ಬ್ರೇಕಿಂಗ್ ನ್ಯೂಸ್
17-08-20 06:24 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 17: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಪಕ್ಷದ ಮುಖಂಡರ ದ್ವೇಷ ಭಾಷಣಗಳ ವಿಚಾರದಲ್ಲಿ ಫೇಸ್ಬುಕ್ ಮೌನ ವಹಿಸಿದೆ ಎಂಬ ಅಮೆರಿಕದ ವಾಲ್ಸ್ಟ್ರೀಟ್ ಜರ್ನಲ್ ಪತ್ರಿಕೆಯ ವರದಿಯ ಹಿನ್ನೆಲೆಯಲ್ಲಿ ತಮಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಫೇಸ್ಬುಕ್ ಇಂಡಿಯಾದ ಉನ್ನತ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕ ಅಧಿಕಾರಿ ನವದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.
ಫೇಸ್ಬುಕ್ನ ಇಂಡಿಯಾದ ಉನ್ನತ ಅಧಿಕಾರಿಯಾಗಿರುವ ಅಂಕಿ ದಾಸ್ ಅವರು ದೆಹಲಿ ಪೊಲೀಸರಿಗೆ ಸೋಮವಾರ ದೂರು ನೀಡಿದ್ದು, ‘ಆನ್ಲೈನ್ನಲ್ಲಿ ಕೆಲವರು ತಮ್ಮ ರಾಜಕೀಯ ಸಂಬಂಧಗಳ ಹಿನ್ನೆಲೆಯಲ್ಲಿ ಉದ್ದೇಶಪೂರ್ವಕವಾಗಿ ನಿಂದಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಬಿಜೆಪಿಯ ಒಬ್ಬ ಮುಖಂಡ ಮತ್ತು ಇತರ ಮೂವರ ದ್ವೇಷ ಭಾಷಣದ ಬಗ್ಗೆ ‘ಫೇಸ್ಬುಕ್ ಇಂಡಿಯಾ’ ಮೌನ ವಹಿಸಿದೆ. ತನ್ನ ವ್ಯಾಪಾರಕ್ಕೆ ಯಾವುದೇ ಹಾನಿ ಆಗದಿರಲಿ ಎಂಬುದೇ ಇದಕ್ಕೆ ಕಾರಣ. ಫೇಸ್ಬುಕ್ ಭಾರತದ ಸಾರ್ವಜನಿಕ ನೀತಿ, ನಿರ್ದೇಶಕಿ ಅಂಕಿ ದಾಸ್ ಅವರು ಈ ವಿಚಾರವಾಗಿ ತಮ್ಮ ಸಿಬ್ಬಂದಿಯ ಮೇಲೆ ಒತ್ತಡ ಹೇರುತ್ತಿದ್ದರು ಎಂದು ಅಮೆರಿಕದ ‘ವಾಲ್ಸ್ಟ್ರೀಟ್ ಜರ್ನಲ್’ ಭಾನುವಾರ ಮುಖಪುಟದಲ್ಲಿ ವರದಿ ಮಾಡಿತ್ತು. ಇದೇ ವಿಚಾರವಾಗಿ ತಮಗೆ ಬೆದರಿಕೆಗಳು ಬರುತ್ತಿವೆ ಎಂದು ಅವರು ಆರೋಪಿಸಿದ್ದಾರೆ.
ನಿರಂತರವಾದ ಬೆದರಿಕೆ, ಕಿರುಕುಳದಿಂದಾಗಿ ತೊಂದರೆಗೀಡಾಗಿದ್ದೇನೆ ಎಂದು ದಾಸ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ ಎಂದು ಭಾರತದ ಹಿಂದೂ ಪತ್ರಿಕೆ ವರದಿ ಮಾಡಿದೆ. ಆದರೆ, ಪೊಲೀಸ್ ದೂರಿನ ಬಗ್ಗೆ ಮಾತನಾಡಲು ಫೇಸ್ಬುಕ್ ಆಗಲಿ, ಅಂಕಿ ದಾಸ್ ಆಗಲಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 08:30 pm
HK News Desk
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm