಬ್ರವರಿ 1: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರೈಲ್ವೇ ವ್ಯವಸ್ಥೆಯ ಅಭಿವೃದ್ಧಿಗೆ ಹೊಸ ಘೋಷಣೆಗಳನ್ನು ಮಾಡಿದ್ದಾರೆ. 2021-22ನೇ ಸಾಲಿನ ರೈಲ್ವೆ ಯೋಜನೆಗಳಿಗೆ 1,10,055 ಕೋಟಿ ರೂ ಅನುದಾನ ಘೋಷಿಸಿದ್ದಾರೆ.
ಭಾರತೀಯ ರೈಲ್ವೆಯು 2030ರ ವೇಳೆಗೆ ರಾಷ್ಟ್ರೀಯ ರೈಲು ಯೋಜನೆಯನ್ನು ಹೊಂದಲಿದೆ. ಇದು ಭವಿಷ್ಯದ ರೈಲ್ವೆ ವ್ಯವಸ್ಥೆಯ ಉದ್ದೇಶ ಒಳಗೊಂಡಿರಲಿದೆ. ರೈಲ್ವೇಸ್ 2.17 ಲಕ್ಷ ಕೋಟಿ ರೂದಷ್ಟು ಮೊತ್ತದ ದಾಖಲೆಯ ಬಂಡವಾಳ ವೆಚ್ಚವನ್ನು ಹೊಂದಿದೆ. ರೈಲ್ವೆಗೆ 1.15 ಲಕ್ಷ ಕೋಟಿ ರೂ ನೀಡುತ್ತಿದ್ದು, ಅದರಲ್ಲಿ ಸಿಎಪಿಇಎಕ್ಸ್ (ಕ್ಯಾಪಿಟಲ್ ಎಕ್ಸ್ಪೆಂಡಿಚರ್) ಮೊತ್ತ 1.07 ಲಕ್ಷ ಕೋಟಿ ರೂ ಇರಲಿದೆ. ರೈಲ್ವೆಯು ಮುಂದೆ ಸರಕು ಸಾಗಣೆ ಕಾರಿಡಾರ್ಗೆ ಹೆಚ್ಚಿನ ಗಮನ ನೀಡಲಿದೆ.
ಸರ್ಕಾರವು ಭವಿಷ್ಯದಲ್ಲಿನ ಸರಕು ಕಾರಿಡಾರ್ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಿದ್ದು, 18,000 ಕೋಟಿ ರೂ ಮೊತ್ತದ ಸಾರ್ವಜನಿಕ ಸಾರಿಗೆಯ ಪಾಲನ್ನು ಪಡೆದುಕೊಳ್ಳುವತ್ತ ಕೆಲಸ ಮಾಡಲಿದ್ದೇವೆ. 2023ರ ಡಿಸೆಂಬರ್ ವೇಳೆಗೆ 100 ಬ್ರಾಡ್ಗೇಜ್ ರೈಲ್ವೇ ಹಳಿಗಳ ವಿದ್ಯುದೀಕರಣ ನಡೆಯಲಿದೆ.
ದೇಶದಾದ್ಯಂತ 702 ಕಿಮೀಯಷ್ಟು ಮೆಟ್ರೋ ರೈಲು ಈಗಾಗಲೇ ಕಾರ್ಯಾಚರಣೆ ನಡೆಸುತ್ತಿದೆ. ಇನ್ನೂ 1016 ಕಿಮೀ ದೂರದ ಮಾರ್ಗಗಳ ಕಾಮಗಾರಿಗಳು ನಡೆಯುತ್ತಿವೆ. ಟೈರ್ 2 ನಗರಗಳು ಮತ್ತು ಟೈರ್ 1 ನಗರಗಳ ಸುತ್ತಮುತ್ತಲು ಮೆಟ್ರೋಲೈಟ್ ಮತ್ತು ಮೆಟ್ರೊನಿಯೊ ತಂತ್ರಜ್ಞಾನಗಳನ್ನು ಅಳವಡಿಸಲಾಗುತ್ತದೆ ಎಂದು ನಿರ್ಮಲಾ ಪ್ರಕಟಿಸಿದ್ದಾರೆ.
ಟೈರ್ 2 ಮತ್ತು ಟೈರ್ 3 ನಗರಗಳಲ್ಲಿನ ಅನೇಕ ವಿಮಾನ ನಿಲ್ದಾಣಗಳು ಖಾಸಗೀಕರಣಗೊಳ್ಳಲಿವೆ. ರಸ್ತೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ 1.18 ಟ್ರಿಲಿಯನ್ ಕೋಟಿ ರೂ ಅನುದಾನ ನೀಡಲಾಗುತ್ತಿದ್ದು, ಇದರಲ್ಲಿ 1.08 ಟ್ರಿಲಿಯನ್ ಕೋಟಿ ರೂ ಮೊತ್ತವು ಬಂಡವಾಳ ವೆಚ್ಚವಾಗಿರಲಿದೆ. ಇದು ಈವರೆಗಿನ ವೆಚ್ಚದಲ್ಲಿಯೇ ಅತ್ಯಧಿಕವಾಗಲಿದೆ.
Finance Minister Nirmala Sitharaman on Monday alloted Rs 1,10,055 crore for Indian Railways in the Union Budget 2021-22. Of this, Rs 1,07,100 crore is for capital expenditure in 2021-22.
08-05-25 07:50 pm
Bangalore Correspondent
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
08-05-25 04:57 pm
HK News Desk
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
08-05-25 04:52 pm
Mangalore Correspondent
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
Operation Sindhoor, MP Brijesh Chowta, Manga...
07-05-25 03:36 pm
Hindu Maha Sabha, Mangalore, Rajesh Pavitran:...
07-05-25 02:36 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm