ಬ್ರೇಕಿಂಗ್ ನ್ಯೂಸ್
26-02-21 12:20 pm Headline Karnataka News Network ದೇಶ - ವಿದೇಶ
ಮುಂಬೈ,ಫೆ.26: ಸ್ಫೋಟಕ ಒಳಗೊಂಡ ಎಸ್ಯುವಿ ಕಾರ್ ಉದ್ಯಮಿ ಮುಕೇಶ್ ಅಂಬಾನಿ ಮನೆ ಬಳಿ ಕಾಣಿಸಿಕೊಂಡಿದ್ದು, ಆತಂಕ ಹೆಚ್ಚಿಸಿದೆ.
ಪೆಡ್ಡಾರ್ ರಸ್ತೆಯಲ್ಲಿರುವ ಸುಪ್ರಸಿದ್ಧ ಆಂಟಿಲಿಯಾ ಮನೆಯ ಹೊರಗಡೆ ಸ್ಕಾರ್ಪಿಯೋ ಎಸ್ಯುವಿ ಕಾರ್ ಕಾಣಿಸಿಕೊಂಡಿದ್ದು, ಅದರ ಒಳಗಡೆ ಬ್ಯಾಗ್ನಲ್ಲಿ 20 ಜೆಲೆಟಿನ್ ಕಡ್ಡಿ ಪತ್ತೆಯಾಗಿವೆ. ವಾಹನ ನಿಂತಿದ್ದನ್ನು ಗುರುವಾರ ಸಂಜೆ ಅಂಬಾನಿ ಭದ್ರತಾ ಸಿಬ್ಬಂದಿ ಗುರುತಿಸಿದ್ದು, ಬಳಿಕ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಮಾಹಿತಿ ದೊರೆಯುತ್ತಿದ್ದಂತೆ ಗ್ಯಾಮದೇವಿ ಠಾಣೆಯ ಹಲವು ಪೊಲೀಸರು ಸ್ಥಳಕ್ಕೆ ಧಾವಿಸಿ ಎಸ್ಯುವಿ ಪರೀಕ್ಷಿಸಿದ್ದಾರೆ. ಬಳಿಕ ಬಾಂಬ್ ಸ್ಕ್ವಾಡ್ನ್ನು ಸಹ ಸ್ಥಳಕ್ಕೆ ಕರೆಸಲಾಗಿದ್ದು, ವಾಹನವನ್ನು ಪರೀಕ್ಷೆ ನಡೆಸಿದ ಬಳಿಕ 20 ಜೆಲೆಟಿನ್ ಕಡ್ಡಿ ಇರುವುದು ಪತ್ತೆಯಾಗಿದೆ. 20 ಜೆಲೆಟಿನ್ ಕಡ್ಡಿ ಪತ್ತೆಯಾಗುತ್ತಿದ್ದಂತೆ ಡಾಗ್ ಸ್ಕ್ವಾಡ್ ಸಹ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿತು.


ವಾಹನದಲ್ಲಿ 20 ಜೆಲೆಟಿನ್ ಕಡ್ಡಿ ಪತ್ತೆಯಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಖಚಿತಪಡಿಸಿದ್ದಾರೆ. ಕೇವಲ ಜೆಲೆಟಿನ್ ಸ್ಟಿಕ್ಸ್ ಮಾತ್ರ ಪತ್ತೆಯಾಗಿದ್ದು, ಸ್ಫೋಟಕದ ಸೆಂಬಲ್ ಪತ್ತೆಯಾಗಿಲ್ಲ ಎಂದು ಮುಂಬೈ ಪೊಲೀಸ್ ಪಿಆರ್ಒ ಖಚಿತಪಡಿಸಿದ್ದಾರೆ.

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಸಹ ಈ ಬಗ್ಗೆ ಪ್ರತಿಕ್ರಿಯಿಸಿ, ಮುಖೇಶ್ ಅಂಬಾನಿ ಅವರ ಮನೆ ಬಳಿ ಕಾರ್ ನಲ್ಲಿ ಜೆಲೆಟಿನ್ ಪತ್ತೆಯಾಗಿರುವ ಬಗ್ಗೆ ಮುಂಬೈ ಕ್ರೈಂ ಬ್ರಾಂಚ್ ತನಿಖೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

ಸ್ಫೋಟಕ ವಸ್ತು ಪತ್ತೆಯಾಗುತ್ತಿದ್ದಂತೆ ಕಮಾಂಡೋಗಳು ಸೇರಿ ಭಾರೀ ಪ್ರಮಾಣದಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಭಯೋತ್ಪಾದನೆ ನಿಗ್ರಹ ದಳ ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ನಿಗೂಢ ವಾಹನದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಪರಿಶೀಲಿಸುತ್ತಿದ್ದಾರೆ.
The Mumbai Police has lodged an FIR after an abandoned vehicle with explosive material was found near Antilia, the south Mumbai residence of Reliance Industries chairman Mukesh Ambani.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm