ಬ್ರೇಕಿಂಗ್ ನ್ಯೂಸ್
17-08-20 06:24 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 17: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಪಕ್ಷದ ಮುಖಂಡರ ದ್ವೇಷ ಭಾಷಣಗಳ ವಿಚಾರದಲ್ಲಿ ಫೇಸ್ಬುಕ್ ಮೌನ ವಹಿಸಿದೆ ಎಂಬ ಅಮೆರಿಕದ ವಾಲ್ಸ್ಟ್ರೀಟ್ ಜರ್ನಲ್ ಪತ್ರಿಕೆಯ ವರದಿಯ ಹಿನ್ನೆಲೆಯಲ್ಲಿ ತಮಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಫೇಸ್ಬುಕ್ ಇಂಡಿಯಾದ ಉನ್ನತ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕ ಅಧಿಕಾರಿ ನವದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.
ಫೇಸ್ಬುಕ್ನ ಇಂಡಿಯಾದ ಉನ್ನತ ಅಧಿಕಾರಿಯಾಗಿರುವ ಅಂಕಿ ದಾಸ್ ಅವರು ದೆಹಲಿ ಪೊಲೀಸರಿಗೆ ಸೋಮವಾರ ದೂರು ನೀಡಿದ್ದು, ‘ಆನ್ಲೈನ್ನಲ್ಲಿ ಕೆಲವರು ತಮ್ಮ ರಾಜಕೀಯ ಸಂಬಂಧಗಳ ಹಿನ್ನೆಲೆಯಲ್ಲಿ ಉದ್ದೇಶಪೂರ್ವಕವಾಗಿ ನಿಂದಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಬಿಜೆಪಿಯ ಒಬ್ಬ ಮುಖಂಡ ಮತ್ತು ಇತರ ಮೂವರ ದ್ವೇಷ ಭಾಷಣದ ಬಗ್ಗೆ ‘ಫೇಸ್ಬುಕ್ ಇಂಡಿಯಾ’ ಮೌನ ವಹಿಸಿದೆ. ತನ್ನ ವ್ಯಾಪಾರಕ್ಕೆ ಯಾವುದೇ ಹಾನಿ ಆಗದಿರಲಿ ಎಂಬುದೇ ಇದಕ್ಕೆ ಕಾರಣ. ಫೇಸ್ಬುಕ್ ಭಾರತದ ಸಾರ್ವಜನಿಕ ನೀತಿ, ನಿರ್ದೇಶಕಿ ಅಂಕಿ ದಾಸ್ ಅವರು ಈ ವಿಚಾರವಾಗಿ ತಮ್ಮ ಸಿಬ್ಬಂದಿಯ ಮೇಲೆ ಒತ್ತಡ ಹೇರುತ್ತಿದ್ದರು ಎಂದು ಅಮೆರಿಕದ ‘ವಾಲ್ಸ್ಟ್ರೀಟ್ ಜರ್ನಲ್’ ಭಾನುವಾರ ಮುಖಪುಟದಲ್ಲಿ ವರದಿ ಮಾಡಿತ್ತು. ಇದೇ ವಿಚಾರವಾಗಿ ತಮಗೆ ಬೆದರಿಕೆಗಳು ಬರುತ್ತಿವೆ ಎಂದು ಅವರು ಆರೋಪಿಸಿದ್ದಾರೆ.
ನಿರಂತರವಾದ ಬೆದರಿಕೆ, ಕಿರುಕುಳದಿಂದಾಗಿ ತೊಂದರೆಗೀಡಾಗಿದ್ದೇನೆ ಎಂದು ದಾಸ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ ಎಂದು ಭಾರತದ ಹಿಂದೂ ಪತ್ರಿಕೆ ವರದಿ ಮಾಡಿದೆ. ಆದರೆ, ಪೊಲೀಸ್ ದೂರಿನ ಬಗ್ಗೆ ಮಾತನಾಡಲು ಫೇಸ್ಬುಕ್ ಆಗಲಿ, ಅಂಕಿ ದಾಸ್ ಆಗಲಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am