ಬ್ರೇಕಿಂಗ್ ನ್ಯೂಸ್
31-07-20 02:39 pm Headline Karnataka News Network ದೇಶ - ವಿದೇಶ
ಅಮರಾವತಿ (ಜು. 31): ಆಲ್ಕೋಹಾಲ್ ಸಿಗಲಿಲ್ಲ ಎಂಬ ಕಾರಣಕ್ಕೆ ಸ್ಯಾನಿಟೈಸರ್ ಸೇವಿಸಿ ಮೂವರು ಭಿಕ್ಷುಕರು ಸೇರಿ ಒಟ್ಟು 10 ಜನ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಕುರಿಚೇಡು ಮಂಡಲ ಹೆಡ್ ಕ್ವಾರ್ಟರ್ ಟೌನ್ನ ಕೆಲವರು ಮೂರ್ನಾಲ್ಕು ದಿನಗಳಿಂದ ಸ್ಯಾನಿಟೈಸರ್ ಸೇವಿಸುತ್ತಿದ್ದರು. ಆಲ್ಕೋಹಾಲ್ ಸಿಗದ ಕಾರಣ ನೀರಿಗೆ ಮತ್ತು ಕೂಲ್ಡ್ರಿಂಕ್ಸ್ಗೆ ಸ್ಯಾನಿಟೈಸರ್ ಸೇರಿಸಿಕೊಂಡು ಕುಡಿಯುತ್ತಿದ್ದರು. ಸ್ಯಾನಿಟೈಸರ್ನಲ್ಲಿ ಆಲ್ಕೋಹಾಲ್ ಅಂಶ ಇರುವುದರಿಂದ ಈ ರೀತಿ ಮಿಕ್ಸ್ ಮಾಡಿಕೊಂಡು ಕುಡಿಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಗ್ರಾಮದಲ್ಲಿ ಕೆಲವು ದಿನಗಳಿಂದ ಅಸಹಕ ರೀತಿಯಲ್ಲಿ ಜನರು ಸಾಯುತ್ತಿದ್ದರು. ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಪೊಲೀಸರಿಗೆ ಅನುಮಾನ ಶುರುವಾಗಿತ್ತು. ಇಂದು ಬೆಳಿಗ್ಗೆ ಮತ್ತೆ 7 ಜನರು ಸಾವನ್ನಪ್ಪಿದ್ದರು. ಇದಕ್ಕೂ ಮೊದಲು ನಿನ್ನೆ ರಾತ್ರಿ ಕುರಿಚೇಡು ಪೊಲೇರಮ್ಮ ದೇವಾಲಯದ ಬಳಿ ಇದ್ದ ಭಿಕ್ಷುಕ ಏಕಾಏಕಿ ಕುಸಿದುಬಿದ್ದು ಸಾವನ್ನಪ್ಪಿದ್ದ. ಅದೇ ಏರಿಯಾದ ಮತ್ತೋರ್ವ ಭಿಕ್ಷುಕ ಕೂಡ ಇದೇ ರೀತಿ ಕುಸಿದುಬಿದ್ದಿದ್ದ. ಸುತ್ತಮುತ್ತಲಿನವರು ಆತನನ್ನು ಆ್ಯಂಬುಲೆನ್ಸ್ನಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ನೋಡಿದರೂ ದಾರಿಯಲ್ಲೇ ಸಾವನ್ನಪ್ಪಿದ್ದ.
ಅಲ್ಲದೆ, ಕುರಿಚೇಡಿನ 7 ಜನರು ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಗ್ಗೆ ಅವರೆಲ್ಲರೂ ಸಾವನ್ನಪ್ಪಿದ್ದಾರೆ. ಕುರಿಚೇಡು ಗ್ರಾಮ ಕಂಟೇನ್ಮೆಂಟ್ ಜೋನ್ ಆಗಿರುವುದರಿಂದ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿತ್ತು. ಹೀಗಾಗಿ, ಮದ್ಯಪ್ರಿಯರು ಸ್ಯಾನಿಟೈಸರ್ ಅನ್ನು ನೀರು ಹಾಗೂ ಕೂಲ್ಡ್ರಿಂಕ್ಸ್ ಜೊತೆ ಮಿಕ್ಸ್ ಮಾಡಿಕೊಂಡು ಕುಡಿದಿದ್ದರು. ಈ ಘಟನೆ ನಡೆದ ಸ್ಥಳದಲ್ಲಿ ಸ್ಯಾನಿಟೈಸರ್ ಬಾಟಲಿಗಳು ಕೂಡ ಪತ್ತೆಯಾಗಿವೆ.
08-01-26 11:06 pm
HK News Desk
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
08-01-26 08:48 pm
Mangalore Correspondent
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm