ಬ್ರೇಕಿಂಗ್ ನ್ಯೂಸ್
14-02-21 12:10 pm Headline Karnataka News Network ದೇಶ - ವಿದೇಶ
ಕರ್ನೂಲ್, ಫೆ.14: ಇಲ್ಲಿನ ಕರ್ನೂರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಇಂದು ನಸುಕಿನಲ್ಲಿ ನಡೆದ ಭೀಕರ ಅಪಘಾತದಲ್ಲಿ 14 ಮಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಚಿತ್ತೂರು ಜಿಲ್ಲೆಯ ಮದನಪಲ್ಲೆ ಗ್ರಾಮದಿಂದ ರಾಜಸ್ಥಾನದ ಅಜ್ಮೀರ್ ಗೆ ಯಾತ್ರೆ ಹೊರಟಿದ್ದ ಕುಟುಂಬದ ಮಿನಿ ವ್ಯಾನ್ ಟ್ರಕ್ ಒಂದಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕರ್ನೂಲ್ ಜಿಲ್ಲೆಯ ವೇಲ್ದುರ್ತಿ ತಾಲೂಕು ವ್ಯಾಪ್ತಿಯ ಮಾದಾರಪುರಂ ಗ್ರಾಮದಲ್ಲಿ ನಸುಕಿನ 3.30ರ ಸುಮಾರಿಗೆ ಘಟನೆ ನಡೆದಿದೆ.


ಎಂಟು ಮಹಿಳೆಯರು, ಐದು ಪುರುಷರು ಮತ್ತು ಒಂದು ಮಗು ಮೃತರಲ್ಲಿ ಸೇರಿದ್ದು ಅಪಘಾತದ ತೀವ್ರತೆಗೆ ದೇಹಗಳು ಅಪ್ಪಚ್ಚಿಯಾಗಿದ್ದವು. ಒಂದಕ್ಕೊಂದು ಅಂಟಿಕೊಂಡಿದ್ದ ವಾಹನವನ್ನು ಜೆಸಿಬಿ ತಂದು ಹಗ್ಗ ಕಟ್ಟಿ ಎಳೆದು ಬಿಡಿಸಲಾಯ್ತು. ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.



ಪೊಲೀಸರ ಪ್ರಕಾರ, ಮಿನಿ ವ್ಯಾನ್ ಚಾಲಕ ಅತಿ ವೇಗದಿಂದ ಇದ್ದ ಅಥವಾ ವೇಗದಲ್ಲಿರುವಾಗಲೇ ವ್ಯಾನ್ ಟೈರ್ ಸಿಡಿದು ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ. ಅಪಘಾತದ ಕಾರಣ ಹೆದ್ದಾರಿಯಲ್ಲಿ ಪೂರ್ತಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಘಟನೆ ಬಗ್ಗೆ ಸಿಎಂ ಜಗನ್ಮೋಹನ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು ಗಾಯಾಳುಗಳಿಗೆ ಉನ್ನತ ಮಟ್ಟದ ಚಿಕಿತ್ಸೆ ನೀಡುವಂತೆ ಕರ್ನೂಲ್ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ. ಕರ್ನೂಲ್ ಜಿಲ್ಲಾಧಿಕಾರಿ ಪ್ರಕಾರ, ಚಿತ್ತೂರು ಜಿಲ್ಲೆಯಿಂದ ಹೊರಟಿದ್ದ ಮಿನಿ ವ್ಯಾನ್ ನಲ್ಲಿ 18 ಮಂದಿ ಇದ್ದರು. 14 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Visuals: 14 killed, 4 injured in truck-mini van collision near Madapuram in Veldurthi Mandal of #Kurnool district. pic.twitter.com/WRrWhEwMMh
— TOI Vijaywada (@TOIVijaywada) February 14, 2021
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm