ಬ್ರೇಕಿಂಗ್ ನ್ಯೂಸ್
03-03-21 12:01 pm Headline Karnataka News Network ದೇಶ - ವಿದೇಶ
ಮುಂಬೈ, ಮಾ 3: ಕೋವಿಡ್-19 ವಿರುದ್ಧ ಲಸಿಕೆಯ ಎರಡನೇ ಡೋಸ್ ಪಡೆದ ಸ್ವಲ್ಪ ಹೊತ್ತಿನ ಬಳಿಕ ಮಹಾರಾಷ್ಟ್ರದ 45ರ ವಯಸ್ಸಿನ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.
ವೈದ್ಯರೊಬ್ಬರ ಬಳಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಭಿವಂಡಿ ನಿವಾಸಿ ಸುಖದೇವ್ ಕಿರ್ದಾತ್ ಎರಡನೇ ಡೋಸ್ ಪಡೆದ ಬಳಿಕ ಸುಮಾರು 15 ನಿಮಿಷಗಳ ಕಾಲ ನಿಗಾ ಕೊಠಡಿಯಲ್ಲಿ ಇದ್ದರು.
ಅಸ್ವಸ್ಥರಾದ ಸುಖದೇವ್ ಅವರನ್ನು ಹತ್ತಿರದ ಇಂದಿರಾ ಗಾಂಧಿ ಸ್ಮಾರಕ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆದರೆ ಅಲ್ಲಿ ಅವರು ಮೃತಪಟ್ಟರೆಂದು ಘೋಷಿಸಲಾಯಿತು.

ಸಾವಿಗೆ ಕಾರಣ ಏನೆಂದು ಇನ್ನೂ ಗೊತ್ತಾಗಿಲ್ಲ. ಮರಣೋತ್ತರ ಪರೀಕ್ಷೆಯಲ್ಲಿ ಇದು ಸ್ಪಷ್ಟವಾಗಲಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಆರೋಗ್ಯ ಕಾರ್ಯಕರ್ತರೆಂಬ ನೆಲೆಯಲ್ಲಿ ಸುಖದೇವ್ ಜನವರಿ 28ರಂದು ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದಿದ್ದರು.
“ಅವರು ಒಂದು ತಿಂಗಳ ಹಿಂದೆ ತನ್ನ ಮೊದಲ ಡೋಸ್ ಪಡೆದಿದ್ದರು. ಯಾವುದೇ ಸಮಸ್ಯೆಯಾಗಿರಲಿಲ್ಲ. ಎರಡನೇ ಡೋಸ್ ಕೊಡುವ ಮೊದಲು ಸಂಪೂರ್ಣ ವೈದ್ಯಕೀಯ ತಪಾಸಣೆ ಮಾಡಲಾಗಿತ್ತು. ಅವರಿಗೆ ಹಲವು ವರ್ಷಗಳಿಂದ ರಕ್ತದೊತ್ತಡ ಇರುವುದು ನಮಗೆ ಗೊತ್ತಾಗಿದೆ. ಕಾಲಿನಲ್ಲಿ ದಪ್ಪವಾಗುವ ಲಕ್ಷಣಗಳಿದ್ದವು. ಇಲ್ಲಿ ಅವರ ಬಿಪಿ ಹಾಗೂ ಆಕ್ಸಿಜನ್ ಸಾಮಾನ್ಯವಾಗಿತ್ತು. ಅವರ ಸಾವಿಗೆ ಕಾರಣ ಏನೆಂದು ಹೇಳಲು ಕಷ್ಟವಾಗುತ್ತದೆ. ಮರಣೋತ್ತರ ವರದಿಯಿಂದಲೇ ನಿಜಾಂಶ ಗೊತ್ತಾಗಬೇಕಾಗಿದೆ ಎಂದು ಆಸ್ಪತ್ರೆಯ ವೈದ್ಯ ಕೆ.ಆರ್. ಖರತ್ ತಿಳಿಸಿದ್ದಾರೆ.
60ಕ್ಕಿಂತ ಹೆಚ್ಚು ವಯಸ್ಸಿನ ಹಾಗೂ ಇತರ ಕಾಯಿಲೆಯಿರುವ 45ಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಮಾರ್ಚ್ 1ರಿಂದ ದೇಶಾದ್ಯಂತ 2ನೇ ಹಂತದ ಲಸಿಕೆ ನೀಡಿಕೆ ಅಭಿಯಾನ ಆರಂಭವಾಗಿದೆ. ಆರೋಗ್ಯ ಕಾರ್ಯಕರ್ತರು, ಸ್ವಚ್ಚತಾ ಕರ್ಮಿಗಳು ಮೊದಲ ಸುತ್ತಿನಲ್ಲಿ ಡೋಸ್ ಗಳನ್ನು ಪಡೆದಿದ್ದರು.
A 45-year-old man in Maharashtra died yesterday, shortly after taking a second dose of the anti-Covid vaccine.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am