ಬ್ರೇಕಿಂಗ್ ನ್ಯೂಸ್
01-02-21 01:05 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆಬ್ರವರಿ 1: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರೈಲ್ವೇ ವ್ಯವಸ್ಥೆಯ ಅಭಿವೃದ್ಧಿಗೆ ಹೊಸ ಘೋಷಣೆಗಳನ್ನು ಮಾಡಿದ್ದಾರೆ. 2021-22ನೇ ಸಾಲಿನ ರೈಲ್ವೆ ಯೋಜನೆಗಳಿಗೆ 1,10,055 ಕೋಟಿ ರೂ ಅನುದಾನ ಘೋಷಿಸಿದ್ದಾರೆ.
ಭಾರತೀಯ ರೈಲ್ವೆಯು 2030ರ ವೇಳೆಗೆ ರಾಷ್ಟ್ರೀಯ ರೈಲು ಯೋಜನೆಯನ್ನು ಹೊಂದಲಿದೆ. ಇದು ಭವಿಷ್ಯದ ರೈಲ್ವೆ ವ್ಯವಸ್ಥೆಯ ಉದ್ದೇಶ ಒಳಗೊಂಡಿರಲಿದೆ. ರೈಲ್ವೇಸ್ 2.17 ಲಕ್ಷ ಕೋಟಿ ರೂದಷ್ಟು ಮೊತ್ತದ ದಾಖಲೆಯ ಬಂಡವಾಳ ವೆಚ್ಚವನ್ನು ಹೊಂದಿದೆ. ರೈಲ್ವೆಗೆ 1.15 ಲಕ್ಷ ಕೋಟಿ ರೂ ನೀಡುತ್ತಿದ್ದು, ಅದರಲ್ಲಿ ಸಿಎಪಿಇಎಕ್ಸ್ (ಕ್ಯಾಪಿಟಲ್ ಎಕ್ಸ್ಪೆಂಡಿಚರ್) ಮೊತ್ತ 1.07 ಲಕ್ಷ ಕೋಟಿ ರೂ ಇರಲಿದೆ. ರೈಲ್ವೆಯು ಮುಂದೆ ಸರಕು ಸಾಗಣೆ ಕಾರಿಡಾರ್ಗೆ ಹೆಚ್ಚಿನ ಗಮನ ನೀಡಲಿದೆ.
ಸರ್ಕಾರವು ಭವಿಷ್ಯದಲ್ಲಿನ ಸರಕು ಕಾರಿಡಾರ್ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಿದ್ದು, 18,000 ಕೋಟಿ ರೂ ಮೊತ್ತದ ಸಾರ್ವಜನಿಕ ಸಾರಿಗೆಯ ಪಾಲನ್ನು ಪಡೆದುಕೊಳ್ಳುವತ್ತ ಕೆಲಸ ಮಾಡಲಿದ್ದೇವೆ. 2023ರ ಡಿಸೆಂಬರ್ ವೇಳೆಗೆ 100 ಬ್ರಾಡ್ಗೇಜ್ ರೈಲ್ವೇ ಹಳಿಗಳ ವಿದ್ಯುದೀಕರಣ ನಡೆಯಲಿದೆ.
ದೇಶದಾದ್ಯಂತ 702 ಕಿಮೀಯಷ್ಟು ಮೆಟ್ರೋ ರೈಲು ಈಗಾಗಲೇ ಕಾರ್ಯಾಚರಣೆ ನಡೆಸುತ್ತಿದೆ. ಇನ್ನೂ 1016 ಕಿಮೀ ದೂರದ ಮಾರ್ಗಗಳ ಕಾಮಗಾರಿಗಳು ನಡೆಯುತ್ತಿವೆ. ಟೈರ್ 2 ನಗರಗಳು ಮತ್ತು ಟೈರ್ 1 ನಗರಗಳ ಸುತ್ತಮುತ್ತಲು ಮೆಟ್ರೋಲೈಟ್ ಮತ್ತು ಮೆಟ್ರೊನಿಯೊ ತಂತ್ರಜ್ಞಾನಗಳನ್ನು ಅಳವಡಿಸಲಾಗುತ್ತದೆ ಎಂದು ನಿರ್ಮಲಾ ಪ್ರಕಟಿಸಿದ್ದಾರೆ.
ಟೈರ್ 2 ಮತ್ತು ಟೈರ್ 3 ನಗರಗಳಲ್ಲಿನ ಅನೇಕ ವಿಮಾನ ನಿಲ್ದಾಣಗಳು ಖಾಸಗೀಕರಣಗೊಳ್ಳಲಿವೆ. ರಸ್ತೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ 1.18 ಟ್ರಿಲಿಯನ್ ಕೋಟಿ ರೂ ಅನುದಾನ ನೀಡಲಾಗುತ್ತಿದ್ದು, ಇದರಲ್ಲಿ 1.08 ಟ್ರಿಲಿಯನ್ ಕೋಟಿ ರೂ ಮೊತ್ತವು ಬಂಡವಾಳ ವೆಚ್ಚವಾಗಿರಲಿದೆ. ಇದು ಈವರೆಗಿನ ವೆಚ್ಚದಲ್ಲಿಯೇ ಅತ್ಯಧಿಕವಾಗಲಿದೆ.
Finance Minister Nirmala Sitharaman on Monday alloted Rs 1,10,055 crore for Indian Railways in the Union Budget 2021-22. Of this, Rs 1,07,100 crore is for capital expenditure in 2021-22.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm