ಬ್ರೇಕಿಂಗ್ ನ್ಯೂಸ್
01-02-21 06:19 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: 2021-22ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿದ್ದಾರೆ. ಬಜೆಟ್ ಭಾಷಣದಲ್ಲಿ ಸಚಿವರು ಮಾಲಿನ್ಯ ನಿಯಂತ್ರಣ ವಿಚಾರದಲ್ಲಿ ಮಾತನಾಡುತ್ತಾ 15 ವರ್ಷದ ಹಳೆಯ ವಾಹನಗಳನ್ನು ದೇಶದ ಜನತೆ ಸ್ವಯಂಪ್ರೇರಿತವಾಗಿ ತ್ಯಜಿಸುವಂತೆ ಕರೆ ನೀಡಿದ್ದಾರೆ.
ಈಗಾಗಲೇ ಹಳೆಯ ವಾಹನಗಳಿಗೆ ಗ್ರೀನ್ ಟ್ಯಾಕ್ಸ್ ಹೆಸರಲ್ಲಿ ಬರೆ ಹಾಕಿರುವ ಸರ್ಕಾರ, ಹಳೆ ವಾಹನಗಳನ್ನು ನೇರವಾಗಿ ಗುಜರಿಗೆ ಹಾಕುವಂತೆ ಹೇಳಿ ಶಾಕ್ ನೀಡಿದೆ. ಆಮೂಲಕ ಮುಂದಿನ ದಿನಗಳಲ್ಲಿ ಹಳೆಯ ವಾಹನಗಳ ಪರವಾನಗಿ ನವೀಕರಣ ಮಾಡದಿರುವ ಸುಳಿವನ್ನು ನೀಡಿದ್ದಾರೆ.
ಹಳೆಯ ವಾಹನಗಳನ್ನು ಸ್ವಯಂಪ್ರೇರಿತವಾಗಿ ಗುಜರಿಗೆ ಹಾಕಲು ಯೋಜನೆಯನ್ನು ಪರಿಚಯಿಸಲಾಗುವುದು. ಅಲ್ಲದೇ ಪರಿಸರ ಸ್ನೇಹಿ ವಾಹನಗಳಿಗೆ ಉತ್ತೇಜನ ನೀಡುತ್ತೇವೆ. ವೈಯಕ್ತಿಕ ವಾಹನಗಳಿಗೆ 20 ವರ್ಷ ಮತ್ತು ವಾಣಿಜ್ಯ ವಾಹನಗಳಿಗೆ 15 ವರ್ಷದ ಬಳಕೆ ಮಿತಿ ವಿಧಿಸಲಾಗುವುದು. ಈ ಬಗ್ಗೆ ಇನ್ನಷ್ಟು ವಿವರಗಳನ್ನು ಶೀಘ್ರ ಪ್ರಕಟಿಸುತ್ತೇವೆ ಎಂದು ತಿಳಿಸಿದರು. ಈ ಮೂಲಕ ಹಳೆ ವಾಹನ ಸವಾರರಿಗೆ ಬಿಗ್ ಶಾಕ್ ನೀಡಿದ್ದಾರೆ.
ಹಳೆಯ ವಾಹನಗಳನ್ನು ತ್ಯಜಿಸುವುದರಿಂದ ಇಂಧನ ಕ್ಷಮತೆ, ವಾಯುಮಾಲಿನ್ಯ ನಿಯಂತ್ರಣ ಸೇರಿದಂತೆ ಹಲವಾರು ಲಾಭಗಳಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೇಡಿಕೆ ಕಡಿಮೆ ಮಾಡಬಹುದು. ಜತೆಗೆ ವಾಹನಗಳ ಸಾಮರ್ಥ್ಯ ದೃಢೀಕರಣಕ್ಕೆ ನೂತನ ವ್ಯವಸ್ಥೆಯನ್ನು ಜಾರಿಗೆ ತರುವುದಾಗಿ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಹೇಳಿದ್ದಾರೆ.
The government on Friday proposed amendments to Motor vehicle norms to allow scrapping of vehicles older than 15 years in a bid to spur adoption of electrical vehicles.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm