ಬ್ರೇಕಿಂಗ್ ನ್ಯೂಸ್
09-02-21 11:24 am Headline Karnataka News Network ದೇಶ - ವಿದೇಶ
ನವದೆಹಲಿ, ಫೆ.9 : ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ಹಿಂಸಾಚಾರ ಮತ್ತು ಕೆಂಪು ಕೋಟೆ ಮೇಲೆ ಧಾರ್ಮಿಕ ಧ್ವಜ ಹಾರಿಸಿದ ಸಂಬಂಧ ದೆಹಲಿಯ ವಿಶೇಷ ಪೊಲೀಸ್ ತಂಡ ನಟ, ಗಾಯಕ ದೀಪ್ ಸಿಧುನನ್ನು ಬಂಧಿಸಿದ್ದಾರೆ.
ಜನವರಿ 26 ರ ದೆಹಲಿಯಲ್ಲಿ ನಡೆದ ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ಕೆಂಪು ಕೋಟೆಯ ಮೇಲೆ ಖಾಸಗಿ ಧ್ವಜ ಹಾರಿಸಲು ಸಿಧು ಸಹಕರಿಸಿದ್ದನು. ಅಷ್ಟೇ ಅಲ್ಲದೇ ಅಲ್ಲಿಂದಲೇ ಫೇಸ್ಬುಕ್ ಲೈವ್ ಮಾಡಿದ್ದ. ಸಿಧುನಿಂದಲೇ ಪ್ರತಿಭಟನೆ ಹಾದಿ ತಪ್ಪಿತು ಎಂದು ರೈತ ಮುಖಂಡರು ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಧು ಬಂಧನವಾಗಿದೆ.

ಪ್ರಮುಖ ಆರೋಪಿಯಾಗಿರುವ ದೀಪ್ ಸಿಧು ತಲೆ ಮರೆಸಿಕೊಂಡಿದ್ದನು. ಈ ಹಿನ್ನೆಲೆ ಸಿಧು ಗಾಹೂ ಇತರೆ ಮೂವರು ಆರೋಪಿಗಳ ಕುರಿತಾಗಿ ಮಾಹಿತಿ ನೀಡಿದರೆ 1 ಲಕ್ಷ ರೂಪಾಯಿ ನೀಡುವುದಾಗಿ ಪೊಲೀಸರು ಬಹುಮಾನ ಪ್ರಕಟಿಸಿದ್ದರು. ಸಿಧುನ ಹುಡುಕಾಟದಲ್ಲಿರುವ ಪೊಲೀಸರಿಗೆ ಸಿಧು ತನ್ನ ಗೆಳತಿಯ ಫೋನ್ ಬಳಕೆ ಮಾಡುತ್ತಿದ್ದಾನೆ ಎಂದು ಸುಳಿವು ಸಿಕ್ಕಿದೆ. ಈ ಕುರಿತಾಗಿ ಮಾಹಿತಿ ಪಡೆದ ಪೊಲೀಸ್ ತಂಡ ಸಿಧು ಇದ್ದ ಸ್ಥಳವನ್ನು ಪತ್ತೆ ಮಾಡಿ ಅರೆಸ್ಟ್ ಮಾಡಿದ್ದಾರೆ.

ನನ್ನನ್ನು ದೇಶದ್ರೋಹಿ ಎಂದು ಕರೆದಿದ್ದಾರೆ. ರೈತ ಪ್ರತಿಭಟನೆಗೆ ನನ್ನನ್ನೇ ಸಮರ್ಪಿಸಿಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದೇನು. ಆದರೆ ಗಣರಾಜ್ಯೋತ್ಸವದ ಗಲಭೆ ನಂತರ ರೈತ ಸಂಘಟನೆಗಳು, ರೈತ ಮುಖಂಡರು ನನ್ನನ್ನು ಕಡೆಗಳಿಸುತ್ತಿದ್ದಾರೆ. ನಾನು ಪಂಜಾಬ್ ಜನರಿಗಾಗಿ ಧ್ವನಿ ಎತ್ತಿದೆ. ಕೆಂಪು ಕೋಟೆಯಲ್ಲಿ ಹಲವು ಗಾಯಕರು, ನಾಯಕರು ಸೇರಿದಂತೆ 5 ಲಕ್ಷಕ್ಕೂ ಹೆಚ್ಚು ಜನರು ಇದ್ದರು. ಆದರೆ ನನ್ನನ್ನು ಮಾತ್ರ ಆರೋಪಿ ಸ್ಥಾನದಲ್ಲಿ ನೋಡುತ್ತಿದ್ದಾರೆ. ನಾನೀಗ ಬಿಹಾರದ ಕಾರ್ಮಿಕರೊಂದಿಗೆ ಇದ್ದೇನೆ ಎಂದು ಫೇಸ್ಬುಕ್ ವೀಡಿಯೋದಲ್ಲಿ ಕಣ್ಣೀರು ಹಾಕಿದ್ದ.
Delhi: Actor-activist Deep Sidhu, accused in the violence at the Red Fort complex in Delhi on Republic Day during a farmers' tractor rally has been arrested, the police said today.
06-03-26 12:08 pm
HK News Staffer
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 12:17 pm
supritha Jain
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm