ಬ್ರೇಕಿಂಗ್ ನ್ಯೂಸ್
11-02-21 02:03 pm Headline Karnataka News Network ದೇಶ - ವಿದೇಶ
ಡೆಹ್ರಾಡೂನ್, ಫೆಬ್ರವರಿ.11: ಫೆಬ್ರವರಿ 7ರಂದು ಉತ್ತರಾಖಂಡದ ಚಮೋಲಿಯಲ್ಲಿ ಹಿಮಸ್ಫೋಟಿಸಿ ಉಂಟಾದ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಈ ಪೈಕಿ 10 ಮಂದಿಯನ್ನು ಮಾತ್ರ ಗುರುತಿಸಲಾಗಿದೆ.
204 ಮಂದಿ ನಾಪತ್ತೆಯಾಗಿದ್ದು, ಅವರಿಗಾಗಿ ಐಟಿಬಿಪಿ, ಎನ್ಡಿಆರ್ಎಫ್, ಎಸ್ಡಿಆರ್ಎಫ್ ತಂಡಗಳು 5ನೇ ದಿನವೂ ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿವೆ. ಇನ್ನು ಸೇತುವೆಗಳನ್ನು ಮೂಲಕ ಆಹಾರ ಸಾಮಗ್ರಿಗಳನ್ನು ಸಂತ್ರಸ್ತರಿಗೆ ಸಾಗಿಸಲಾಗುತ್ತಿದೆ.

ತಪೋವನ ಸುರಂಗದೊಳಗೆ ಹಲವರು ಸಿಲುಕಿದ್ದು, ಕೆಸರು ಮತ್ತು ಕಲ್ಲುಗಳನ್ನು ತೆರವುಗೊಳಿಸುತ್ತಿರುವ ರಕ್ಷಣಾ ತಂಡಗಳು ಸುರಂಗವನ್ನು ಕೊರೆಯಲು ಡ್ರಿಲ್ಲಿಂಗ್ ಆಪರೇಶನ್ ಆರಂಭಿಸಿರುವುದಾಗಿ ಉತ್ತರಾಖಂಡ ಡಿಜಿಪಿ ಅಶೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.

1965ರಲ್ಲಿ ರೇಡಿಯೋ ಆಕ್ಟಿವ್ ಡಿವೈಸ್ ಕಣ್ಮರೆಯಾದ ಕಥೆ
ಭಾರತದ ಕೇಂದ್ರ ತನಿಖಾ ತಂಡ ಮತ್ತು ಗುಪ್ತಚರ ಇಲಾಖೆಯ ಅಧಿಕಾರಿಗಳು ನಂದಾ ದೇವಿ ಪರ್ವತದ ಶಿಖರದಲ್ಲಿ ಪರಮಾಣು-ಚಾಲಿತ ಕಣ್ಗಾವಲು ಉಪಕರಣಗಳನ್ನು ನಿಯೋಜನೆ ಮಾಡಿತ್ತು. ಚೀನಾದ ಕಂಚೆಂಜುಂಗಾ ಹೊರತುಪಡಿಸಿದರೆ ಇದು ಜಗತ್ತಿನ ಅತಿ ಎತ್ತರದ ಕಣ್ಗಾವಲು ಸಾಧನ ಇದಾಗಿದ್ದು, 1965ರಲ್ಲಿ ರೇಡಿಯೋ ಆಕ್ಟಿವ್ ಡಿವೈಸ್ ಕಣ್ಮರೆಯಾಗಿತ್ತು.


