ಬ್ರೇಕಿಂಗ್ ನ್ಯೂಸ್
01-03-21 08:18 pm Headline Karnataka News Network ದೇಶ - ವಿದೇಶ
ತಮಿಳುನಾಡು, ಮಾ 01: ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಅವರ ಸಿಕ್ಸ್ ಪ್ಯಾಕ್ ಫೋಟೋ ಇತ್ತೀಚೆಗೆ ವೈರಲ್ ಆಗಿತ್ತು. ಈ ಫೋಟೋಗೆ ಭಾರಿ ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ರಾಹುಲ್ ಗಾಂಧಿ ಮತ್ತೆ ಸುದ್ದಿಯಾಗಿದ್ದಾರೆ. ಅದೂ ಫಿಟ್ನೆಸ್ ವಿಚಾರಕ್ಕೆ. ಅವರು ಒಂದೇ ಕೈಯಲ್ಲಿ ಪುಶ್-ಅಪ್ಸ್ ತೆಗೆದಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ.
ತಮಿಳುನಾಡು ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ ಆಗಿದೆ. ಹೀಗಾಗಿ, ರಾಹುಲ್ ಗಾಂಧಿ ತಮಿಳುನಾಡಿಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ಇಂದು ಅವರು ತಮಿಳುನಾಡಿನ ತಿರುನಲ್ವೇಲಿಯ ಸೇಂಟ್ ಕ್ಸೇವಿಯರ್ಸ್ ಕಾಲೇಜಿನ ವಿದ್ಯಾರ್ಥಿ ಮತ್ತು ಶಿಕ್ಷಕರ ಜತೆ ಸಂವಾದ ನಡೆಸಿದ್ದಾರೆ. ಈ ವೇಳೆ 10 ನೇ ತರಗಿ ವಿದ್ಯಾರ್ಥಿಯೋರ್ವ ಪುಶ್-ಅಪ್ಸ್ ಚಾಲೆಂಜ್ ಹಾಕಿದ್ದಾರೆ. ಇದನ್ನು ರಾಹುಲ್ ಗಾಂಧಿ ಒಪ್ಪಿಕೊಂಡಿದ್ದಾರೆ.

ಜನರ ಮಧ್ಯೆಯೇ ರಾಹುಲ್ ಗಾಂಧಿ ಹಾಗೂ 10ನೇ ತರಗತಿ ವಿದ್ಯಾರ್ಥಿ ಪುಶ್-ಅಪ್ ನಡೆಸಿದ್ದಾರೆ. ವಿದ್ಯಾರ್ಥಿ ತೆಗೆದಷ್ಟು ಡಿಪ್ಸ್ ತೆಗೆಯೋಕೆ ರಾಹುಲ್ ಗಾಂಧಿ ಬಳಿ ಸಾಧ್ಯವಾಗಿಲ್ಲ. ಇದಾದ ಬೆನ್ನಲ್ಲೇ ರಾಹುಲ್ ಗಾಂಧಿ ಒಂದೇ ಕೈ ಮೂಲಕ ಪುಶ್-ಅಪ್ಸ್ ತೆಗೆದು ಅಚ್ಚರಿ ಮೂಡಿಸಿದ್ದಾರೆ. ಎರಡೂ ಕೈಯಲ್ಲಾದರೆ ಡಿಪ್ಸ್ ತೆಗೆಯೋದು ಸುಲಭ. ಆದರೆ, ಒಂದೇ ಕೈಯಲ್ಲಿ ಡಿಪ್ಸ್ ತೆಗೆಯುವುದು ಕಷ್ಟ.
ಏನಿದು ಸಿಕ್ಸ್ ಪ್ಯಾಕ್ ಸಮಾಚಾರ?
ಇತ್ತೀಚೆಗೆ ರಾಹುಲ್ ಗಾಂಧಿ ಕೇರಳಕ್ಕೆ ತೆರಳಿದ್ದರು. ಈ ವೇಳೆ ಅವರು ಸಮುದ್ರಕ್ಕೆ ತೆರಳಿ ಮೀನುಗಾರರೊಂದಿಗೆ ಈಜಿದ್ದಾರೆ. ಈ ವೇಳೆ ಅವರ ಆ್ಯಬ್ಸ್ ಫೋಟೋ ವೈರಲ್ ಆಗಿದೆ. ಈ ಫೋಟೋಗೆ ಅನೇಕರು ಕಮೆಂಟ್ ಮಾಡಿದ್ದು, ಫಿಟ್ನೆಸ್ ಟಿಪ್ಸ್ ಕೇಳಿದ್ದಾರೆ. ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಘೋಷಿಸಿದ ಲಾಕ್ಡೌನ್ನಿಂದ ಇಡೀ ದೇಶ ಸ್ತಬ್ಧವಾಗಿತ್ತು. ಹೀಗಾಗಿ, ಜಿಮ್ಗಳು ಬಂದ್ ಆಗಿದ್ದವು. ಇದೇ ಕಾರಣಕ್ಕೆ ಅನೇಕರು ಫಿಟ್ನೆಸ್ ಕಳೆದುಕೊಂಡಿದ್ದರು. ಆದರೆ, ಈ ಸಂದರ್ಭದಲ್ಲೂ ರಾಹುಲ್ ಗಾಂಧಿ ಜಿಮ್ ಬಿಟ್ಟಿಲ್ಲ ಎನ್ನುವುದು ಈ ಫೋಟೋ ಮೂಲಕ ಸಾಬೀತಾಗಿತ್ತು.
#WATCH: Congress leader Rahul Gandhi doing push-ups and 'Aikido' with students of St. Joseph's Matriculation Hr. Sec. School in Mulagumoodubn, Tamil Nadu pic.twitter.com/qbc8OzI1HE
— ANI (@ANI) March 1, 2021
Congress leader Rahul Gandhi, in Tamil Nadu ahead of the state elections, is trying to connect with locals with his fierce poll speeches, one-on-one interactions and also an apparent demonstration of his physical strength.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am