ಬ್ರೇಕಿಂಗ್ ನ್ಯೂಸ್
23-02-21 12:26 pm Headline Karnataka News Network ದೇಶ - ವಿದೇಶ
ಭೋಪಾಲ್, ಫೆ.23: ನಿಂತಿದ್ದ ಟ್ಯಾಂಕರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಜನ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದ ಇಂದೋರ್ನ ತಲವಾಲಿ ಚಾಂದ್ ಬಳಿ ನಡೆದಿದೆ.
ಬೆಳಗಿನ ಜಾವ 2 ಗಂಟೆ ಸುಮಾರಿಗೆ ಘಟನೆ ನಡೆದಿರುವುದಾಗಿ ಅಂದಾಜಿಸಲಾಗಿದ್ದು, ವೇಗವಾಗಿ ಚಲಿಸುತ್ತಿದ್ದ ಕಾರು ಪೆಟ್ರೋಲ್ ಬಂಕ್ ಸಮೀಪದಲ್ಲಿ ನಿಂತಿದ್ದ ತೈಲ ಸಾಗಣೆ ಟ್ಯಾಂಕರ್ಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು, ಕಾರಿನಲ್ಲಿದ್ದ 6 ಜನ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತರಾಗಿದ್ದಾರೆ.
ಮೃತ ಯುವಕರೆಲ್ಲರೂ ಇಂದೋರ್ನ ನಿವಾಸಿಗಳಾಗಿದ್ದು, 18 ರಿಂದ 28 ವರ್ಷ ಪ್ರಾಯದವರೆಂದು ತಿಳಿದುಬಂದಿದೆ. ಈ ಯುವಕರ ತಂಡವು ಇಂದೋರ್ನ ಹೊರ ಪ್ರಾಂತ್ಯದಲ್ಲಿರುವ ಮಾಂಗ್ಲಿಯಾದಿಂದ ತಮ್ಮ ನಗರಕ್ಕೆ ಮರಳುತ್ತಿದ್ದರು ಎಂದು ಲಸುದಿಯ ಪೊಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು, ಮೃತರನ್ನು ರಿಶಿ ಪವಾರ್, ಸೂರಜ್, ಚಂದ್ರಭಾನ್ ರಘುವಂಶಿ, ಸೋನು ಜತ್, ಸುಮಿತ್ ಸಿಂಗ್ ಮತ್ತು ದೇವ್ ಎಂದು ಗುರುತಿಸಲಾಗಿದೆ.
ಅಪಘಾತವು ನಸುಕಿನ ವೇಳೆಯಲ್ಲಿ ನಡೆದಿರುವುದರಿಂದ ಚಾಲಕನಿಗೆ ನಿದ್ರೆ ಮಂಪರು ಆವರಿಸಿರುವುದು ಕಾರಣವಾಗಿರಬಹುದು ಎಂದು ಅನುಮಾನಿಸಲಾಗಿದೆ. ಜೊತೆಗೆ, ಅತಿಯಾದ ವೇಗ ಮತ್ತು ಅಜಾಗರೂಕತೆಯೂ ಅಪಘಾತಕ್ಕೆ ದಾರಿಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿರುವರಾದರೂ ಬದುಕಿ ಬಾಳಬೇಕಿದ್ದ ಆರು ಯುವಕರು ಹೀಗೆ ರಸ್ತೆ ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿರುವುದು ಅತ್ಯಂತ ಖೇದಕರ ಸಂಗತಿ.
After a Car ramed a parked tanker truck six students in car died on spot in Bhopal, Indore.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm