ಬ್ರೇಕಿಂಗ್ ನ್ಯೂಸ್
25-02-21 02:17 pm Headline Karnataka News Network ದೇಶ - ವಿದೇಶ
ಚೆನ್ನೈ, ಫೆ.25: 9, 10 ಮತ್ತು 11ನೇ ತರಗತಿಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಅಗತ್ಯವಿಲ್ಲ. ಎಲ್ಲರನ್ನೂ ಉತ್ತೀರ್ಣ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಡಪ್ಪಡಿ ಕೆ. ಪಳನಿಸ್ವಾಮಿ ಹೇಳಿದ್ದಾರೆ.
ಕೋವಿಡ್ ಸಾಂಕ್ರಾಮಿಕದ ನಡುವೆ ಎಸ್ಎಸ್ಎಲ್ ಸಿ ಮತ್ತು ಪ್ಲಸ್ ಒನ್ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ವೈದ್ಯಕೀಯ ತಜ್ಞರು ಹೇಳಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ ಪಳನಿಸ್ವಾಮಿ.

ಮೌಲ್ಯ ಮಾಪನ ಹೇಗೆ?
ಇಂಟರ್ನಲ್ ಪರೀಕ್ಷೆಯಲ್ಲಿ ಲಭಿಸಿದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳ ಕಲಿಕೆಯ ಮೌಲ್ಯಮಾಪನ ಮಾಡಲಾಗುವುದು. ಬಾಕಿ ಇರುವ ಪರೀಕ್ಷೆಗಳ ಅಂಕವನ್ನು ಎರಡು ಮಾನದಂಡಗಳಿಂದ ನಿರ್ಣಯಿಸಲಾಗುವುದು. ಕಾಲುವಾರ್ಷಿಕ ಮತ್ತು ಅರ್ಧವಾರ್ಷಿಕ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಶೇಕಡಾ 80 ಅಂಕ ಮತ್ತು ಹಾಜರಾತಿಯನ್ನು ಪರಿಗಣಿಸಿ ಶೇಕಡಾ 20 ಅಂಕಗಳನ್ನು ನೀಡಲಾಗುವುದು. ಈ ಬಗ್ಗೆ ತಮಿಳುನಾಡು ಶಿಕ್ಷಣ ಇಲಾಖೆ ಶಾಲೆಗಳಿಗೆ ಇನ್ನೂ ಸುತ್ತೋಲೆ ಕಳುಹಿಸಿಲ್ಲ. ಆದಾಗ್ಯೂ, ತಮಿಳುನಾಡು ಸರ್ಕಾರದ ಪರೀಕ್ಷಾ ನಿರ್ದೇಶನಾಲಯ ಬಿಡುಗಡೆ ಮಾಡಿದ ವೇಳಾಪಟ್ಟಿ ಪ್ರಕಾರ 12ನೇ ತರಗತಿಗೆ ಪರೀಕ್ಷೆ ನಡೆಯಲಿದೆ.
12ನೇ ತರಗತಿಗೆ ಮೇ 3ರಿಂದ ಮೇ 21ರವರೆಗೆ ನಡೆಯಲಿದೆ. ಸಾಮಾನ್ಯವಾಗಿ ಮಾರ್ಚ್ ತಿಂಗಳಲ್ಲಿ ನಡೆಯುತ್ತಿದ್ದ ಪರೀಕ್ಷೆ ಕೋವಿಡ್ ಸಾಂಕ್ರಾಮಿಕದಿಂದಾಗಿ ಮುಂದೂಡಿಕೆಯಾಗಿತ್ತು. 2020 ಮಾರ್ಚ್ ತಿಂಗಳಲ್ಲಿ ಕೋವಿಡ್ನಿಂದಾಗಿ ತಮಿಳುನಾಡಿನಲ್ಲಿ ಶಾಲೆಗಳನ್ನು ಮುಚ್ಚಲಾಗಿತ್ತು. ಆನಂತರ ಜನವರಿ 19ರಂದು 10 ಮತ್ತು 12ನೇ ತರಗತಿ ಮಕ್ಕಳಿಗೆ ಮಾತ್ರ ತರಗತಿ ಆರಂಭ ಮಾಡಲಾಗಿತ್ತು.
Tamil Nadu Chief Minister Edappadi K Palaniswami on Thursday said that the state government has decided to promote the students of classes 9, 10, and 11 to the next class without any examinations.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm