ಬ್ರೇಕಿಂಗ್ ನ್ಯೂಸ್
18-02-21 10:42 am Headline Karnataka News Network ದೇಶ - ವಿದೇಶ
ನವದೆಹಲಿ, ಫೆಬ್ರವರಿ 18: ಬ್ರಿಟನ್ ರೂಪಾಂತರದ ಬಳಿಕ ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್ನ ರೂಪಾಂತರಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಂತಾರಾಷ್ಟ್ರೀಯ ಪ್ರಯಾಣಿಕರಿಗಾಗಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಹೊಸ ನಿಯಮವು ಬ್ರಿಟನ್, ಯುರೋಪ್ ಮತ್ತು ಮಧ್ಯಪ್ರಾಚ್ಯದಿಂದ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಹೊರತುಪಡಿಸಿ ಉಳಿದವರಿಗೆ ಅನ್ವಯವಾಗಲಿದೆ. ಬ್ರಿಟನ್, ಯುರೋಪ್ ಮತ್ತು ಮಧ್ಯಪ್ರಾಚ್ಯದಿಂದ ಹೊರಡುವ ವಿಮಾನಗಳ ಮೂಲಕ ಬರುವ ಎಲ್ಲ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಹೊರತುಪಡಿಸಿ ಉಳಿದವರು ತಮ್ಮ ನಿಗದಿತ ಪ್ರಯಾಣಕ್ಕೂ ಮುನ್ನ ಏರ್ ಸುವಿಧಾ ಪೋರ್ಟಲ್ನಲ್ಲಿ ಸ್ವಯಂ ಘೋಷಣೆ ಸಲ್ಲಿಸಬೇಕು.
ಕುಟುಂಬದಲ್ಲಿ ಸಾವು ಸಂಭವಿಸಿದ ಕಾರಣ ಭಾರತಕ್ಕೆ ತುರ್ತಾಗಿ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರು ಕೋವಿಡ್ 19 ಆರ್ಟಿ-ಪಿಸಿಆರ್ ನೆಗೆಟಿವ್ ವರದಿಯನ್ನು ಅಪ್ಲೋಡ್ ಮಾಡಬೇಕು. ಇದರಿಂದ ವಿನಾಯಿತಿ ಬೇಕಿದ್ದಲ್ಲಿ ವಿಮಾನ ಏರುವ ಕನಿಷ್ಠ 72 ಗಂಟೆಗೂ ಮುನ್ನ ನ್ಯೂಡೆಲ್ಲಿ ಏರ್ಪೋರ್ಟ್ ವೆಬ್ಸೈಟ್ನಲ್ಲಿ ಮನವಿ ಸಲ್ಲಿಸಬೇಕು. ಪ್ರಯಾಣಕ್ಕೂ 72 ಗಂಟೆಗಳ ಒಳಗೆ ಈ ಪರೀಕ್ಷೆ ನಡೆಸಬೇಕು. ಪ್ರತಿ ಪ್ರಯಾಣಿಕರೂ ವರದಿಯ ಅಧಿಕೃತತೆ ಬಗ್ಗೆ ಘೋಷಣೆ ಸಲ್ಲಿಸಬೇಕು.
ಲಕ್ಷಣವಿಲ್ಲದಿದ್ದರೆ ಮಾತ್ರ ಪ್ರಯಾಣ;
ವಿಮಾನ ಏರುವ ವೇಳೆ ಥರ್ಮಲ್ ಸ್ಕ್ರೀನಿಂಗ್ ನಡೆಸಿ ಯಾವುದೇ ರೋಗ ಲಕ್ಷಣಗಳಿಲ್ಲದ ಪ್ರಯಾಣಿಕರನ್ನು ಮಾತ್ರ ಬಿಡಲಾಗುತ್ತದೆ. ಸಮುದ್ರ ಮಾರ್ಗದಲ್ಲಿ ಬಂದರುಗಳಿಗೆ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರು ಕೂಡ ಇದೇ ಶಿಷ್ಟಾಚಾರಗಳನ್ನು ಅನುಸರಿಸಬೇಕು. ಆದರೆ ಅಂತಹ ಪ್ರಯಾಣಿಕರಿಗೆ ಆನ್ಲೈನ್ ನೋಂದಣಿಯ ಸೌಲಭ್ಯ ಸದ್ಯಕ್ಕೆ ಲಭ್ಯವಿಲ್ಲ.
6-8 ಗಂಟೆ ಸಮಯ ನೀಡಬೇಕು;
ಸಂಪರ್ಕ ವಿಮಾನಗಳಿಂದ ಬರುವ ಪ್ರಯಾಣಿಕರಿಗೆ ವಿಮಾನಯಾನ ಸಂಸ್ಥೆಗಳು ಭಾರತದ ಪ್ರತಿ ವಿಮಾನ ನಿಲ್ದಾಣಕ್ಕೂ ಪ್ರಯಾಣಕ್ಕೆ ಕನಿಷ್ಠ 6-8 ಗಂಟೆ ಅಗತ್ಯ ಎಂಬುದನ್ನು ಪ್ರಯಾಣಿಕರಿಗೆ ತಿಳಿಸುತ್ತಿರಬೇಕು. ಸಂಪರ್ಕ ವಿಮಾನಗಳ ಟಿಕೆಟ್ ಬುಕಿಂಗ್ ಸಂದರ್ಭದಿಂದಲೂ ತಪಾಸಣೆ ಹಾಗೂ ಇತರೆ ಪ್ರಕ್ರಿಯೆಗಳಿಗೆ ಹೆಚ್ಚು ಸಮಯ ಬೇಕಾಗುತ್ತದೆ ಎಂಬ ಮಾಹಿತಿ ನೀಡಬೇಕು.
ಬ್ರಿಟನ್, ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾದ ಮೂಲಕ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ವಿಮಾನಯಾನ ಸಂಸ್ಥೆಗಳು ಗುರುತಿಸಿ ಅವರನ್ನು ವಿಮಾನದಲ್ಲಿ ಪ್ರತ್ಯೇಕಿಸಬೇಕು. ಬ್ರಿಟನ್, ಯುರೋಪ್ ಹಾಗೂ ಮಧ್ಯಪ್ರಾಚ್ಯದಿಂದ ಹೊರಡುವ ವಿಮಾನಗಳಲ್ಲಿ ಬಂದು ದೆಹಲಿ, ಮುಂಬೈ, ಬೆಂಗಳೂರು, ಹೈದರಾಬಾದ್ ಹಾಗೂ ಚೆನ್ನೈ ವಿಮಾನ ನಿಲ್ದಾಣಗಳಲ್ಲಿ ಇಳಿಯುವ ರಾಜ್ಯವಾರು ಪ್ರಯಾಣಿಕರ ಬಗ್ಗೆ ರಾಜ್ಯ ಸರ್ಕಾರಗಳಿಗೆ ಮಾಹಿತಿ ನೀಡಲಾಗುತ್ತದೆ.
ಹೊರಗೆ ಹೋಗಲು ಅನುಮತಿ ಅಗತ್ಯ;
14 ದಿನಕ್ಕಿಂತ ಕಡಿಮೆ ಅವಧಿ ಉಳಿದುಕೊಳ್ಳುವ ಅಂತಾರಾಷ್ಟ್ರೀಯ ಪ್ರಯಾಣಿಕರು, ನೆಗೆಟಿವ್ ಪತ್ತೆಯಾದವರು, ಯಾವುದೇ ರೋಗ ಲಕ್ಷಣಗಳಿಲ್ಲದವರು ಎಲ್ಲ ಪ್ರಕ್ರಿಯೆಗಳಿಗೂ ಒಳಪಡಬೇಕು. ಭಾರತದಿಂದ ಹೊರಕ್ಕೆ ಪ್ರಯಾಣಿಸಲು ತಮ್ಮ ಜಿಲ್ಲಾ/ರಾಜ್ಯ ಆರೋಗ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಅನುಮತಿ ಪಡೆಯಬೇಕು.
Ministry of Civil Aviation today announced updated guidelines for the international passengers coming to India in view of the rising cases mutant strain of covid-19 in India.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm