ಬ್ರೇಕಿಂಗ್ ನ್ಯೂಸ್
07-02-21 02:49 pm Headline Karnataka News Network ದೇಶ - ವಿದೇಶ
ಚಮೋಲಿ; ಫೆಬ್ರವರಿ 7: ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠದ ರಾಣಿ ಗ್ರಾಮದಲ್ಲಿ ಹಿಮನದಿ ಒಡೆದು ಪ್ರವಾಹ ಉಂಟಾಗಿದ್ದು, 150 ಮಂದಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.
ಈಗಾಗಲೇ ರಾಣಿ ಗ್ರಾಮದ ಜನರನ್ನು ಸ್ಥಳಾಂತರಿಸಲಾಗುತ್ತಿದ್ದು, ಚಮೋಲಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ಜೋಶಿಮಠದ ಧೌಲಿ ಗಂಗಾ ಕಣಿವೆಯಲ್ಲಿ ಹಿಮನದಿ ಒಡೆದ ಪರಿಣಾಮ ರಿಷಿ ಗಂಗಾ ತಪೋವನ್ ಜಲ ಜಲವಿದ್ಯುತ್ ಯೋಜನೆಯ ಡ್ಯಾಮ್ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ನಾಪತ್ತೆಯಾಗಿದ್ದು, ಅವರೆಲ್ಲಾ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿರಬಹುದೆಂದು ಅಧಿಕಾರಿಗಳು ಶಂಕೆ ವ್ಯಕ್ತವಾಗಿದೆ.





ಇಂಡೋ - ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ.
ವಿಷ್ಣುಪ್ರಯಾಗ್, ರುದ್ರಪ್ರಯಾಗ್, ರಿಷಿಕೇಶ್, ಹರಿದ್ವಾರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಈ ಸಂಬಂಧ ತುರ್ತು ಸಭೆ ಕರೆದಿದ್ದಾರೆ.
ಭೀಕರ ಪ್ರವಾಹದಿಂದ ಹೈ ಅಲರ್ಟ್ ಘೋಷಣೆ:
ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠದ ರಾಣಿ ಗ್ರಾಮದಲ್ಲಿ ಹಿಮನದಿ ಒಡೆದಿದ್ದು, ಸುತ್ತಲಿನ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಹಿಮನದಿ ಒಡೆದ ಕಾರಣ ದೌಲಿಗಂಗಾ ನದಿಯ ನೀರಿನ ಮಟ್ಟ ಹೆಚ್ಚಾಗಿದೆ. ಹೀಗಾಗಿ ಪ್ರವಾಹ ಉಂಟಾಗಿದ್ದು, ರಾಣಿ ಗ್ರಾಮದ ಜನರನ್ನು ಸ್ಥಳಾಂತರಿಸಲಾಗುತ್ತಿದೆ. ಜೋಶಿಮಠದಲ್ಲಿ ನಡೆಯುತ್ತಿರುವ ರೈಲ್ವೆ ನಿರ್ಮಾಣ ಕಾಮಗಾರಿ ಸೇರಿದಂತೆ ಎಲ್ಲಾ ಕೆಲಸಗಳನ್ನು ಸ್ಥಗಿತಗೊಳಿಸಲಾಗಿದೆ. ವಿಷ್ಣುಪ್ರಯಾಗ್, ರುದ್ರಪ್ರಯಾಗ್, ರಿಷಿಕೇಶ್, ಹರಿದ್ವಾರ ಹಾಗೂ ಗಂಗಾ ತೀರಕ್ಕೆ ಹೋಗದಂತೆ ಜನರಿಗೆ ಚಮೋಲಿ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ರಿಷಿ ಗಂಗಾ ತಪೋವನ್ ಜಲ ಜಲವಿದ್ಯುತ್ ಸ್ಥಾವರಕ್ಕೂ ಹಾನಿಯಾಗುವ ಸಾಧ್ಯತೆ ಹೆಚ್ಚಿದ್ದು, ಅಣೆಕಟ್ಟು ಬಳಿ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳ ತಂಡವು ಬೀಡುಬಿಟ್ಟಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಎಸ್ಡಿಆರ್ಎಫ್ ತಂಡ ಕೂಡ ಗ್ರಾಮಕ್ಕೆ ಆಗಮಿಸಿದೆ.
At least 150 workers are feared missing after a portion of Nanda Devi glacier broke off in Tapovan area of Joshimath in Uttarakhand’s Chamoli district on Sunday morning and damaged the Rishiganga dam on Alaknanda river.
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am