ಬ್ರೇಕಿಂಗ್ ನ್ಯೂಸ್
18-02-21 10:42 am Headline Karnataka News Network ದೇಶ - ವಿದೇಶ
ನವದೆಹಲಿ, ಫೆಬ್ರವರಿ 18: ಬ್ರಿಟನ್ ರೂಪಾಂತರದ ಬಳಿಕ ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್ನ ರೂಪಾಂತರಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಂತಾರಾಷ್ಟ್ರೀಯ ಪ್ರಯಾಣಿಕರಿಗಾಗಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಹೊಸ ನಿಯಮವು ಬ್ರಿಟನ್, ಯುರೋಪ್ ಮತ್ತು ಮಧ್ಯಪ್ರಾಚ್ಯದಿಂದ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಹೊರತುಪಡಿಸಿ ಉಳಿದವರಿಗೆ ಅನ್ವಯವಾಗಲಿದೆ. ಬ್ರಿಟನ್, ಯುರೋಪ್ ಮತ್ತು ಮಧ್ಯಪ್ರಾಚ್ಯದಿಂದ ಹೊರಡುವ ವಿಮಾನಗಳ ಮೂಲಕ ಬರುವ ಎಲ್ಲ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಹೊರತುಪಡಿಸಿ ಉಳಿದವರು ತಮ್ಮ ನಿಗದಿತ ಪ್ರಯಾಣಕ್ಕೂ ಮುನ್ನ ಏರ್ ಸುವಿಧಾ ಪೋರ್ಟಲ್ನಲ್ಲಿ ಸ್ವಯಂ ಘೋಷಣೆ ಸಲ್ಲಿಸಬೇಕು.

ಕುಟುಂಬದಲ್ಲಿ ಸಾವು ಸಂಭವಿಸಿದ ಕಾರಣ ಭಾರತಕ್ಕೆ ತುರ್ತಾಗಿ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರು ಕೋವಿಡ್ 19 ಆರ್ಟಿ-ಪಿಸಿಆರ್ ನೆಗೆಟಿವ್ ವರದಿಯನ್ನು ಅಪ್ಲೋಡ್ ಮಾಡಬೇಕು. ಇದರಿಂದ ವಿನಾಯಿತಿ ಬೇಕಿದ್ದಲ್ಲಿ ವಿಮಾನ ಏರುವ ಕನಿಷ್ಠ 72 ಗಂಟೆಗೂ ಮುನ್ನ ನ್ಯೂಡೆಲ್ಲಿ ಏರ್ಪೋರ್ಟ್ ವೆಬ್ಸೈಟ್ನಲ್ಲಿ ಮನವಿ ಸಲ್ಲಿಸಬೇಕು. ಪ್ರಯಾಣಕ್ಕೂ 72 ಗಂಟೆಗಳ ಒಳಗೆ ಈ ಪರೀಕ್ಷೆ ನಡೆಸಬೇಕು. ಪ್ರತಿ ಪ್ರಯಾಣಿಕರೂ ವರದಿಯ ಅಧಿಕೃತತೆ ಬಗ್ಗೆ ಘೋಷಣೆ ಸಲ್ಲಿಸಬೇಕು.

ಲಕ್ಷಣವಿಲ್ಲದಿದ್ದರೆ ಮಾತ್ರ ಪ್ರಯಾಣ;
ವಿಮಾನ ಏರುವ ವೇಳೆ ಥರ್ಮಲ್ ಸ್ಕ್ರೀನಿಂಗ್ ನಡೆಸಿ ಯಾವುದೇ ರೋಗ ಲಕ್ಷಣಗಳಿಲ್ಲದ ಪ್ರಯಾಣಿಕರನ್ನು ಮಾತ್ರ ಬಿಡಲಾಗುತ್ತದೆ. ಸಮುದ್ರ ಮಾರ್ಗದಲ್ಲಿ ಬಂದರುಗಳಿಗೆ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರು ಕೂಡ ಇದೇ ಶಿಷ್ಟಾಚಾರಗಳನ್ನು ಅನುಸರಿಸಬೇಕು. ಆದರೆ ಅಂತಹ ಪ್ರಯಾಣಿಕರಿಗೆ ಆನ್ಲೈನ್ ನೋಂದಣಿಯ ಸೌಲಭ್ಯ ಸದ್ಯಕ್ಕೆ ಲಭ್ಯವಿಲ್ಲ.
6-8 ಗಂಟೆ ಸಮಯ ನೀಡಬೇಕು;
ಸಂಪರ್ಕ ವಿಮಾನಗಳಿಂದ ಬರುವ ಪ್ರಯಾಣಿಕರಿಗೆ ವಿಮಾನಯಾನ ಸಂಸ್ಥೆಗಳು ಭಾರತದ ಪ್ರತಿ ವಿಮಾನ ನಿಲ್ದಾಣಕ್ಕೂ ಪ್ರಯಾಣಕ್ಕೆ ಕನಿಷ್ಠ 6-8 ಗಂಟೆ ಅಗತ್ಯ ಎಂಬುದನ್ನು ಪ್ರಯಾಣಿಕರಿಗೆ ತಿಳಿಸುತ್ತಿರಬೇಕು. ಸಂಪರ್ಕ ವಿಮಾನಗಳ ಟಿಕೆಟ್ ಬುಕಿಂಗ್ ಸಂದರ್ಭದಿಂದಲೂ ತಪಾಸಣೆ ಹಾಗೂ ಇತರೆ ಪ್ರಕ್ರಿಯೆಗಳಿಗೆ ಹೆಚ್ಚು ಸಮಯ ಬೇಕಾಗುತ್ತದೆ ಎಂಬ ಮಾಹಿತಿ ನೀಡಬೇಕು.
ಬ್ರಿಟನ್, ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾದ ಮೂಲಕ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ವಿಮಾನಯಾನ ಸಂಸ್ಥೆಗಳು ಗುರುತಿಸಿ ಅವರನ್ನು ವಿಮಾನದಲ್ಲಿ ಪ್ರತ್ಯೇಕಿಸಬೇಕು. ಬ್ರಿಟನ್, ಯುರೋಪ್ ಹಾಗೂ ಮಧ್ಯಪ್ರಾಚ್ಯದಿಂದ ಹೊರಡುವ ವಿಮಾನಗಳಲ್ಲಿ ಬಂದು ದೆಹಲಿ, ಮುಂಬೈ, ಬೆಂಗಳೂರು, ಹೈದರಾಬಾದ್ ಹಾಗೂ ಚೆನ್ನೈ ವಿಮಾನ ನಿಲ್ದಾಣಗಳಲ್ಲಿ ಇಳಿಯುವ ರಾಜ್ಯವಾರು ಪ್ರಯಾಣಿಕರ ಬಗ್ಗೆ ರಾಜ್ಯ ಸರ್ಕಾರಗಳಿಗೆ ಮಾಹಿತಿ ನೀಡಲಾಗುತ್ತದೆ.

ಹೊರಗೆ ಹೋಗಲು ಅನುಮತಿ ಅಗತ್ಯ;
14 ದಿನಕ್ಕಿಂತ ಕಡಿಮೆ ಅವಧಿ ಉಳಿದುಕೊಳ್ಳುವ ಅಂತಾರಾಷ್ಟ್ರೀಯ ಪ್ರಯಾಣಿಕರು, ನೆಗೆಟಿವ್ ಪತ್ತೆಯಾದವರು, ಯಾವುದೇ ರೋಗ ಲಕ್ಷಣಗಳಿಲ್ಲದವರು ಎಲ್ಲ ಪ್ರಕ್ರಿಯೆಗಳಿಗೂ ಒಳಪಡಬೇಕು. ಭಾರತದಿಂದ ಹೊರಕ್ಕೆ ಪ್ರಯಾಣಿಸಲು ತಮ್ಮ ಜಿಲ್ಲಾ/ರಾಜ್ಯ ಆರೋಗ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಅನುಮತಿ ಪಡೆಯಬೇಕು.
Ministry of Civil Aviation today announced updated guidelines for the international passengers coming to India in view of the rising cases mutant strain of covid-19 in India.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm