ಬ್ರೇಕಿಂಗ್ ನ್ಯೂಸ್
26-02-21 05:54 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.26: ಕೇಂದ್ರ ಚುನಾವಣಾ ಆಯೋಗ ಕೊನೆಗೂ ಪಂಚ ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಕೇರಳ, ತಮಿಳುನಾಡು, ಪುದುಚೇರಿಯಲ್ಲಿ ಎಪ್ರಿಲ್ 6ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ಅಸ್ಸಾಂನಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 27ರಿಂದ ಎಪ್ರಿಲ್ 6ರ ನಡುವೆ ನಡೆಯಲಿದೆ. ಇದೇ ವೇಳೆ, ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಸಲು ಆಯೋಗ ನಿರ್ಧರಿಸಿದ್ದು, ಮಾರ್ಚ್ 27ರಿಂದ ಎಪ್ರಿಲ್ 29ರ ನಡುವೆ ದಿನಾಂಕಗಳನ್ನು ಪ್ರಕಟಿಸಿದೆ.

ದಕ್ಷಿಣ ಭಾರತದಲ್ಲಿ ಕೇರಳ ಮತ್ತು ತಮಿಳುನಾಡಿನ ಚುನಾವಣೆ ಪ್ರಮುಖವಾಗಿದ್ದು, ಎರಡು ಕಡೆಗಳಲ್ಲೂ ಇನ್ನೂ ಅಸ್ತಿತ್ವ ಸಾಧಿಸದ ಬಿಜೆಪಿ ಈ ಬಾರಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದೆ. ಕೇರಳದಲ್ಲಿ 140 ಸೀಟುಗಳಿಗೆ ಚುನಾವಣೆ ನಡೆಯಲಿದ್ದು, ಕೆಲವು ಕಡೆ ಇದೇ ಮೊದಲ ಬಾರಿಗೆ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ ಕಂಡುಬಂದಿದೆ.

ಕಳೆದ ಬಾರಿ ತ್ರಿಸ್ತರ ಪಂಚಾಯತ್ ಚುನಾವಣೆಯಲ್ಲಿ ಬಹಳಷ್ಟು ಕಡೆ ತೀವ್ರ ಪೈಪೋಟಿ ನೀಡಿದ್ದ ಬಿಜೆಪಿ ಕೇರಳದ ಇತಿಹಾಸದಲ್ಲಿ ಇದೇ ಮೊದಲಿಗೆ ರಾಜ್ಯದಾದ್ಯಂತ ಬೆಂಬಲ ಗಳಿಸಿಕೊಂಡಿತ್ತು. ಈ ಬಾರಿ ಚುನಾವಣೆಗೂ ಮೊದಲೇ ವಿಜಯ ಯಾತ್ರೆ ಹೆಸರಲ್ಲಿ ಬಿಜೆಪಿ ನಾಯಕರು ರ್ಯಾಲಿ ಹಮ್ಮಿಕೊಂಡಿದ್ದಾರೆ. ಮೆಟ್ರೋ ಮ್ಯಾನ್ ಖ್ಯಾತಿಯ ಇ. ಶ್ರೀಧರನ್ ಅವರನ್ನು ಪಕ್ಷಕ್ಕೆ ಸೆಳೆದುಕೊಂಡಿದ್ದು, ಕ್ರೀಡಾ ತಾರೆ ಪಿ.ಟಿ. ಉಷಾ ಅವರನ್ನೂ ಪಕ್ಷಕ್ಕೆ ಸೇರಿಸಲು ತಯಾರಿ ನಡೆಸಿದ್ದಾರೆ. ಇದೇ ವೇಳೆ, ತಮಿಳುನಾಡಿನಲ್ಲೂ ಬಿಜೆಪಿ ಚುನಾವಣೆಗೆ ಭಾರೀ ತಯಾರಿ ನಡೆಸಿದ್ದು, ಮಾಜಿ ಅಧಿಕಾರಿ ಅಣ್ಣಾಮಲೈ ಮೂಲಕ ಸದ್ದಿಲ್ಲದ ಪ್ರಯತ್ನಗಳನ್ನು ನಡೆಸಿದೆ.
ಎಪ್ರಿಲ್ ನಲ್ಲಿ ಪಂಚ ರಾಜ್ಯ ಚುನಾವಣೆ ; ಕೇರಳ, ತಮಿಳ್ನಾಡಿನಲ್ಲಿ ಒಂದೇ ಹಂತ, ಬಂಗಾಳಕ್ಕೆ ಏಳು ಹಂತ ?
The Election Commission Friday announced the schedule for upcoming Assembly elections in four states and one Union Territory (Puducherry).
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am