ಬ್ರೇಕಿಂಗ್ ನ್ಯೂಸ್
16-02-21 01:14 pm Headline Karnataka News Network ದೇಶ - ವಿದೇಶ
ಮುಂಬೈ, ಫೆ.16: ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರ ಮುಂಬೈನಲ್ಲಿರುವ ಮನೆಗೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ದಿಢೀರ್ ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆ ಮುಂಬೈನ ಅಕ್ಸಾ ಬೀಚ್ ಬಳಿಯಿರುವ ಮಿಥುನ್ ಚಕ್ರವರ್ತಿಯವರ ಬಂಗಲೆಗೆ ಮೋಹನ್ ಭಾಗವತ್ ಭೇಟಿ ನೀಡಿದ್ದು, ಖಾಸಗಿಯಾಗಿ ಕೆಲಹೊತ್ತು ಚರ್ಚೆ ನಡೆಸಿದ್ದಾರೆ.
ಮಿಥುನ್ ಚಕ್ರವರ್ತಿ ಮೂಲತಃ ಬೆಂಗಾಲಿ ನಟನಾಗಿದ್ದು, ಪಶ್ಚಿಮ ಬಂಗಾಳದಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಪಶ್ಚಿಮ ಬಂಗಾಳದ ಚುನಾವಣೆ ಹಿನ್ನೆಲೆಯಲ್ಲಿ ಮಿಥುನ್ ಅವರನ್ನು ಬಿಜೆಪಿಗೆ ಸೆಳೆಯುವ ನಿಟ್ಟಿನಲ್ಲಿ ಅಥವಾ ಬಿಜೆಪಿ ಪರ ಪ್ರಚಾರಕ್ಕೆ ಕರೆತರುವ ಭಾಗವಾಗಿ ಮೋಹನ್ ಭಾಗ್ವತ್ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಆದರೆ, ಮಿಥುನ್ ಚಕ್ರವರ್ತಿ ಈ ರೀತಿಯ ವದಂತಿಯನ್ನು ಅಲ್ಲಗಳೆದಿದ್ದಾರೆ. ನನಗೂ, ಮೋಹನ್ ಭಾಗ್ವತ್ ಅವರಿಗೂ ಆಧ್ಯಾತ್ಮಿಕ ಸಂಬಂಧ ಇದೆ. ಹೀಗಾಗಿ ಕಳೆದ ಬಾರಿ ನಾಗಪುರದಲ್ಲಿ ಅವರನ್ನು ಭೇಟಿಯಾಗಿದ್ದೆ. ನಾನು ಮುಂಬೈನಲ್ಲಿದ್ದಾಗ ಮನೆಗೆ ಬರುವಂತೆ ಆಹ್ವಾನ ನೀಡಿದ್ದೆ. ಹಾಗಾಗಿ ಬಂದಿದ್ದಾರೆ. ರಾಜಕೀಯ ಮಾತುಕತೆಗಳೇನು ನಡೆದಿಲ್ಲ ಎಂದು ಹೇಳಿದ್ದಾರೆ.
ಮಿಥುನ್ ಚಕ್ರವರ್ತಿ ರಾಜ್ಯಸಭೆಯ ಮಾಜಿ ಸದಸ್ಯರಾಗಿದ್ದು ಬಹುಕಾಲದಿಂದ ತೃಣಮೂಲ ಕಾಂಗ್ರೆಸ್ ಪಕ್ಷದ ಸದಸ್ಯರೂ ಆಗಿದ್ದರು. ಕಳೆದ 2016ರಲ್ಲಿ ಆರೋಗ್ಯ ಸಂಬಂಧೀ ಸಮಸ್ಯೆಗಳಿಂದಾಗಿ ಮಿಥುನ್, ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.
RSS chief Mohan Bhagwat visited actor Mithun Chakraborty at his Mumbai residence on Tuesday. Mohan Bhagwat was at Mithun's bungalow in Madh area of Mumbai early morning.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm