ಬ್ರೇಕಿಂಗ್ ನ್ಯೂಸ್
01-02-21 05:54 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದು, ಹಲವು ಯೋಜನೆಗಳಿಗೆ ಅನುದಾನ ಹೆಚ್ಚಿಸಲಾಗಿದೆ. 2021-22ರ ಹಣಕಾಸು ವರ್ಷದಲ್ಲಿ 2,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ 7 ಪ್ರಮುಖ ಬಂದರುಗಳ ಯೋಜನೆಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ನೀಡಲಾಗುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ಬಜೆಟ್ನಲ್ಲಿ ಮಂಡಿಸಿದ್ದಾರೆ.
ಪ್ರಮುಖ ಬಂದರುಗಳು ತಮ್ಮ ಕಾರ್ಯಾಚರಣೆಯ ಸೇವೆಗಳನ್ನು ಸ್ವಯಂ ನಿರ್ವಹಿಸುವ ಬದಲು ಖಾಸಗಿ ಪಾಲುದಾರರು ಅದನ್ನು ನಿರ್ವಹಿಸುವ ಮಾದರಿಯತ್ತ ಸಾಗಲಿದ್ದಾರೆ ಎಂದಿದ್ದಾರೆ. ಭಾರತದಲ್ಲಿ ವ್ಯಾಪಾರಿ ಹಡಗುಗಳ ಪ್ಲಾಗಿಂಗ್ ಉತ್ತೇಜಿಸಲು ಭಾರತೀಯ ಹಡಗು ಕಂಪನಿಗಳಿಗೆ ಸಚಿವಾಲಯಗಳು ಮತ್ತು ಸಿಪಿಎಸ್ಇ ಆರಂಭಿಸುವ ಜಾಗತಿಕ ಟೆಂಡರ್ಗಳಲ್ಲಿ 5 ವರ್ಷಗಳ ಕಾಲ 1,624 ಕೋಟಿ ರೂ. ಸಬ್ಸಿಡಿ ಬೆಂಬಲ ಯೋಜನೆಯನ್ನು ತಮ್ಮ ಬಜೆಟ್ ಭಾಷಣದಲ್ಲಿ ಸೀತಾರಾಮನ್ ಪ್ರಕಟಿಸಿದರು.

ಈ ಉಪಕ್ರಮವು ಭಾರತೀಯ ಹಡಗು ಸಿಬ್ಬಂದಿಗೆ ದೊಡ್ಡ ತರಬೇತಿ ಮತ್ತು ಉದ್ಯೋಗಾವಕಾಶಗಳನ್ನು ಒದಗಿಸುತ್ತದೆ ಜೊತೆಗೆ ಜಾಗತಿಕ ಹಡಗು ಕ್ಷೇತ್ರದಲ್ಲಿ ಭಾರತೀಯ ಕಂಪನಿಗಳ ಪಾಲನ್ನು ಹೆಚ್ಚಿಸುತ್ತದೆ.
2024ರ ವೇಳೆಗೆ ಹಡಗಿನ ಮರುಬಳಕೆ ಸಾಮರ್ಥ್ಯವನ್ನು ಸುಮಾರು 4.5 ದಶಲಕ್ಷ ಲೈಟ್ ಡಿಸ್ಪ್ಲೇಸ್ಮೆಂಟ್ ಟೋನ್ (ಎಲ್.ಡಿ.ಟಿ)ಗೆ ದ್ವಿಗುಣಗೊಳಿಸಲು ಪ್ರಸ್ತಾಪಿಸಿದರು. ಗುಜರಾತ್ನ ಅಲಾಂಗ್ನಲ್ಲಿ ಸುಮಾರು 90 ಹಡಗು ಮರುಬಳಕೆ ಯಾರ್ಡ್ಗಳು ಈಗಾಗಲೇ ಎಚ್ಕೆಸಿ (ಹಾಂಗ್ ಕಾಂಗ್ ಅಂತಾರಾಷ್ಟ್ರೀಯ ಸಮಾವೇಶ) ಅನುಸರಣೆ ಪ್ರಮಾಣಪತ್ರಗಳನ್ನು ಸಾಧಿಸಿರುವುದರಿಂದ ಯುರೋಪ್ ಮತ್ತು ಜಪಾನ್ನಿಂದ ಭಾರತಕ್ಕೆ ಹೆಚ್ಚಿನ ಹಡಗುಗಳನ್ನು ತರಲು ಪ್ರಯತ್ನಿಸಲಾಗುವುದು ಎಂದಿದ್ದಾರೆ. ಇದರಿಂದ ದೇಶದ ಯುವಕರಿಗೆ ಹೆಚ್ಚುವರಿಯಾಗಿ 1.5 ಲಕ್ಷ ಉದ್ಯೋಗಗಳು ದೊರೆಯುವ ನಿರೀಕ್ಷೆಯಿದೆ ಎಂದು ತಿಳಿಸಿದರು.
Finance Minister Nirmala Sitharaman announced seven port projects worth more than Rs 2,000 crore investment. These projects would be undertaken through public-private partnership (PPP) mode, Sitharaman said in her Budget 2021 speech.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm