ಬ್ರೇಕಿಂಗ್ ನ್ಯೂಸ್
31-07-20 02:39 pm Headline Karnataka News Network ದೇಶ - ವಿದೇಶ
ಅಮರಾವತಿ (ಜು. 31): ಆಲ್ಕೋಹಾಲ್ ಸಿಗಲಿಲ್ಲ ಎಂಬ ಕಾರಣಕ್ಕೆ ಸ್ಯಾನಿಟೈಸರ್ ಸೇವಿಸಿ ಮೂವರು ಭಿಕ್ಷುಕರು ಸೇರಿ ಒಟ್ಟು 10 ಜನ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಕುರಿಚೇಡು ಮಂಡಲ ಹೆಡ್ ಕ್ವಾರ್ಟರ್ ಟೌನ್ನ ಕೆಲವರು ಮೂರ್ನಾಲ್ಕು ದಿನಗಳಿಂದ ಸ್ಯಾನಿಟೈಸರ್ ಸೇವಿಸುತ್ತಿದ್ದರು. ಆಲ್ಕೋಹಾಲ್ ಸಿಗದ ಕಾರಣ ನೀರಿಗೆ ಮತ್ತು ಕೂಲ್ಡ್ರಿಂಕ್ಸ್ಗೆ ಸ್ಯಾನಿಟೈಸರ್ ಸೇರಿಸಿಕೊಂಡು ಕುಡಿಯುತ್ತಿದ್ದರು. ಸ್ಯಾನಿಟೈಸರ್ನಲ್ಲಿ ಆಲ್ಕೋಹಾಲ್ ಅಂಶ ಇರುವುದರಿಂದ ಈ ರೀತಿ ಮಿಕ್ಸ್ ಮಾಡಿಕೊಂಡು ಕುಡಿಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಗ್ರಾಮದಲ್ಲಿ ಕೆಲವು ದಿನಗಳಿಂದ ಅಸಹಕ ರೀತಿಯಲ್ಲಿ ಜನರು ಸಾಯುತ್ತಿದ್ದರು. ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಪೊಲೀಸರಿಗೆ ಅನುಮಾನ ಶುರುವಾಗಿತ್ತು. ಇಂದು ಬೆಳಿಗ್ಗೆ ಮತ್ತೆ 7 ಜನರು ಸಾವನ್ನಪ್ಪಿದ್ದರು. ಇದಕ್ಕೂ ಮೊದಲು ನಿನ್ನೆ ರಾತ್ರಿ ಕುರಿಚೇಡು ಪೊಲೇರಮ್ಮ ದೇವಾಲಯದ ಬಳಿ ಇದ್ದ ಭಿಕ್ಷುಕ ಏಕಾಏಕಿ ಕುಸಿದುಬಿದ್ದು ಸಾವನ್ನಪ್ಪಿದ್ದ. ಅದೇ ಏರಿಯಾದ ಮತ್ತೋರ್ವ ಭಿಕ್ಷುಕ ಕೂಡ ಇದೇ ರೀತಿ ಕುಸಿದುಬಿದ್ದಿದ್ದ. ಸುತ್ತಮುತ್ತಲಿನವರು ಆತನನ್ನು ಆ್ಯಂಬುಲೆನ್ಸ್ನಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ನೋಡಿದರೂ ದಾರಿಯಲ್ಲೇ ಸಾವನ್ನಪ್ಪಿದ್ದ.
ಅಲ್ಲದೆ, ಕುರಿಚೇಡಿನ 7 ಜನರು ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಗ್ಗೆ ಅವರೆಲ್ಲರೂ ಸಾವನ್ನಪ್ಪಿದ್ದಾರೆ. ಕುರಿಚೇಡು ಗ್ರಾಮ ಕಂಟೇನ್ಮೆಂಟ್ ಜೋನ್ ಆಗಿರುವುದರಿಂದ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿತ್ತು. ಹೀಗಾಗಿ, ಮದ್ಯಪ್ರಿಯರು ಸ್ಯಾನಿಟೈಸರ್ ಅನ್ನು ನೀರು ಹಾಗೂ ಕೂಲ್ಡ್ರಿಂಕ್ಸ್ ಜೊತೆ ಮಿಕ್ಸ್ ಮಾಡಿಕೊಂಡು ಕುಡಿದಿದ್ದರು. ಈ ಘಟನೆ ನಡೆದ ಸ್ಥಳದಲ್ಲಿ ಸ್ಯಾನಿಟೈಸರ್ ಬಾಟಲಿಗಳು ಕೂಡ ಪತ್ತೆಯಾಗಿವೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm