ಬ್ರೇಕಿಂಗ್ ನ್ಯೂಸ್
03-03-21 11:19 pm Headline Karnataka News Network ದೇಶ - ವಿದೇಶ
ಚೆನ್ನೈ, ಮಾ.3: ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾಗಿ ತಮಿಳುನಾಡಿನಲ್ಲಿ ಸಂಚಲನ ಎಬ್ಬಿಸಿದ್ದ ಶಶಿಕಲಾ ನಟರಾಜನ್ ಸಕ್ರಿಯ ರಾಜಕೀಯದಿಂದ ದಿಢೀರ್ ನಿವೃತ್ತಿ ಹೊಂದುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.
ಅಷ್ಟೇ ಅಲ್ಲದೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಪಕ್ಷವನ್ನ ಸೋಲಿಸಿ ಎಐಎಡಿಎಂಕೆ ಪಕ್ಷವನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ಅಮ್ಮ ಜಯಲಲಿತಾ ಅವರ ಸುವರ್ಣ ಆಡಳಿತಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ನಾನು ಎಂದೂ ಸಹ ಯಾವುದೇ ಅಧಿಕಾರ ಸ್ಥಾನದ ಹಿಂದೆ ಬಿದ್ದಿಲ್ಲ. ಜಯಲಲಿತಾ ಬದುಕಿದ್ದಾಗಲೂ ಅಧಿಕಾರದ ಆಸೆ ಪಟ್ಟಿರಲಿಲ್ಲ. ಅವರು ಇಲ್ಲದಾಗಲೂ ಅಧಿಕಾರಕ್ಕಾಗಿ ಆಸೆ ಪಡುವುದಿಲ್ಲ. ಆದರೆ, ನಾನು ರಾಜಕೀಯ ತೊರೆಯುತ್ತಿದ್ದೇನೆ. ನಮ್ಮ ಪಕ್ಷ ಗೆದ್ದು ಜಯಲಲಿತಾ ಅವರ ಪರಂಪರೆಯನ್ನ ಮುಂದುವರೆಸಲಿ ಎಂದು ಇದೇ ವೇಳೆ ತಮ್ಮ ಪ್ರಕಟಣೆಯಲ್ಲಿ ಎಐಎಡಿಎಂಕೆಗೆ ಹಾರೈಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಶಿಕಲಾ ಇತ್ತೀಚೆಗಷ್ಟೇ ಬೆಂಗಳೂರಿನ ಜೈಲಿನಿಂದ ಬಿಡುಗಡೆಯಾಗಿ ಊರಿಗೆ ವಾಪಸ್ಸಾಗಿದ್ದರು. ಶಶಿಕಲಾ ಬಿಡುಗಡೆಯಿಂದಾಗಿ ತಮಿಳುನಾಡಿನ ರಾಜಕೀಯ ಚಿತ್ರಣ ಬದಲಾಗಲಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ದಿಢೀರ್ ನಿವೃತ್ತಿ ಘೋಷಿಸುವ ಮೂಲಕ ಶಶಿಕಲಾ ತಮಿಳುನಾಡು ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.
Expelled AIADMK leader V K Sasikala on Wednesday stated that she is quitting public life while asking the AIADMK cadre to stand united and ensure DMK is defeated in forthcoming Assembly elections.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am