ಬ್ರೇಕಿಂಗ್ ನ್ಯೂಸ್
02-02-21 12:45 pm Headline Karnataka News Network ದೇಶ - ವಿದೇಶ
ಕತಾರ್, ಫೆ.2: ಭಾರತ 72ನೇ ಗಣರಾಜ್ಯೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಜಾತಿ, ಮತ, ಪಂಥ, ವರ್ಗ, ವರ್ಣಗಳ ಭೇದ ಇಲ್ಲದೆ ಭಾರತೀಯರೆಲ್ಲಾ ಒಂದು ಎಂಬ ಆಶಯದೊಂದಿಗೆ 1950 ರ ಜನವರಿ 26 ರಂದು ಜಾರಿಗೆ ಬಂದ ನಮ್ಮ ಸಂವಿಧಾನದ ನೈಜ ಆಶಯವನ್ನು ಉಳಿಸುವ ಬಗ್ಗೆ ಭಾರತೀಯರು ಪ್ರತಿಜ್ಞಾ ಬದ್ಧರಾಗಬೇಕು. ಸಂವಿಧಾನವು ಘೋಷಿಸುವಂತಹ ಸಾರ್ವಭೌಮತೆ, ಸಹೋದರತ್ವ ಮತ್ತು ಸಮಾನತೆಯನ್ನು ಎತ್ತಿಹಿಡಿದು ಬಲಿಷ್ಠ ಭಾರತದ ನಿರ್ಮಾಣ ನಮ್ಮ ಧ್ಯೇಯವಾಗಬೇಕು ಎಂದು ಕರ್ನಾಟಕ ಕಲ್ಚರಲ್ ಫೌಂಡೇಶನ್ ಅಂತರಾಷ್ಟ್ರೀಯ ಸಮಿತಿ ನಾಯಕರಾದ ಡಾ. ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ ಹೇಳಿದರು.
ಕತ್ತರ್ ಕೆಸಿಎಫ್ ಸಾಮಾಜಿಕ ಮಾಧ್ಯಮ ಝೂಮ್ ಮೂಲಕ ಆಯೋಜಿಸಿದ 72ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದ ಅವರು, ಮಹಾಕವಿ ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟ, ರಸಿಕರ ಕಂಗಳ ಸೆಳೆಯುವ ನೋಟ ಎಂಬ ಸುಂದರ ಆಶಯವು ನಮ್ಮ ಕನಸಾಗಿದೆ ಎಂದರು.

ಗಣ್ಯ ಅತಿಥಿಯಾಗಿದ್ದ ಕತಾರ್ ಇಂಡಿಯನ್ ಕಲ್ಚರಲ್ ಸೆಂಟರ್ ನ ಉಪಾಧ್ಯಕ್ಷರಾದ ಸುಬ್ರಹ್ಮಣ್ಯ ಹೆಬ್ಬಾಗಿಲು ಮಾತನಾಡಿ, ಅನಿವಾಸಿ ಕನ್ನಡಿಗರ ನಡುವೆ ಕೆಸಿಎಫ್ ನಡೆಸುತ್ತಿರುವ ಸಮಾಜಮುಖಿ ಚಟುವಟಿಕೆಗಳ ಬಗ್ಗೆ ಸಂತೋಷ ವ್ಯಕ್ತಪಡಿಸಿ, ಸಂಘಟನೆಯ ಕಾರ್ಯಕರ್ತರನ್ನು ಅಭಿನಂದಿಸಿದರು. ಹಾಫಿಲ್ ಉಮರುಲ್ ಫಾರೂಕ್ ಸಖಾಫಿಯವರ ದುವಾದೊಂದಿಗೆ ಪ್ರಾರಂಭಗೊಂಡ ಈ ಕಾರ್ಯಕ್ರಮವನ್ನು ಕೆಸಿಎಫ್ ಅಂತರ್ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಜನಾಬ್ ಕಮರುದ್ದೀನ್ ಗೂಡಿನಬಳಿ ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಕತಾರ್ ರಾಯಭಾರಿ ಕಚೇರಿ ಅಧೀನದಲ್ಲಿರುವ ವಿವಿಧ ಸಂಸ್ಥೆಗಳ MC (ಮ್ಯಾನೇಜ್ಮೆಂಟ್ ಕಮಿಟಿ) ಸದಸ್ಯರುಗಳಾಗಿ ಆಯ್ಕೆಯಾದ ಕನ್ನಡಿಗರನ್ನು ಆಹ್ವಾನಿಸಿ ಕೆಸಿಎಫ್ ವತಿಯಿಂದ ಅಭಿನಂದಿಸಲಾಯ್ತು. ICC ಉಪಾಧ್ಯಕ್ಷರಾದ ಸುಬ್ರಹ್ಮಣ್ಯ ಹೆಬ್ಬಾಗಿಲು, ICBF ನಿರ್ವಹಣಾ ಸಮಿತಿ ಸದಸ್ಯರಾದ ದಿನೇಶ್ ಗೌಡ ಹಾಗೂ ISC ನಿರ್ವಹಣಾ ಸದಸ್ಯರಾದ ಟಿ. ಶ್ರೀನಿವಾಸ ಅವರನ್ನು ಕೆಸಿಎಫ್ ಕತಾರ್ ಸಂಘಟನೆ ಅಧ್ಯಕ್ಷರಾದ ಹನೀಫ್ ಪಾತೂರು ಅಭಿನಂದಿಸಿದರು.

ಕೆಸಿಎಫ್ ಕತ್ತರ್ ರಾಷ್ಟ್ರೀಯ ಅಧ್ಯಕ್ಷರಾಗಿರುವ ಯೂಸುಫ್ ಸಖಾಫಿ ಅಯ್ಯಂಗೇರಿ ಅಧ್ಯಕ್ಷತೆ ವಹಿಸಿದ್ದರು. ಝಾಕಿರ್ ಚಿಕ್ಕಮಗಳೂರು ಕಾರ್ಯಕ್ರಮ ನಿರೂಪಿಸಿದರೆ, ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದೀಕ್ ಹಂಡುಗುಳಿ ಸ್ವಾಗತಿಸಿದರು. ರಿಶಾದ್ ಮಧುವನ್ ವಂದಿಸಿದರು.
72nd Republic day in Qatar by Karnataka Culture Federation celebrated via Video Conference.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm