ಬ್ರೇಕಿಂಗ್ ನ್ಯೂಸ್
16-02-21 01:49 pm Headline Karnataka News Network ದೇಶ - ವಿದೇಶ
ಇಂದೋರ್, ಫೆ.16: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ನೀರಿನ ಕಾಲುವೆಗೆ ಬಿದ್ದು 32ಕ್ಕೂ ಹೆಚ್ಚು ಮಂದಿ ಜೀವಂತ ಸಮಾಧಿಯಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಬೆಳಗ್ಗೆ 7.30ರ ಸುಮಾರಿಗೆ ಸಿದ್ಧಿ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಕೂಡಲೇ ಸ್ಥಳೀಯರು ಸೇರಿ ಕಾರ್ಯಾಚರಣೆ ನಡೆಸಿದ್ದು ಚಾಲಕನನ್ನು ರಕ್ಷಣೆ ಮಾಡಿದ್ದಾರೆ. ಬಸ್ ಸಾತ್ನಾ ಎಂಬಲ್ಲಿಂದ ಸಿಧಿಗೆ ತೆರಳುತ್ತಿದ್ದ ವೇಳೆ ರಾಮಪುರ್ ನಾಯ್ಕಿನ್ ಎಂಬಲ್ಲಿ ಉರುಳಿ ಬಿದ್ದಿದೆ. ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಇದ್ದುದರಿಂದ ಬಸ್ಸನ್ನು ಚಾಲಕ ಒಳದಾರಿಯಿಂದ ಒಯ್ದಿದ್ದು, ಈ ವೇಳೆ ನೀರಿನ ಕಾಲುವೆಯ ಬದಿ ಸಾಗುತ್ತಿದ್ದಾಗ ನೀರಿಗೆ ಉರುಳಿ ಬಿದ್ದಿದೆ. 23 ಸೀಟು ಸಾಮರ್ಥ್ಯದ ಬಸ್ಸಿನಲ್ಲಿ 54 ಮಂದಿ ಇದ್ದರು ಎನ್ನಲಾಗುತ್ತಿದ್ದು, ಫುಲ್ ಜನ ಇದ್ದುದರಿಂದ ನೀರಿನಲ್ಲಿ ಮುಳುಗಿ ಬಹಳಷ್ಟು ಮಂದಿ ಸಾವನ್ನಪ್ಪಿದ್ದಾರೆ. ಎಸ್ ಡಿ ಆರ್ ಎಫ್ ಪಡೆ ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿದೆ.
ಬಸ್ಸನ್ನು ಕ್ರೇನ್ ಬಳಸಿ ಮೇಲಕ್ಕೆ ಎತ್ತಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಬನ್ಸಾಗರ್ ಅಣೆಕಟ್ಟಿನಿಂದ ಬರುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ ಎಂದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ ಪೊಲೀಸರು ಶಂಕಿಸಿದ್ದಾರೆ.
ಘಟನೆ ಬಗ್ಗೆ ಮಧ್ಯಪ್ರದೇಶ ಸಿಎಂ ಶಿವರಾಜಸಿಂಗ್ ಚೌಹಾಣ್ ಆಘಾತ ವ್ಯಕ್ತಪಡಿಸಿದ್ದು ಮೃತರು ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
As many as 32 bodies found in the canal and several feared drowned after a bus fell off a bridge into a canal near Patna village in Madhya Pradesh's Sidhi district on Tuesday morning, police and eye witnesses said. District superintendent of police Pankaj Kumawat said rescue operation was underway.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm