ಬ್ರೇಕಿಂಗ್ ನ್ಯೂಸ್
05-02-21 12:27 pm Headline Karnataka News Network ದೇಶ - ವಿದೇಶ
ಅಮರಾವತಿ, ಫೆಬ್ರವರಿ 5: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಗುರುವಾರ ಮಹತ್ವದ ಆದೇಶವೊಂದನ್ನು ಹೊರಡಿಸಿದ್ದಾರೆ. ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಸಂತ್ರಸ್ತರ ಕುಟುಂಬದವರಿಗೆ ಉದ್ಯೋಗ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕಿರಿಕುಳಕ್ಕೆ ಒಳಗಾದ ಸಂತ್ರಸ್ತರಿಗೆ ಆರ್ಥಿಕ ನೆರವು ನೀಡುವುದನ್ನು ರಾಜ್ಯ ಸರ್ಕಾರ ಮುಂದುವರಿಸಲಿದೆ ಎಂದಿರುವ ಜಗನ್, ಈ ಸಮುದಾಯಗಳ ಸಂತ್ರಸ್ತರಿಗೆ ಭೂಮಿ ಮಂಜೂರು ಮಾಡುವ ಕ್ರಮ ಕೂಡ ತೆಗೆದುಕೊಳ್ಳಬೇಕು. ಭೂಮಿ ಲಭ್ಯವಾಗದ ಸಂದರ್ಭಗಳಲ್ಲಿ ಅದಕ್ಕಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಸಂತ್ರಸ್ತರಗೆ ಹಂಚಿಕೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.

ಉನ್ನತ ಮಟ್ಟದ ಎಸ್ಸಿ ಮತ್ತು ಎಸ್ಟಿ ನಿಗಾ ಹಾಗೂ ಪರಿಶೀಲನಾ ಸಮಿತಿ ಮುಖ್ಯಸ್ಥರಾಗಿರುವ ಜಗನ್, ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳ ಮೇಲಿನ ದೌರ್ಜನ್ಯಗಳ ಬಾಕಿ ಉಳಿದಿರುವ ಪ್ರಕರಣಗಳ ವಿಚಾರಣೆಯನ್ನು ತ್ವರಿತಗೊಳಿಸುವಂತೆ ಸೂಚಿಸಿದರು. 2013ರಿಂದಲೂ ಈ ಸಮಿತಿ ಸಭೆಗಳು ನಡೆದಿರಲಿಲ್ಲ. ಹಿಂದಿನ ಸರ್ಕಾರವು ಕಾನೂನು ಜಾರಿಯಲ್ಲಿ, ಅದರಲ್ಲಿಯೂ ಎಸ್ಸಿ ಮತ್ತು ಎಸ್ಟಿಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಗಮನ ಹರಿಸಿರಲಿಲ್ಲ ಎಂದು ಜಗನ್ ಆರೋಪಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾನೂನು ಜಾರಿಯ ನಿರಂತರ ಪರಾಮರ್ಶನ ನಡೆಯಲಿದೆ. ರಾಜ್ಯ ಮತ್ತು ಜಿಲ್ಲಾ ಮಟ್ಟಗಳಲ್ಲಿ ಎರಡೂ ಕಡೆ ಈ ಸಭೆಗಳು ನಡೆಯಬೇಕು ಎಂದು ನಿರ್ದೇಶಿಸಿದ್ದಾರೆ. ಎಸ್ಸಿ ಮತ್ತು ಎಸ್ಟಿ ಪ್ರಕರಣಗಳಲ್ಲಿ ತಪ್ಪಿತಸ್ಥರೆಂದು ಕಂಡುಬಂದ ಪೊಲೀಸ್ ಅಧಿಕಾರಿಗಳ ವಿರುದ್ಧ ಸಹ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂಬ ಸಂದೇಶ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.
Andhra Pradesh Chief Minister YS Jagan Mohan Reddy on Thursday directed officials to provide jobs to the family members of rape and murder victims from the Scheduled Caste and Scheduled Tribe (SC and ST) communities. Jagan said the state
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm