ಬ್ರೇಕಿಂಗ್ ನ್ಯೂಸ್
14-02-21 03:08 pm Headline Karnataka News Network ದೇಶ - ವಿದೇಶ
ಶ್ರೀನಗರ, ಫೆ.14: ಪುಲ್ವಾಮಾ ದಾಳಿಗೆ ವರ್ಷ ತುಂಬುತ್ತಿದ್ದಂತೆಯೇ ಅತ್ತ ಮತ್ತೊಂದು ದಾಳಿಗೆ ಉಗ್ರರು ಸಂಚು ಹೂಡಿದ್ದರೇ ಅನ್ನುವ ಶಂಕೆ ಮೂಡಿದೆ. ಪುಲ್ವಾಮಾ ದಾಳಿಯ ಎರಡನೇ ವರ್ಷಾಚರಣೆ ದಿನವೇ ಜಮ್ಮು ಬಸ್ ನಿಲ್ದಾಣದಲ್ಲಿ ಭಾರೀ ಪ್ರಮಾಣದ ಸ್ಫೋಟಕ ಪತ್ತೆಯಾಗಿದೆ.
ಪುಲ್ವಾಮಾ ದಾಳಿ ದಿನವಾದ ಫೆ.14ರ ಭಾನುವಾರ ಜಮ್ಮು ಕಾಶ್ಮೀರ ಪೊಲೀಸರು ಅಲರ್ಟ್ ಆಗಿದ್ದರು. ಪೊಲೀಸ್ ಪಡೆ ಗಸ್ತು ನಿರತ ಇರುವಾಗಲೇ ಜನನಿಬಿಡ ಜಮ್ಮು ಬಸ್ ನಿಲ್ದಾಣದಲ್ಲಿ ಏಳು ಕೇಜಿಯಷ್ಟು ಐಇಡಿ ಸ್ಫೋಟಕಗಳು ಪತ್ತೆಯಾಗಿವೆ. ಈ ದಿನವೇ ಮತ್ತೊಂದು ದೊಡ್ಡ ಮಟ್ಟದ ದಾಳಿಗೆ ಉಗ್ರರು ಸಂಚು ರೂಪಿಸಿದ್ದರು ಎನ್ನಲಾಗುತ್ತಿದ್ದು, ಜಮ್ಮು ಪೊಲೀಸರ ಸಕಾಲಿಕ ಕಾರ್ಯಾಚರಣೆಯಿಂದ ಆಪತ್ತು ತಪ್ಪಿದಂತಾಗಿದೆ.


ಕಳೆದ ಒಂದು ವಾರದಲ್ಲಿ ಜಮ್ಮು ಕಾಶ್ಮೀರದ ವಿವಿಧೆಡೆ ರಾಜ್ಯ ಪೊಲೀಸರು ಸೇರಿದಂತೆ ಸೇನಾಪಡೆ, ಸಿಆರ್ ಪಿಎಫ್ ಪಡೆಗಳು ಶೋಧ ಕಾರ್ಯಾಚರಣೆಯಲ್ಲಿ ತೊಡಗಿತ್ತು. ಈ ವೇಳೆ, ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿದ್ದು, ಪುಲ್ವಾಮಾ ದಾಳಿಯ ವರ್ಷಾಚರಣೆಯಂದೇ ಮತ್ತೊಂದು ದಾಳಿಗೆ ಸಿದ್ಧತೆ ನಡೆಸಿದ್ದರೇ ಎನ್ನುವ ಅನುಮಾನ ಮೂಡಿದೆ. ಒಂದೇ ವಾರದಲ್ಲಿ ಹಿದಾಯತುಲ್ಲಾ ಮಲಿಕ್ ಮತ್ತು ಝಹೂರ್ ಅಹ್ಮದ್ ರಾಥೋರ್ ಎಂಬ ಇಬ್ಬರು ಉಗ್ರರು ಬಂಧಿತರಾಗಿದ್ದರು. ಹಿದಾಯತುಲ್ಲಾ ಮಲಿಕ್, ಪಾಕಿಸ್ತಾನ ಮೂಲದ ಜೈಶ್ ಇ -ಮಹಮ್ಮದ್ ಉಗ್ರವಾದಿ ಸಂಘಟನೆಯಿಂದ ಪ್ರೇರಿತಗೊಂಡು ರಚಿಸಿದ್ದ ಲಷ್ಕರ್ ಇ –ಮುಸ್ತಫಾ ಹೆಸರಿನ ಸಂಘಟನೆಯ ಪ್ರಮುಖನಾಗಿದ್ದ.



ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಜಮ್ಮು ಪೊಲೀಸರು ಆತನನ್ನು ಸೆರೆಹಿಡಿದಿದ್ದರು. ಝಹೂರ್ ಅಹ್ಮದ್ ರಾಥೋರ್, ಕಳೆದ ವರ್ಷ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸ್ ಅಧಿಕಾರಿಗಳನ್ನು ಕೊಂದಿದ್ದ ಇನ್ನೊಬ್ಬ ಉಗ್ರನಾಗಿದ್ದು, ಜಮ್ಮು ಕಾಶ್ಮೀರದ ಗುಪ್ತಚರ ಪಡೆಯೇ ಆತನ ಟಾರ್ಗೆಟ್ ಆಗಿತ್ತು. ಹಿದಾಯತುಲ್ಲಾ ಫೆ.6ರಂದು ಮತ್ತು ರಾಥೋರ್ ಎರಡು ದಿನಗಳ ಹಿಂದೆ ಸಾಂಬಾ ಜಿಲ್ಲೆಯಲ್ಲಿ ಬಂಧನವಾಗಿದ್ದ.
ಸ್ಫೋಟಕ ಪತ್ತೆ ಹಿನ್ನೆಲೆಯಲ್ಲಿ ಕಾಶ್ಮೀರ ಮತ್ತು ಜಮ್ಮುವಿನ ಕಣಿವೆಗಳಲ್ಲಿ ಶೋಧ ಕಾರ್ಯಾಚರಣೆ ಹೆಚ್ಚಿಸಿದ್ದಾರೆ. ಜನನಿಬಿಡ ಬಸ್ ನಿಲ್ದಾಣದಲ್ಲಿ ಭಾರೀ ಪ್ರಮಾಣದ ಸ್ಫೋಟಕಗಳನ್ನು ತಂದು ಇರಿಸಿದ್ದು ಯಾರೆನ್ನುವುದರ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
A7-kilogram Improvised Explosive Device (IED) was detected on Sunday near the crowded general bus stand area in Jammu.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am