ಕಣ್ಮರೆಯಾದ ವಿಕಿರಣ ಸಾಧನಕ್ಕೆ 100 ವರ್ಷ ಆಯಸ್ಸು
ಈ ಹಿಂದೆ ರೇಡಿಯೋ ಆಕ್ಟಿವ್ ಡಿವೈಸ್ ನಿಯೋಜನೆಗೆ ತೆರಳಿದ ಪರ್ವತಾರೋಹಣ ತಂಡವು ಹಿಮಪಾತದಲ್ಲಿ ಸಿಲುಕಿದ ಹಿನ್ನೆಲೆ ಅಂದು ವಾಪಸ್ಸಾಗಿತ್ತು. ಒಂದು ವರ್ಷದ ನಂತರದಲ್ಲಿ ಅದೇ ಪ್ರದೇಶಕ್ಕೆ ತೆರಳಿ ಹುಡುಕಾಟ ನಡೆಸಿದ ಸಂದರ್ಭದಲ್ಲಿ ವಿಕಿರಣ ಸಾಧನ ಅಲ್ಲಿ ಸಿಗಲಿಲ್ಲ. ರೇಡಿಯೋ ಆಕ್ಟಿವ್ ಡಿವೈಸ್ ಹುಡುಕಾಟ ನಡೆಸಿದರೂ ಅದರ ಬಗ್ಗೆ ಸುಳಿವು ಸಿಗಲಿಲ್ಲ. ಸುಮಾರು 100 ವರ್ಷದವರೆಗೆ ಜೀವಿತಾವಧಿ ಹೊಂದಿರುವ ಈ ಸಾಧನವು ನಾಪತ್ತೆಯಾಗಿದ್ದರೂ, ಅದೇ ಸುತ್ತಮುತ್ತಲಿನ ಪ್ರದೇಶದಲ್ಲೇ ಹುದುಗಿ ಹೋಗಿದೆ ಎಂದು ನಂಬಲಾಗುತ್ತಿದೆ.


ರಿಷಿಗಂಗಾ ನದಿಗೆ ಹಿಮ ಉರುಳಿದ ವೇಳೆ ಗೊಬ್ಬರದ ವಾಸನೆ
ಕಳೆದ ಫೆಬ್ರವರಿ.07ರಂದು ಉತ್ತರಾಖಂಡ್ ಚಮೋಲಿ ಜಿಲ್ಲೆ ರೈನಿ ಗ್ರಾಮದ ಬಳಿ ಪರ್ವತದಿಂದ ಹಿಮವು ಉರುಳಿ ರಿಷಿಗಂಗಾ ನದಿಗೆ ಬಿದ್ದಿತು. ಈ ವೇಳೆ ಎಲ್ಲೆಡೆ ಗೊಬ್ಬರದ ರೀತಿಯ ತೀವ್ರವಾದ ವಾಸನೆ ಹರಡಿತ್ತು. ಗಾಳಿಯಲ್ಲಿ ಹರಡಿದ ತೀವ್ರ ವಾಸನೆಯಿಂದಾಗಿ ನಾವು ಉಸಿರಾಡುವುದು ಕೂಡ ಕಷ್ಟಸಾಧ್ಯವಾಗಿತ್ತು. ಹಿಮಪಾತ ಅಥವಾ ಹಿಮ ಕುಸಿತವಷ್ಟೇ ಆಗಿದ್ದಲ್ಲಿ ಅಷ್ಟೊಂದು ಮಟ್ಟಿಗೆ ತೀವ್ರವಾದ ವಾಸನೆ ಏಕೆ ಹರಡುತ್ತಿತ್ತು. ಸುದೀರ್ಘ ಅವಧಿಯವರೆಗೂ ಇದೇ ಪ್ರದೇಶದಲ್ಲಿರುವ ರೇಡಿಯೋ ಆಕ್ಟಿವ್ ಡಿವೈಸ್ ಈ ರೀತಿಯ ವಾಸನೆ ಹರಡುವುದಕ್ಕೆ ಮುಖ್ಯ ಕಾರಣವಾಗಿದೆ. ಇತ್ತೀಚಿಗೆ ನಡೆದ ಹಿಮಪಾತದ ಹಿಂದೆ ಅದೇ ರೇಡಿಯೋ ಆಕ್ಟಿವ್ ಡಿವೈಸ್ ಮೂಲವಾಗಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.
ಉತ್ತರಾಖಂಡ್ ಹಿಮಪಾತ ದುರಂತ ; 12 ಮಂದಿ ಬಲಿ, 170 ಜನ ನಾಪತ್ತೆ
ಉತ್ತರಾಖಂಡ್ ಜೋಶಿ ಮಠ ಭಾಗದಲ್ಲಿ ಭಾರಿ ಹಿಮಪಾತ ; 150ಕ್ಕೂ ಅಧಿಕ ಮಂದಿ ಸಾವಿನ ಶಂಕೆ?
Uttarakhand glacier burst Death toll rises to 34 and 204 people still missing. The rescue operations are underway inside Tapovan tunnel in Chamoli.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm