ಬ್ರೇಕಿಂಗ್ ನ್ಯೂಸ್
07-02-21 04:35 pm Headline Karnataka News Network ದೇಶ - ವಿದೇಶ
ಚೆನ್ನೈ, ಫೆ.7: ನೇವಿಯಲ್ಲಿ ಅಧಿಕಾರಿ ಆಗಿದ್ದ ರಾಂಚಿ ಮೂಲದ ಯುವಕನ ಯುವಕನನ್ನು ದುಷ್ಕರ್ಮಿಗಳ ತಂಡವೊಂದು ಅಪಹರಿಸಿ, ಕಾಡಿನ ಮಧ್ಯೆ ಕರೆದೊಯ್ದು ಪೆಟ್ರೋಲ್ ಸುರಿದು ಜೀವಂತ ಸುಟ್ಟು ಹಾಕಿದ ಘಟನೆ ಬೆಳಕಿಗೆ ಬಂದಿದೆ.
ಛತ್ತೀಸ್ಗಢ ರಾಜ್ಯದ ರಾಂಚಿ ಮೂಲದ ನಿವಾಸಿಯಾಗಿರುವ ಸೂರಜ್ ಕುಮಾರ್ ದುಬೆ (26) ಶನಿವಾರ ಚೆನ್ನೈನಿಂದ 1500 ಕಿಮೀ ದೂರದ ಮಹಾರಾಷ್ಟ್ರದ ಪಾಲ್ಘಾರ್ ಎನ್ನುವ ಜಿಲ್ಲೆಯ ಕಾಡಿನ ಮಧ್ಯೆ ಸುಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಐಎನ್ಎಸ್ ಅಗ್ರಣಿ ಎಂಬ ನೌಕೆಯಲ್ಲಿ ಸೀಮನ್ ಆಗಿದ್ದ ಸೂರಜ್ ದುಬೆ ರಜೆಯಲ್ಲಿ ತನ್ನೂರು ರಾಂಚಿಗೆ ತೆರಳಿದ್ದರು. ರಜೆ ಮುಗಿಸಿ, ಜ.30ರಂದು ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಆದರೆ, ರಾತ್ರಿ 9 ಗಂಟೆಗೆ ಮೂರು ಮಂದಿ ಆಗಂತುಕರು ಪಿಸ್ತೂಲ್ ತೋರಿಸಿ, ಎಸ್ ಯುವಿ ಮಹೀಂದ್ರಾ ವಾಹನದಲ್ಲಿ ದುಬೆಯನ್ನು ಅಪಹರಿಸಿದ್ದಾರೆ. ಚೆನ್ನೈನಲ್ಲಿ ಮೂರು ದಿನ ಕೂಡಿಹಾಕಿದ್ದ ತಂಡ, 10 ಲಕ್ಷ ರೂ. ನೀಡುವಂತೆ ಡಿಮಾಂಡ್ ಮಾಡಿದ್ದಾರೆ. ಆದರೆ, ಫೆ.5ರಂದು ಸೂರಜ್ ದುಬೆಯನ್ನು ಪಾಲ್ಘಾರ್ ಜಿಲ್ಲೆಯ ಘೋಲ್ವಾಡ್ ಎಂಬಲ್ಲಿಗೆ ಕೊಂಡೊಯ್ದು ಕಾಡಿನ ಮಧ್ಯೆ ಒಯ್ದಿದ್ದಾರೆ. ಅಲ್ಲಿ 90 ಶೇ. ಸುಟ್ಟ ಸ್ಥಿತಿಯಲ್ಲಿ ಸೂರಜ್ ದೇಹ ಪತ್ತೆಯಾಗಿದೆ.
ಪಾಲ್ಘಾರ್ ಜಿಲ್ಲೆಯ ಎಸ್ಪಿ ದತ್ತಾ ಶಿಂಧೆ ಪ್ರಕಾರ, ಸೂರಜ್ ಪತ್ತೆಯಾದ ಸಂದರ್ಭದಲ್ಲಿ ಜೀವಂತ ಇದ್ದರು. ಸ್ವತಃ ಈ ಬಗ್ಗೆ ಹೇಳಿಕೆಯನ್ನೂ ದುಬೆ ನೀಡಿದ್ದರು. ಕಿಡ್ನಾಪ್ ಮಾಡಿ, ಪಾಲ್ಘಾರ್ ಜಿಲ್ಲೆಗೆ ತಂದಿದ್ದಲ್ಲದೆ, ಶುಕ್ರವಾರ ತನಗೆ ಪೆಟ್ರೋಲ್ ಸುರಿದು ಬೆಂಕಿ ಕೊಟ್ಟಿದ್ದರ ಬಗ್ಗೆ ಹೇಳಿಕೆ ನೀಡಿದ್ದರು. ತಾನು ಕೊಯಂಬತ್ತೂರಿನ ನೌಕಾದಳದ ಟ್ರೇನಿಂಗ್ ಸ್ಕೂಲಿನಲ್ಲಿ ಸೀಮನ್ ಆಗಿರುವ ಬಗ್ಗೆ ಮಾಹಿತಿ ನೀಡಿದ್ದರು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಬಳಿಕ ಸೇನಾಧಿಕಾರಿ ಎಂದು ಗೊತ್ತಾದ ಬಳಿಕ ನೌಕಾ ಪಡೆಯ ಹಾಸ್ಪಿಟಲ್ ಗೆ ದಾಖಲಿಸಿದ್ದೆವು ಎಂದಿದ್ದಾರೆ.
ಇದೇ ವೇಳೆ, ನೌಕಾಪಡೆಯಿಂದ ಹೇಳಿಕೆ ಬಿಡುಗಡೆ ಮಾಡಲಾಗಿದ್ದು ರಜೆಯಲ್ಲಿ ತೆರಳಿದ್ದ ದುಬೆಯನ್ನು ಫೆ.5ರಂದು ಪಾಲ್ಘಾರ್ ಜಿಲ್ಲೆಯಲ್ಲಿ 90 ಶೇ. ಸುಟ್ಟ ಸ್ಥಿತಿಯಲ್ಲಿ ಪತ್ತೆ ಮಾಡಲಾಗಿತ್ತು. ಸೇನಾ ಆಸ್ಪತ್ರೆಗೆ ತರಲಾಗಿದ್ದು ಅಲ್ಲಿನ ವೈದ್ಯರು ಸೂರಜ್ ದುಬೆ ಮೃತರಾಗಿರುವ ಬಗ್ಗೆ ಘೋಷಿಸಿದ್ದಾರೆ ಎಂದಿದೆ.
ಚೆನ್ನೈ ಏರ್ಪೋರ್ಟ್ ನಲ್ಲಿ ಇಳಿದಿದ್ದ ದುಬೆಯನ್ನು ಅಪಹರಣಕಾರರು 1500 ಕಿಮೀ ದೂರದ ಮಹಾರಾಷ್ಟ್ರದ ಥಾಣೆ ಬಳಿಯ ಪಾಲ್ಘಾರ್ ಜಿಲ್ಲೆಗೆ ಒಯ್ಯಲಾಗಿತ್ತು. ಹತ್ತು ಲಕ್ಷ ನೀಡಲು ಒಪ್ಪದ ಕಾರಣಕ್ಕೆ ಕಾಡಿನ ಮಧ್ಯೆ ಒಯ್ದು ಜೀವಂತವಾಗಿ ಪೆಟ್ರೋಲ್ ಸುರಿದು ದಹಿಸಿದ್ದಾರೆ ಎನ್ನಲಾಗಿದೆ. ಸ್ಥಳೀಯ ಪೊಲೀಸರು ಪ್ರಕರಣ ಸಂಬಂಧಿಸಿ ಕಿಡ್ನಾಪ್, ಕೊಲೆ, ದರೋಡೆ ಪ್ರಕರಣಗಳನ್ನು ದಾಖಲು ಮಾಡಿದ್ದಾರೆ. ದುಬೆಯನ್ನು ಅಷ್ಟು ದೂರಕ್ಕೆ ಯಾಕೆ ಒಯ್ದಿದ್ದಾರೆ ಎನ್ನುವುದೇ ಪೊಲೀಸರ ಕುತೂಹಲಕ್ಕೆ ಕಾರಣವಾಗಿದೆ. ಚೆನ್ನೈನಿಂದ ಘೋಲ್ವಾಡ್ ವರೆಗಿನ ಸಿಸಿಟಿವಿಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಅಪಹರಣಕಾರರು ದುಬೆಗೆ ಮೊದಲೇ ಪರಿಚಿತರಾಗಿದ್ದರೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
A 26-year-old Navy sailor who had been abducted in Chennai on January 30 was set on fire by the kidnappers in jungles of Maharashtra's Palghar district. The Navy officer succumed to his burn injuries while he was rushed to a hospital, the police said on Saturday.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm