ಬ್ರೇಕಿಂಗ್ ನ್ಯೂಸ್
01-02-21 05:54 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದು, ಹಲವು ಯೋಜನೆಗಳಿಗೆ ಅನುದಾನ ಹೆಚ್ಚಿಸಲಾಗಿದೆ. 2021-22ರ ಹಣಕಾಸು ವರ್ಷದಲ್ಲಿ 2,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ 7 ಪ್ರಮುಖ ಬಂದರುಗಳ ಯೋಜನೆಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ನೀಡಲಾಗುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ಬಜೆಟ್ನಲ್ಲಿ ಮಂಡಿಸಿದ್ದಾರೆ.
ಪ್ರಮುಖ ಬಂದರುಗಳು ತಮ್ಮ ಕಾರ್ಯಾಚರಣೆಯ ಸೇವೆಗಳನ್ನು ಸ್ವಯಂ ನಿರ್ವಹಿಸುವ ಬದಲು ಖಾಸಗಿ ಪಾಲುದಾರರು ಅದನ್ನು ನಿರ್ವಹಿಸುವ ಮಾದರಿಯತ್ತ ಸಾಗಲಿದ್ದಾರೆ ಎಂದಿದ್ದಾರೆ. ಭಾರತದಲ್ಲಿ ವ್ಯಾಪಾರಿ ಹಡಗುಗಳ ಪ್ಲಾಗಿಂಗ್ ಉತ್ತೇಜಿಸಲು ಭಾರತೀಯ ಹಡಗು ಕಂಪನಿಗಳಿಗೆ ಸಚಿವಾಲಯಗಳು ಮತ್ತು ಸಿಪಿಎಸ್ಇ ಆರಂಭಿಸುವ ಜಾಗತಿಕ ಟೆಂಡರ್ಗಳಲ್ಲಿ 5 ವರ್ಷಗಳ ಕಾಲ 1,624 ಕೋಟಿ ರೂ. ಸಬ್ಸಿಡಿ ಬೆಂಬಲ ಯೋಜನೆಯನ್ನು ತಮ್ಮ ಬಜೆಟ್ ಭಾಷಣದಲ್ಲಿ ಸೀತಾರಾಮನ್ ಪ್ರಕಟಿಸಿದರು.

ಈ ಉಪಕ್ರಮವು ಭಾರತೀಯ ಹಡಗು ಸಿಬ್ಬಂದಿಗೆ ದೊಡ್ಡ ತರಬೇತಿ ಮತ್ತು ಉದ್ಯೋಗಾವಕಾಶಗಳನ್ನು ಒದಗಿಸುತ್ತದೆ ಜೊತೆಗೆ ಜಾಗತಿಕ ಹಡಗು ಕ್ಷೇತ್ರದಲ್ಲಿ ಭಾರತೀಯ ಕಂಪನಿಗಳ ಪಾಲನ್ನು ಹೆಚ್ಚಿಸುತ್ತದೆ.
2024ರ ವೇಳೆಗೆ ಹಡಗಿನ ಮರುಬಳಕೆ ಸಾಮರ್ಥ್ಯವನ್ನು ಸುಮಾರು 4.5 ದಶಲಕ್ಷ ಲೈಟ್ ಡಿಸ್ಪ್ಲೇಸ್ಮೆಂಟ್ ಟೋನ್ (ಎಲ್.ಡಿ.ಟಿ)ಗೆ ದ್ವಿಗುಣಗೊಳಿಸಲು ಪ್ರಸ್ತಾಪಿಸಿದರು. ಗುಜರಾತ್ನ ಅಲಾಂಗ್ನಲ್ಲಿ ಸುಮಾರು 90 ಹಡಗು ಮರುಬಳಕೆ ಯಾರ್ಡ್ಗಳು ಈಗಾಗಲೇ ಎಚ್ಕೆಸಿ (ಹಾಂಗ್ ಕಾಂಗ್ ಅಂತಾರಾಷ್ಟ್ರೀಯ ಸಮಾವೇಶ) ಅನುಸರಣೆ ಪ್ರಮಾಣಪತ್ರಗಳನ್ನು ಸಾಧಿಸಿರುವುದರಿಂದ ಯುರೋಪ್ ಮತ್ತು ಜಪಾನ್ನಿಂದ ಭಾರತಕ್ಕೆ ಹೆಚ್ಚಿನ ಹಡಗುಗಳನ್ನು ತರಲು ಪ್ರಯತ್ನಿಸಲಾಗುವುದು ಎಂದಿದ್ದಾರೆ. ಇದರಿಂದ ದೇಶದ ಯುವಕರಿಗೆ ಹೆಚ್ಚುವರಿಯಾಗಿ 1.5 ಲಕ್ಷ ಉದ್ಯೋಗಗಳು ದೊರೆಯುವ ನಿರೀಕ್ಷೆಯಿದೆ ಎಂದು ತಿಳಿಸಿದರು.
Finance Minister Nirmala Sitharaman announced seven port projects worth more than Rs 2,000 crore investment. These projects would be undertaken through public-private partnership (PPP) mode, Sitharaman said in her Budget 2021 speech.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm